ಮುಂಬಯಿ: ಮಹಿಳೆಯ ಬೆನ್ನಿಗೆ ಇರಿದು ಗಾಯಗೊಳಿಸಿದ ಅಪರಿಚಿತ ತರುಣ
Team Udayavani, Jan 6, 2017, 10:49 AM IST
ಮುಂಬಯಿ : ಮುಂಬಯಿಯ ಮಹಾಲಕ್ಷ್ಮೀ ರೇಸ್ ಕೋರ್ಸ್ ಸಮೀಪ ಅಪರಿಚಿತ ತರುಣನೋರ್ವ ಮಹಿಳೆಯೊಬ್ಬಳನ್ನು ಹರಿತವಾದ ಆಯುಧದಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಿನ್ನೆ ಗುರುವಾರ ತಡ ರಾತ್ರಿ ನಡೆದಿದೆ.
28ರ ಹರೆಯದ ಮಹಿಳೆಯು ತನ್ನ ಗೆಳೆಯನಿಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದಾಗ ಆಕೆಯ ಮೇಲೆ ಈ ಅಛಾನಕ್ ದಾಳಿ ನಡೆದಿದೆ.
ಅಪರಿಚಿತ ವ್ಯಕ್ತಿಯು ಮಹಿಳೆಯ ಬೆನ್ನಿಗೆ ಇರಿದಿದ್ದಾನೆ. ಪರಿಣಾಮವಾಗಿ ಆಕೆ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾಳೆ. ಆ ಹೊತ್ತಿಗೆ ಅಲ್ಲಿಗೆ ಬಂದ ಆಕೆಯ ಗೆಳೆಯನು ಆಕೆಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಒಯ್ದಿದ್ದಾನೆ.
ಸ್ಥಳೀಯ ಪೊಲೀಸರು ಈ ಪ್ರಕರಣದಲ್ಲಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಮತ್ತು ದಾಳಿಕೋರನಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಮಹಿಳೆಯ ಮೇಲೆ ದಾಳಿಗೈದು ಇರಿದ ತರುಣನು ಆಕೆಗೆ ಪರಿಚಿತತನಿರುವ ವ್ಯಕ್ತಿಯೇ ಅಲ್ಲವೇ ಎಂಬುದು ತತ್ಕ್ಷಣಕ್ಕೆ ಗೊತ್ತಾಗಿಲ್ಲ; ಮಾತ್ರವಲ್ಲದೆ ಈ ದಾಳಿಯ ಹಿಂದಿನ ಉದ್ದೇಶವೂ ಗೊತ್ತಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
Amit Shah ನಕಲಿ ವೀಡಿಯೋ ಕೇಸ್: ಕಾಂಗ್ರೆಸ್ ಮುಖಂಡನ ಸೆರೆ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು