ಲೋಕಾಯುಕ್ತರಾಗಿ ನ್ಯಾ.ವಿಶ್ವನಾಥ ಶೆಟ್ಟಿ ಆಯ್ಕೆ ಬಹುತೇಕ ಖಚಿತ: ಸಿಎಂ
Team Udayavani, Jan 9, 2017, 4:20 PM IST
ಬೆಂಗಳೂರು: ಹಲವು ತಿಂಗಳುಗಳಿಂದ ಖಾಲಿ ಉಳಿದಿರುವ ಲೋಕಾಯುಕ್ತ ಹುದ್ದೆಗೆ ಮೂವರು ನ್ಯಾಯಮೂರ್ತಿಗಳ ಹೆಸರು ಪ್ರಸ್ತಾಪವಾಗಿದೆ. ಅದರಲ್ಲಿ ನ್ಯಾ. ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.
ಲೋಕಾಯುಕ್ತರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆಯಲ್ಲಿ ನ್ಯಾ.ವಿಶ್ವನಾಥ ಶೆಟ್ಟಿ ಹೆಸರನ್ನು ಅಂತಿಮಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯಪಾಲರಿಗೆ ಶೆಟ್ಟಿ ಅವರ ಹೆಸರು ಶಿಫಾರಸು ಮಾಡಲು ನಾನೂ ಒಪ್ಪಿದ್ದೇನೆ. ಶೀಘ್ರವೇ ಅವರ ಹೆಸರನ್ನು ಸರ್ಕಾರ ಶೀಘ್ರವೇ ರಾಜ್ಯಪಾಲರಿಗೆ ಕಳುಹಿಸಲಿದೆ ಎಂದು ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತ ಹೇಳಿದರು.
ಈ ಹಿಂದೆ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ರಾಜ್ಯ ಸರ್ಕಾರ 3 ಬಾರಿ ಶಿಫಾರಸು ಮಾಡಿದ್ದರೂ ಕೂಡಾ ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಇಂದು ನಡೆದ ಸಭೆಯಲ್ಲೂ ಮೂವರು ನ್ಯಾ. ಹೆಸರು ಪ್ರಸ್ತಾಪವಾಗಿದ್ದು, ಅಂತಿಮವಾಗಿ ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸುವ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್