ಜಲ್ಲಿಕಟ್ಟು ನಿಷೇಧಿಸುವುದಾದ್ರೆ, ಬಿರಿಯಾನಿನೂ ನಿಷೇಧಿಸಿ; ಕಮಲ್
Team Udayavani, Jan 9, 2017, 7:03 PM IST
ಚೆನ್ನೈ: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಜಲ್ಲಿಕಟ್ಟು ನಿಷೇಧ ಕ್ರಮವನ್ನು ಕಟುವಾಗಿ ಟೀಕಿಸಿರುವ ದಕ್ಷಿಣ ಭಾರತದ ಪ್ರಸಿದ್ಧ ನಟ, ಖ್ಯಾತ ನಿರ್ದೇಶಕ ಕಮಲ್ ಹಾಸನ್, ಜಲ್ಲಿಕಟ್ಟು ಹಿಂಸೆಯ ಕ್ರೀಡೆ ಎಂದು ಹೇಳುವವರು ಬಿರಿಯಾನಿಯನ್ನೂ ನಿಷೇಧಿಸಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಚೆನ್ನೈನಲ್ಲಿ ಇಂಡಿಯಾ ಟುಡೇ ವತಿಯಿಂದ ನಡೆದ ಕನ್ ಕ್ಲೇವ್ ನಲ್ಲಿನ ಸಂದರ್ಶನದಲ್ಲಿ ಕಮಲ್ ಹಾಸನ್, ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆಯಾಗಿದೆ, ಒಂದು ವೇಳೆ ನಿಮಗೆ ಜಲ್ಲಿಕಟ್ಟು ನಿಷೇಧಿಸಲೇಬೇಕು ಅಂತಾದ್ರೆ, ಬಿರಿಯಾನಿಯನ್ನೂ ನಿಷೇಧಿಸಬೇಕು. ನಾನು ಜಲ್ಲಿಕಟ್ಟು ಕ್ರೀಡೆಯ ದೊಡ್ಡ ಅಭಿಮಾನಿ. ನಾನು ಹಲವಾರು ಬಾರಿ ಜಲ್ಲಿಕಟ್ಟು ಕ್ರೀಡೆ ಆಡಿರುವುದಾಗಿ ಹೇಳಿದರು.
ಜಲ್ಲಿಕಟ್ಟು ಹಿಂಸೆಯ ಕ್ರೀಡೆಯಾಗಿದ್ದು ಅದನ್ನು ನಿಷೇಧಿಸಬೇಕೆಂದು ಕೋರಿ ಪ್ರಾಣಿದಯಾ ಸಂಘ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರ ಹಿನ್ನೆಲೆಯಲ್ಲಿ 2014ರಲ್ಲಿ ಸುಪ್ರೀಂಕೋರ್ಟ್ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿತ್ತು.
ಏತನ್ಮಧ್ಯೆ ಪೊಂಗಲ್ ಹಬ್ಬದ ಆಚರಣೆ ಸಮೀಪಿಸುತ್ತಿದ್ದು, ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧವನ್ನು ರದ್ದುಪಡಿಸುವಂತೆ ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
MUST WATCH
ಹೊಸ ಸೇರ್ಪಡೆ
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ