3 ದಿನಗಳ ಪ್ರವಾಸಿ ಭಾರತೀಯ ದಿವಸಕ್ಕೆ ತೆರೆ


Team Udayavani, Jan 10, 2017, 3:50 AM IST

pravasi.jpg

– ರಾಷ್ಟ್ರಪತಿಗಳಿಂದ ಸಮಾರೋಪ ಭಾಷಣ
– 30 ಅನಿವಾಸಿ ಭಾರತೀಯ ಸಾಧಕರಿಗೆ ಸನ್ಮಾನ

ಬೆಂಗಳೂರು: ರಾಜಧಾನಿಯಲ್ಲಿ ನಡೆದ ಮೂರು ದಿನಗಳ ಪ್ರವಾಸಿ ಭಾರತೀಯ ದಿವಸ ಸಮಾವೇಶಕ್ಕೆ ಸೋಮವಾರ ತೆರೆ ಬಿದ್ದಿದ್ದು, ಜಗತ್ತಿನ ವಿವಿಧೆಡೆ ನೆಲೆಸಿರುವ ಅನಿವಾಸಿ ಭಾರತಿಯರ ಸಮಾಗಮಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಹೊರವಲಯದ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಶನಿವಾರ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ವಿಜಯ್‌ ಗೋಯೆಲ್‌ ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ.ಸಿಂಗ್‌ ಅವರಿಂದ ಚಾಲನೆ ಪಡೆದುಕೊಂಡ ಪ್ರವಾಸಿ ಭಾರತೀಯ ದಿವಸ ಸಮಾವೇಶ, ಸೋಮವಾರ ಸಂಜೆ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಸಮಾರೋಪ ಭಾಷಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 30 ಅನಿವಾಸಿ ಭಾರತೀಯರ ಸನ್ಮಾನದೊಂದಿಗೆ ಮುಕ್ತಾಯ ಕಂಡಿತು.

ಎರಡನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಹಿತ ಸಮಾವೇಶದ ಮೂರೂ ದಿನ ನಡೆದ ವಿವಿಧ ಗೋಷ್ಠಿ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲರೂ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿ, ಭಾರತದ ಸಮಗ್ರ ಅಭಿವೃದ್ಧಿಯಲ್ಲಿ ನೀವೂ ಪಾಲುದಾರರಾಗಿ ಎಂದು ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರಂತೂ |ನಾನು ಪಾಸ್‌ಪೋರ್ಟ್‌ ಕಲರ್‌ ನೋಡಿ ಅನಿವಾಸಿ ಭಾರತೀಯರನ್ನು ಗುರುತಿಸುವುದಿಲ್ಲ, ಬದಲಿಗೆ ರಕ್ತ ಸಂಬಂಧಿಕರಂತೆ ನೋಡುತ್ತೇನೆ. ಜಗತ್ತಿನ ಯಾವುದೇ ಭಾಗದಲ್ಲಿ ನೀವಿದ್ದರೂ ನಿಮ್ಮ ನೋವು ನಲಿವುಗಳಿಗೆ ನನ್ನ ಸರ್ಕಾರ ದಿನದ 24 ಗಂಟೆ ಸಹಾಯವಾಣಿಯಂತೆ ಕೆಲಸ ಮಾಡಲಿದೆ ಎಂದು ಅನಿವಾಸಿ ಭಾರತೀಯ ಸಮುದಾಯದಲ್ಲಿ ವಿಶ್ವಾಸ ಮೂಡಿಸಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ಅನಿವಾಸಿ ಭಾರತೀಯ ಸಮುದಾಯವು ಸಹ ತಾವಿರುವ ಕಡೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗೋಷ್ಠಿಗಳಲ್ಲಿ ವಿವರಿಸಿ ಕೇಂದ್ರ ಸರ್ಕಾರದಿಂದ ಅಗಬೇಕಿರುವ ಕ್ರಮಗಳ ಬಗ್ಗೆ ಪ್ರಸ್ತಾಪಿಸಿತು. ಅರಬ್‌ ರಾಷ್ಟ್ರಗಳಲ್ಲಿ ಉದ್ಯೋಗ ಕಡಿತ, ಪಾಸ್‌ಪೋರ್ಟ್‌ ಮತ್ತು ವೀಸಾ ಸಮಸ್ಯೆ, ಪಿಐಒ ಕಾರ್ಡ್‌ನಿಂದ ಐಓಸಿ ಕಾರ್ಡ್‌ಗೆ ಪರಿವರ್ತನೆ, ಬಂಡವಾಳ ಹೂಡಿಕೆಗೆ ಇರುವ ಅಡೆ-ತಡೆ, ನಿಯಮಾವಳಿ ಅಡ್ಡಿ, ಭಾರತದಲ್ಲಿ ವಿದ್ಯಾಭ್ಯಾಸಕ್ಕೆ ಬರುವ ತಮ್ಮ ಮಕ್ಕಳು ಎದುರಿಸುವ ಸಮಸ್ಯೆ, ತಮ್ಮ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿನ ಸೇವೆ ಮತ್ತು ಅಗತ್ಯತೆ ಬಗ್ಗೆ ವಿವರಿಸಿದರು.

ಒಟ್ಟಾರೆ ಮೂರು ದಿನಗಳಲ್ಲಿ 14ಕ್ಕೂ ಹೆಚ್ಚು ಗೋಷ್ಠಿಗಳು ನಡೆದವು. ಅನಾರೋಗ್ಯ ಕಾರಣ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಸಮಾವೇಶಕ್ಕೆ ಗೈರಾದರೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ. ಸಿಂಗ್‌ ಮೂರು ದಿನಗಳ ಕಾಲ ಸಮಾವೇಶದ ಸ್ಥಳದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಹಾಜರಿದ್ದು ಉಸ್ತುವಾರಿ ವಹಿಸಿದ್ದರು.

ಪ್ರವಾಸೋದ್ಯಮ ಮತ್ತು ಬಂಡವಾಳ ಹೂಡಿಕೆಯಲ್ಲಿ ತಮ್ಮ ತಮ್ಮ ರಾಜ್ಯಗಳಲ್ಲಿರುವ ಅವಕಾಶಗಳ ಬಗ್ಗೆ ಐವರು ಮುಖ್ಯಮಂತ್ರಿಗಳು ಸಂವಾದದಲ್ಲಿ ಭಾಗವಹಿಸಿ ಬಂಡವಾಳ ಹೂಡಿಕೆಗೆ ಇರುವ ವಿಪುಲ ಅವಕಾಶ ಮತ್ತು ಸರ್ಕಾರದ ವತಿಯಿಂದ ನೀಡಲಾಗುವ ರಿಯಾಯಿತಿ, ವಿನಾಯಿತಿಗಳ ವಿವರ ನೀಡಿ ಉದ್ಯಮಿಗಳಿಗೆ ಅಹ್ವಾನ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನ ಹಾಗೂ ಮೂರನೇ ದಿನದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಭಾಗವಹಿಸಿದ್ದರು. ಉಳಿದಂತೆ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಮೂರೂ ದಿನದ ಸಮಾವೇಶದ ಹೊಣೆಗಾರಿಕೆ ನಿಭಾಯಿಸಿದರು. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ ಹೊರತುಪಡಿಸಿದರೆ ರಾಜ್ಯ ಸಚಿವ ಸಂಪುಟದ ಇತರೆ ಯಾವ ಸಚಿವರೂ ಸಮಾವೇಶದತ್ತ ಸುಳಿಯಲೇ ಇಲ್ಲ.

ಸಂತಸ:
ಸಮಾವೇಶ ಕುರಿತು ಅಂತಿಮ ದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ವಿ.ಕೆ.ಸಿಂಗ್‌, ಮೂರು ದಿನಗಳ ಸಮಾವೇಶ ಯಶಸ್ವಿಯಾಗಿದೆ. ಅನಿವಾಸಿ ಭಾರತೀಯ ಸಮುದಾಯದಲ್ಲಿ ಭರವಸೆ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಸಮಾವೇಶದ ಅತಿಥ್ಯ ವಹಿಸಿದ ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ವಿಶ್ವದೆಲ್ಲೆಡೆ 3.17 ಕೋಟಿ ಭಾರತೀಯರು ನೆಲೆಸಿದ್ದು, ಆ ಪೈಕಿ 1.78 ಕೋಟಿ ಮಂದಿ ಅನಿವಾಸಿ ಭಾರತೀಯರಾಗಿದ್ದಾರೆ. ಈ ಬಾರಿಯ ಪ್ರವಾಸಿ ಭಾರತೀಯ ದಿವಸ ಸಮಾವೇಶಕ್ಕೆ 2 ಸಾವಿರ ಅನಿವಾಸಿ ಭಾರತೀಯರು ಸೇರಿ 7000 ಪ್ರತಿನಿಧಿಗಳು ಆಗಮಿಸಿದ್ದರು. 72 ರಾಷ್ಟ್ರಗಳು ಹಾಗೂ 24 ರಾಜ್ಯಗಳಿಂದ ಪ್ರತಿನಿಧಿಗಳು ಭಾಗಿಯಾಗಿದ್ದರು. ಇದೊಂದು ಯಶಸ್ವಿ ಸಮ್ಮೇಳನವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.