ಗೌರಿಶಂಕರ ಶ್ರೀ ಲಿಂಗೈಕ್ಯ: ಸಿದ್ದಗಂಗಾ ಮಠಕ್ಕೆ ಭದ್ರತೆ ನೀಡಲು ಮನವಿ
Team Udayavani, Jan 11, 2017, 11:25 AM IST
ಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳುತ್ತಿದ್ದ ತುಮಕೂರಿನ ಗೌರಿಶಂಕರ ಶ್ರೀಗಳು ಬುಧವಾರ ಕೆಂಪೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ಪ್ರಾಯವಾಗಿತ್ತು.
ಸಿದ್ಧಗಂಗಾ ಮಠದಲ್ಲಿದ್ದ ಶ್ರೀಗಳು ಉತ್ತರಾಧಿಕಾರಿಯಾಗಬೇಕಿತ್ತು, ಆದರೆ ವೈಯಕ್ತಿಕ ಕಾರಣಗಳಿಂದ 1988 ರಲ್ಲಿ ಮಠದಿಂದ ಹೋರಹಾಕಲಾಗಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲನ್ನೂ ಏರಿತ್ತು.ಬಳಿಕ ಗೌರಿಶಂಕರ ಶ್ರೀಗಳು ಮಠಕ್ಕೆ ಬಾರದಂತೆ ತಡೆಯನ್ನೂ ವಿಧಿಸಲಾಗಿತ್ತು.
6 ತಿಂಗಳ ಹಿಂದೆ ಕೋರ್ಟ್ ಅನುಮತಿ ಪಡೆತು ಮಠಕ್ಕೆ ಮರಲು ಮುಂದಾಗಿದ್ದ ಗೌರಿಶಂಕರ ಶ್ರೀಗಳ ಭೇಟಿಗೆ ಶಿವಕುಮಾರ ಶ್ರೀಗಳು ನಿರಾಕರಿಸಿದ್ದರು.
ಪಾರ್ಥೀವ ಶರೀರವನ್ನು ಹುಟ್ಟೂರಾದ ಗುಬ್ಬಿ ತಾಲೂಕಿನ ಸೀತಕಲ್ಲಿಗೆ ಕೊಂಡೊಯ್ದು ಬಳಿಕ ಕ್ಯಾತ್ಸಂದ್ರ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಗೊಲ್ಲ ಹಳ್ಳಿಯಲ್ಲಿರುವ ಜಂಗಮಮಠದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಭಕ್ತರು ತಿಳಿಸಿದ್ದಾರೆ.
ಮಠಕ್ಕೆ ಭದ್ರತೆ ನೀಡಿ
ಗೌರಿಶಂಕರ ಶ್ರೀಗಳು ಲಿಂಗೈಕ್ಯರಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಠಕ್ಕೆ ಭದ್ರತೆ ನೀಡಲು ಕೋರಿ ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಅವರು ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮಠಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತರಲು ಅವಕಾಶ ನೀಡಬಾರದು ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.
ಶಿವಕುಮಾರ ಶ್ರೀಗಳ ಸಂತಾಪ
ಗೌರಿಶಂಕರ ಶ್ರೀಗಳ ನಿಧನಕ್ಕೆ ಶಿವಕುಮಾರ ಶ್ರೀಗಳು ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ. ಗೌರಿಶಂಕರ ಶ್ರೀಗಳನ್ನು ವಿವಿಧ ಕಾರಣಗಳಿಗಾಗಿ ಮಠದಿಂದ ವಜಾ ಮಾಡಲಾಗಿತ್ತು. ಅವರಿಗೂ ಮಠಕ್ಕೆ ಯಾವುದೇ ಸಂಬಂಧವಿರಲಿಲ್ಲ ಹೀಗಾಗಿ ಪಾರ್ಥೀವ ಶರೀರವನ್ನು ಮಠಕ್ಕೆ ತರಬೇಡಿ ಎಂದು ಸಂತಾಪ ಸೂಚಕ ಪತ್ರದಲ್ಲಿ ಬರೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್