ಬಾಗಲಕೋಟೆ: ಬಾಲಕಿಯನ್ನು ಅತ್ಯಾಚಾರಗೈದು ಸುಟ್ಟು ಕೊಂದ ಕಾಮುಕ
Team Udayavani, Jan 12, 2017, 11:14 AM IST
ಬಾಗಲಕೋಟೆ: ಇಲ್ಲಿನ ಮುಧೋಳದ ಲಮಾಣಿ ತಾಂಡವೊಂದರಲ್ಲಿ ಕಾಮುಕನೊಬ್ಬ 16 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು ಬಳಿಕ ಸಿಮೇ ಎಣ್ಣೆ ಸುರಿದು ಸುಟ್ಟು ಬರ್ಬರವಾಗಿ ಹತ್ಯೆಗೈದ ಅಮಾನುಷ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಕೃತ್ಯ ಎಸಗಿದ ಲೋಕೇಶ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕೇಶ್ ತಾಂಡದಲ್ಲಿರುವ ತನ್ನದೇ ಸಮುದಾಯದ ಬಾಲಕಿಯ ಮನೆಗೆ ನುಗ್ಗಿ ಹೇಯ ಕೃತ್ಯ ನಡೆಸಿ ಅಮಾನವೀಯವಾಗಿ ಸುಟ್ಟು ಕೊಲೆಗೈದಿದ್ದಾನೆ.
ಘಟನೆ ನಡೆಯುವ ವೇಳೆ ಮನೆಯಲ್ಲಿ ಬಾಲಕಿ ಮತ್ತು ಆಕೆಯ ತಂಗಿ ಇಬ್ಬರೆ ಇದ್ದರು ಎಂದು ಹೇಳಲಾಗಿದ್ದು, ಹೊಂಚು ಹಾಕಿ ಲೋಕೇಶ್ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.
ತಾಂಡಾದ ಜನರು ಘಟನೆಯಿಂದ ದಿಗ್ಭ್ರಾಂತರಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಲು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜನರ ರೋದನ ಮುಗಿಲು ಮುಟ್ಟಿದೆ.
ಲೋಕಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು