ಅಡಿಕೆ ಬೆಂಬಲ ಬೆಲೆ ಅವಧಿ ವಿಸ್ತರಣೆಗೆ ಆದೇಶ: ನಿರ್ಮಲಾ ಸೀತಾರಾಮನ್‌


Team Udayavani, Jan 13, 2017, 3:45 AM IST

adike.jpg

ಪುತ್ತೂರು: ಕೆಂಪಡಿಕೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ನೀಡಿದ ಆದೇಶ ಡಿಸೆಂಬರ್‌ 31ಕ್ಕೆ ಮುಗಿದಿದ್ದು, ಅದನ್ನು ವಿಸ್ತರಣೆ ಮಾಡಲು ತತ್‌ಕ್ಷಣ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಪತ್ರಕರ್ತರ ಜತೆ ಮಾತನಾಡಿದ ಅವರು, ಬೆಂಬಲ ಬೆಲೆ ವಿಸ್ತರಣೆಗೆ ಸಂಬಂಧಿಸಿ ಎರಡು ದಿನಗಳ ಹಿಂದೆ ರಾಜ್ಯ ಸರಕಾರದಿಂದ ಬೇಡಿಕೆ ಸಲ್ಲಿಕೆಯಾಗಿದ್ದರೂ ಕೇಂದ್ರ ಈ ಮೊದಲೇ ಅವಧಿ ವಿಸ್ತರಣೆಗೆ ನಿರ್ಧರಿಸಿತ್ತು. ಅವಧಿ ವಿಸ್ತರಣೆ ಎಷ್ಟರ ತನಕ ಎಂದು ನಿಗದಿ ಮಾಡಿ, ತತ್‌ಕ್ಷಣ ಆದೇಶ ಹೊರಡಿಸಲಾಗುವುದು ಎಂದರು.

ವಾಣಿಜ್ಯ ಇಲಾಖೆ ಅಡಿಕೆ ಬೆಳೆಗಾರರ ಪರವಾಗಿ ನಿರ್ದಿಷ್ಟ ಕೆಲಸವನ್ನಷ್ಟೇ ಮಾಡಬಹುದು. ವಾಣಿಜ್ಯ ಇಲಾಖೆ ಎಲ್ಲ ಕೆಲಸವನ್ನು ಸ್ವಯಂಪ್ರೇರಿತವಾಗಿ, ಮಾಡಲು ಸಾಧ್ಯವಿಲ್ಲ. ಇದಕ್ಕೆ ಸಂಬಂಧಿಸಿ ಒಟ್ಟು 9 ಇಲಾಖೆಗಳಿವೆ. ಆದರೂ ಅಡಿಕೆ ಬೆಳೆಗಾರರಿಗೆ ಸಹಾಯ ಮಾಡುವ ಸಂಬಂಧ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಕೃಷಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಅಡಿಯಲ್ಲಿ ಅಡಿಕೆ ಬೆಳೆಗೆ ನೆರವು ನೀಡಬೇಕು ಎಂದು ಕರ್ನಾಟಕದ ಸಂಸದರು ಮನವಿ ಸಲ್ಲಿಸಿದ್ದರು. ರೈತ ಸಂಸ್ಥೆ ಕ್ಯಾಂಪ್ಕೋ ಕೂಡ ಬೇಡಿಕೆ ಇಟ್ಟಿತ್ತು. ಸುದೀರ್ಘ‌ ಪ್ರಕ್ರಿಯೆಯ ಅನಂತರ ಕನಿಷ್ಠ ಬೆಂಬಲ ಬೆಲೆ ನೀಡುವ ನಿರ್ಧಾರಕ್ಕೆ ಬರಲಾಯಿತು ಎಂದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಈ ಬಗ್ಗೆ ಮನವಿ ಮಾಡಿದ್ದರು. ಅದೇ ದಿನ ನಾನು ಆದೇಶದ ಪ್ರತಿಯನ್ನು ಅವರಿಗೆ ನೀಡಿದ್ದೆ. ದುರದೃಷ್ಟವಶಾತ್‌ ಬೆಂಬಲ ಬೆಲೆ ಯೋಜನೆ ಅವಧಿ ಡಿಸೆಂಬರ್‌ 31ಕ್ಕೆ ಮುಕ್ತಾಯಗೊಂಡಿತು ಎಂದು ಹೇಳಿದರು.

ನಾನೇ ವಿಷಯ ಪ್ರಸ್ತಾವಿಸಿದ್ದೆ
ಅವಧಿ ವಿಸ್ತರಣೆ ಮಾಡಬೇಕು ಎಂಬ ಮನವಿ ರಾಜ್ಯ ಸರಕಾರದಿಂದ ಬಂದಿರಲಿಲ್ಲ. ಸಿಎಂ ಅವರು ದಿಲ್ಲಿಗೆ ಬಂದು ಪ್ರಧಾನಿ ಅವರನ್ನು ಭೇಟಿ ಮಾಡಿದ್ದ ಸಂದರ್ಭ ನಾನೇ ಈ ವಿಷಯ ಎತ್ತಿದ್ದು, ಬೆಂಬಲ ಬೆಲೆ ಅವಧಿ ವಿಸ್ತರಿಸುವಂತೆ ಯಾಕೆ ಮನವಿ ಸಲ್ಲಿಸುತ್ತಿಲ್ಲ ಎಂದು ಕೇಳಿದ್ದೆ. ಇದಾದ ಅನಂತರ ರಾಜ್ಯ ಸರಕಾರದಿಂದ ಬೇಡಿಕೆ ಬಂದಿದೆ ಎಂದು ನಿರ್ಮಲಾ ಹೇಳಿದರು.

ಅಮೆರಿಕದ ಆರ್ಥಿಕತೆಗೂ ಹೊಡೆತ
ಅಮೆರಿಕ ಐಟಿ ಕಂಪೆನಿಗಳಲ್ಲಿ ಅರೆಕಾಲಿಕ ನೆಲೆಯಲ್ಲಿ ಕೆಲಸ ಮಾಡುವ ವಿದೇಶೀಯರಿಗಾಗಿ ಒಬಾಮಾ ಅವಧಿಯಲ್ಲಿ ಎಚ್‌-ಐಬಿ ಎಂಬ ವಿಶೇಷ ವೀಸಾ ಪದ್ಧತಿ ಜಾರಿಗೊಳಿಸಿತ್ತು. ಅದನ್ನು ಹೊಸ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ರದ್ದುಪಡಿಸುವುದಾಗಿ ಹೇಳಿಕೆ ನೀಡಿದ್ದು, ಭಾರತೀಯ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಅಪಾಯ ಇರುವ ಹಿನ್ನೆಲೆಯಲ್ಲಿ ಸರಕಾರದ ನಿಲುವು ಏನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಟ್ರಂಪ್‌ ಸರಕಾರ ರದ್ದುಪಡಿಸುವ ಬಗ್ಗೆ ಹೇಳಿರುವುದು ನಿಜ. ಇದರಿಂದ ಅಮೆರಿಕದ ಕಂಪೆನಿಗಳಿಗೂ ಸಮಸ್ಯೆ ಉಂಟಾದೀತು. ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.ಸಂಸದ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.