ಸೈನಿಕನ ವಿರುದ್ಧ ತನಿಖೆಗೆ ಆಕ್ರೋಶ
Team Udayavani, Jan 13, 2017, 11:51 AM IST
ದಾವಣಗೆರೆ: ಸೈನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿದೆ ಎಂಬುದನ್ನು ಮೊಬೈಲ್ನಲ್ಲಿ ಚಿತ್ರಿಸಿ, ಜಾಹೀರು ಮಾಡಿದ್ದ ಸೈನಿಕನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕೇಂದ್ರ ಸರ್ಕಾರದ ನಡೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಪಾಲಿಕೆ ಆವರಣದ ಗಾಂಧಿ ಪ್ರತಿಮೆ ಮುಂದೆ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಳಲು ತೋಡಿಕೊಂಡ ಸೈನಿಕನ ವಿರುದ್ಧ ಕ್ರಮಕ್ಕೆ ಮುಂದಾಗುವ ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಬಿಜೆಪಿ ತಾನು ದೇಶ ಪ್ರೇಮಿ, ಸೈನಿಕರ ಪರ ಎಂಬುದಾಗಿ ಹೇಳಿಕೊಳ್ಳುತ್ತದೆ.
ಪ್ರತೀ ಬಾರಿ ಸೈನಿಕರು ಹುತಾತ್ಮರಾದಾಗ ನಮನ ಸಲ್ಲಿಸುತ್ತದೆ. ಇಂತಹ ಪಕ್ಷ ಇದೀಗ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ. ದೇಶ ಕಾಯುವ ಯೋಧನೋರ್ವ ತಮಗೆ ನೀಡುವ ಊಟ ಕಳಪೆಯಾಗಿದೆ ಎಂಬುದನ್ನು ಬಯಲಿಗೆಳೆದ ಎಂಬ ಕಾರಣಕ್ಕಾಗಿ ಆತನ ವಿರುದ್ಧ ತನಿಖೆ ನಡೆಸಲು ಆದೇಶ ಮಾಡಿದೆ.
ಆ ಮೂಲಕ ತನ್ನ ಸೈನಿಕ ಪ್ರೇಮ ಕೇವಲ ರಾಜಕೀಯಕ್ಕೆಎಂಬುದನ್ನು ಸಾಬೀತು ಪಡಿಸಿದೆ ಎಂದರು. ದೇಶ ಕಾಯುವ ಸೈನಿಕರಿಗೆ ಎಲ್ಲಾ ರೀತಿಯ ಸವಲತ್ತು ಕೊಡಬೇಕು. ಬೇರೆ ಯಾವುದರಲ್ಲಿ ಲೋಪವಾದರೂ ಸರಿ, ಆದರೆ, ಸೈನಿಕರ ವಿಷಯದಲ್ಲಿ ಇಂತಹ ಲೋಪ ಆಗಬಾರದು. ಸೈನಿಕರು ಹಗಲಿರುಳು ದೇಶದ ಗಡಿ ಕಾಯುತ್ತಾರೆ.
ಅಂತಹವರ ಆರೋಗ್ಯ ಸರಿಯಾಗಿ ಇರಬೇಕಾದುದು ಅನಿವಾರ್ಯ. ಚಳಿ, ಮಳೆ, ಬಿಸಿಲು ಎನ್ನದೆ ದುಡಿಯುವ ಸೈನಿಕರಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲು ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಅವರಿಗೆ ನೀಡುವ ಆಹಾರದ ಗುಣಮಟ್ಟವನ್ನು ಆಗಿಂದಾಗ್ಗೆ ಪರೀಕ್ಷೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಕೆಎಸ್ಐಸಿ ಮಾಜಿ ಅಧ್ಯಕ್ಷ ಡಿ. ಬಸವರಾಜ್, ಪಾಲಿಕೆ ಸದಸ್ಯರಾದ ದಿನೇ ಶೆಟ್ಟಿ, ಎಂ. ಹಾಲೇಶ್, ಮಖಂಡರಾದ ಬಿ.ಎಚ್. ವೀರಭದ್ರಪ್ಪ, ಆಯೂಬ್ಪೈಲ್ವಾನ್, ಜಯಣ್ಣ, ಅಜ್ಜಂಪುರ ಶೆಟ್ರಾ ಮೃತ್ಯುಂಜಯ, ಕೇರಂ ಗಣೇಶ್, ಎ. ನಾಗರಾಜ, ಮಹಾದೇವಮ್ಮ, ಮೊಹಮದ್ ಮುಜಾಹೀದ್ ಪಾಷ, ಶ್ರೀಕಾಂತ ಬಗರೆ ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ