ಫೆಬ್ರವರಿಯಿಂದ ಪೊಲೀಸರಿಗೆ 2,000 ರೂ. ಭತ್ತೆ : ಪರಮೇಶ್ವರ್
Team Udayavani, Jan 14, 2017, 3:45 AM IST
ಕುಂದಾಪುರ: ಪೊಲೀಸ್ ಸಿಬಂದಿಗೆ ಡಿಸೆಂಬರ್ನಿಂದ ನೀಡಬೇಕಿದ್ದ ಭತ್ತೆಯನ್ನು ತಾಂತ್ರಿಕ ಕಾರಣಗಳಿಂದ ನೀಡಲಸಾಧ್ಯವಾಗಿದ್ದು, ಮುಂದಿನ ತಿಂಗಳ ವೇತನದೊಂದಿಗೆ ನೀಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು. ಅವರು ಗಂಗೊಳ್ಳಿ ಮೀನುಗಾರಿಕಾ ಬಂದರಿನ ಬಳಿ ನಿರ್ಮಿಸಿರುವ ಕರಾವಳಿ ಕಾವಲು ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ವೇತನ ಹೆಚ್ಚಿಸುವಂತೆ ಪೊಲೀಸರಿಂದ ಬಂದ ಬೇಡಿಕೆಯ ಹಿನ್ನೆಲೆಯಲ್ಲಿ ರಚಿಸಿದ್ದ ಔರಾದ್ಕರ್ ನೇತೃತ್ವದ ಸಮಿತಿ ನೀಡಿದ ವರದಿ ಆಧರಿಸಿ ಈ ಭತ್ತೆ ಕಲ್ಪಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮಿತಿ ವರದಿಯನ್ನು ಹೊಸ ವೇತನ ಆಯೋಗದ ಮುಂದಿ ಡಲಾಗುವುದಲ್ಲದೇ ಆಯೋಗದ ನಿರ್ಧಾರದಂತೆ ಸರಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆೆ ಎಂದರು. ಪೊಲೀಸರಿಗೆ ಪ್ರತಿ ಹತ್ತು ವರ್ಷಕ್ಕೊಮ್ಮೆ ಮುಂಭಡ್ತಿ ನೀಡಲಾಗುವುದು. ಪೊಲೀಸರಲ್ಲಿ ಅಶಿಸ್ತಿನ ನಡೆ ಕಂಡುಬಂದಲ್ಲಿ ಸರಕಾರ ಗಂಭೀರವಾಗಿ ತೆಗೆದುಕೊಳ್ಳುವುದು ಎಂದರು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ಸುಮಾರು 25,000 ಸಿಬಂದಿಯಲ್ಲಿ ಈಗಾಗಲೇ 20,000 ಸಿಬಂದಿ ನೇಮಕಾತಿ ಮೂಲಕ ಸಿಬಂದಿ ಕೊರತೆಯನ್ನು ಪರಿಹರಿಸಲು ಇಲಾಖೆ ಗಮನಾರ್ಹ ಹೆಜ್ಜೆ ಇಟ್ಟಿದೆ ಎಂದು ಡಾ| ಪರಮೇಶ್ವರ್ ಹೇಳಿದರು. ಕರಾವಳಿ ಕಾವಲು ಪೊಲೀಸರಿಗೆ ತರಬೇತಿ ನೀಡಲು ಅನುಕೂಲವಾಗುವಂತೆ ಉಡುಪಿ ಜಿಲ್ಲೆಯಲ್ಲಿ ಮೆರೈನ್ ಟ್ರೈನಿಂಗ್ ಸೆಂಟರ್ ತೆರೆಯುವ ಚಿಂತನೆ ಸರಕಾರದ ಮುಂದಿದೆ ಎಂದರು.
ಅಂತರಿಕಾ ಭದ್ರತಾ ವಿಬಾಗದ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಪ್ರಸ್ತಾವನೆಗೈದರು. ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದಾನಪರಿಷತ್ ಸದಸ್ಯ ಕೆ. ಪ್ರತಾಪ್ಚಂದ್ರ ಶೆಟ್ಟಿ, ಕರ್ನಾಟಕ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಎಂ.ಎ., ಗಫೂರ್, ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಹರಿಶೇಖರನ್ ಪಿ., ನಿರ್ಮಿತಿ ಕೇಂದ್ರದ ಯೋಜನಾ ನಿರ್ದೆಶಕ ಅರುಣ್ ಕುಮಾರ್, ಗಂಗೊಳ್ಳಿ ಗ್ರಾ.ಪಂ. ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಬಾಲಕೃಷ್ಣ ಕೆ.ಟಿ. ಸ್ವಾಗತಿಸಿದರು. ಕರಾವಳಿ ಕಾವಲು ಪಡೆಯ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್ ವಂದಿಸಿದರು. ಬಿ. ಮನಮೋಹನ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪುರಕ್ಕೆ ಮಹಿಳಾ ಠಾಣೆೆ: ಪರಿಶೀಲನೆ
ಪ್ರತಿ ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಠಾಣೆ ಇರಬೇಕು ಎನ್ನುವ ಸರಕಾರದ ನಿರ್ಧಾರದಂತೆ ಕುಂದಾಪುರದಲ್ಲಿ ಕಾರ್ಯಾಚರಿಸುತ್ತಿದ್ದ ಮಹಿಳಾ ಠಾಣೆಯನ್ನು ಉಡುಪಿಗೆ ವರ್ಗಾಯಿಸಲಾಗಿದೆ. ಆದರೆ ಈಗಾಗಲೇ ಇಲ್ಲಿನ ಮಹಿಳಾ ಸಂಘಟನೆಯವರಿಂದ ಬಹಳಷ್ಟು ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಕುಂದಾಪುರದಲ್ಲೂ ಮಹಿಳಾ ಠಾಣೆ ಒದಗಿಸುವ ಬಗ್ಗೆ ಮರುಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ