ದೇಸೀ ಭಾಷಾ ಶಿಕ್ಷಣ, ಶಿಕ್ಷಣದಲ್ಲಿ ದೇಸೀ ಜ್ಞಾನ: ಡಾ|ವಿವೇಕ ರೈ


Team Udayavani, Jan 15, 2017, 3:45 AM IST

Awardees-with-officials-1.jpg

ಉಡುಪಿ: ದೇಸೀ ಭಾಷೆಯ ಪ್ರಾಥಮಿಕ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ದೇಸೀ ಜ್ಞಾನದ ಅಳವಡಿಕೆಯನ್ನು ಜನಪದ ವಿದ್ವಾಂಸ ಡಾ|ಬಿ.ಎ.ವಿವೇಕ ರೈ ಪ್ರತಿಪಾದಿಸಿದರು. 

ಮಣಿಪಾಲ ವಿ.ವಿ., ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌, ಸಿಂಡಿಕೇಟ್‌ ಬ್ಯಾಂಕ್‌ ಆಶ್ರಯದಲ್ಲಿ ಮಣಿಪಾಲದ ಹೊಟೇಲ್‌ ವ್ಯಾಲಿವ್ಯೂ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಹೊಸ ವರ್ಷದ ಪ್ರಶಸ್ತಿ ಸ್ವೀಕರಿಸಿದ ಅವರು ಶಿಕ್ಷಣವು ಪ್ರಾಥಮಿಕ ಹಂತದಿಂದ ಸ್ಥಳೀಯ ಭಾಷೆ ಮೂಲಕ ವಿಕಾಸವಾಗಬೇಕು. ಜೊತೆಗೆ ಜಾಗತಿಕ ಭಾಷೆ, ಚಿಂತನೆಗಳನ್ನು ಅಧ್ಯಯನ ಮಾಡುತ್ತ ಬೆಳೆಯಬೇಕು ಎಂದರು.

ವಿ.ವಿ.ಗಳು ಹೊಸ ವಸ್ತುಗಳ ನಿರ್ಮಾಣವನ್ನು ಮಾತ್ರ ಗುರಿಯಾಗಿರಿಸಿಕೊಳ್ಳದೆ ಹೊಸ ವಿಚಾರ, ತಾತ್ವಿಕತೆಗಳನ್ನು ಕೊಡುವಂತಾಗಬೇಕು. ಜಾನಪದ ಪಳೆಯುಳಿಕೆ ಆಗಿ ಉಳಿಯದೆ ಸಮಕಾಲೀನತೆಗೆ ಒಳಪಡುವಂತೆ ರೂಪಾಂತರವಾಗಬೇಕು. ಜಾನಪದ ಕಲಾವಿದರು ಹೊಂದಿದ ದೇಸೀ ಜ್ಞಾನವು ಶಿಕ್ಷಣ ವ್ಯವಸ್ಥೆಯಲ್ಲಿ ಮಾನವ ಸಂಪನ್ಮೂಲವಾಗಿ ಬಳಸಿಕೊಳ್ಳಬೇಕು. ಪರಂಪರೆಯ ಜ್ಞಾನದೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಜೋಡಿಸಬೇಕು. ಜನಪದ ಸಂಸ್ಕೃತಿಯನ್ನು ಸಹಜ ಪರಿಸರದಲ್ಲಿ
ಸಂರಕ್ಷಿಸಿ ಇಡುತ್ತಲೇ ಅದು ಆರ್ಥಿಕ ಸಬಲತೆ, ಸಾಮಾಜಿಕ ಮನ್ನಣೆ ಕೊಡುವ ಕಾರ್ಯತಂತ್ರ ರೂಪಿಸುವುದು ಬಹಳ ಮುಖ್ಯ ಎಂದರು. 

ಸರಿಯಾಗಿ ಪಾಠ ಮಾಡಿದರೆ ವಿದ್ಯಾರ್ಥಿಗಳು ಎಂದೆಂದೂ ಮರೆಯುವುದಿಲ್ಲ. ಕರಿಹಲಗೆ ಬೋಧನೆ ಶ್ರೇಷ್ಠ,ವಿದ್ಯಾರ್ಥಿಗಳು ಸಹಾಯಹಸ್ತ ಚಾಚಿದರೆ ಕೊಡಲು ಹಿಂಜರಿಯಬೇಡಿ, ನಿಷ್ಪಕ್ಷಪಾತಿಗಳಾಗಿ, ಕರ್ತವ್ಯದಲ್ಲಿರುವಷ್ಟು ದಿನ ಶ್ರೇಷ್ಠ ಗುಣಮಟ್ಟದ ಕರ್ತವ್ಯ ನಿರ್ವಹಿಸಿ ಎಂದು ಮಣಿಪಾಲದಲ್ಲಿಯೇ 50 ವರ್ಷ ವೈದ್ಯಕೀಯ ಶಿಕ್ಷಣವನ್ನು ಬೋಧಿಸಿದ ಡಾ|ಪಿ.ಎಲ್‌.ಎನ್‌.ರಾವ್‌ ಕಿರಿಯರಿಗೆ ಕರೆ ನೀಡಿದರು.

ನಾಗರಿಕ/ರಕ್ಷಣಾ ಸೇವೆ, ಬ್ಯಾಂಕಿಂಗ್‌, ಜಾಹೀರಾತು, ಶಿಕ್ಷಣ, ಹಣಕಾಸು, ಕೌಶಲಾಭಿವೃದ್ಧಿ ಕ್ಷೇತ್ರಗಳಲ್ಲಿ ಯುವಕರಿಗೆ ತರಬೇತಿ ನೀಡಿ ಅವರನ್ನು ತಜ್ಞರಾಗಿಸಬೇಕು ಎಂದು ಸಹಕಾರಿ ರಂಗದ ಹಿರಿಯ ಬ್ಯಾಂಕರ್‌ ಜಾನ್‌ ಡಿ’ಸಿಲ್ವ ಆಶಯ ವ್ಯಕ್ತಪಡಿಸಿದರು. 

ಕವಿ ಮುದ್ದಣನ ಹುಟ್ಟೂರು ನಂದಳಿಕೆಯಲ್ಲಿ ಚಟುವಟಿಕೆ, ಅಭಿವೃದ್ಧಿ ಸಾಧಿಸಿದ ಬಗೆ, ಇದಕ್ಕೆ ಸಹಕರಿಸಿದವರ ಕುರಿತು ತಿಳಿಸಿದ ಸಮಾಜಸೇವಕ ನಂದಳಿಕೆ ಬಾಲಚಂದ್ರ ರಾವ್‌ ಅವರು ಸಮ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. 

ಡಾ|ಪಿ.ಎಲ್‌.ಎನ್‌.ರಾವ್‌, ಡಾ|ವಿವೇಕ ರೈ, ಜಾನ್‌ ಡಿ’ಸಿಲ್ವ, ನಂದಳಿಕೆ ಬಾಲಚಂದ್ರ ರಾವ್‌ ಅವರನ್ನು  ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ|ಎಚ್‌.ಎಸ್‌.ಬಲ್ಲಾಳ್‌, ಸಿಂಡಿಕೇಟ್‌ ಬ್ಯಾಂಕ್‌ಕ್ಷೇತ್ರ ಮಹಾಪ್ರಬಂಧಕ ಸತೀಶ್‌ ಕಾಮತ್‌, ಕುಲಪತಿ ಡಾ|ಎಚ್‌.ವಿನೋದ ಭಟ್‌ ಸಮ್ಮಾನಿಸಿ ಪ್ರಶಸ್ತಿ ನೀಡಿದರು. ಡಾ|ಎಚ್‌.ಎಸ್‌.ಬಲ್ಲಾಳ್‌ ಸ್ವಾಗತಿಸಿ ಅಕಾಡೆಮಿ ಆಡಳಿತಾಧಿಕಾರಿ ಡಾ|ಎಚ್‌.ಶಾಂತಾರಾಮ್‌ ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.