ಬಿಎಸ್ವೈ-ಈಶ್ವರಪ್ಪ ಗುದ್ದಾಟದಿಂದ ನೋವು: ಸುರೇಶ್ಕುಮಾರ್
Team Udayavani, Jan 16, 2017, 3:45 AM IST
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಉಪಮುಖ್ಯಮಂತ್ರಿ, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಮುಸುಕಿನ ಗುದ್ದಾಟ ತಮ್ಮನ್ನು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ವಕ್ತಾರ ಎಸ್.ಸುರೇಶ್ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಹೇಳಿಕೆ-ಪ್ರತಿ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತರುತ್ತಿವೆ. ಆದರೆ, ಈ ವಿಚಾರವನ್ನು ಬಹಿರಂಗವಾಗಿ ಚರ್ಚಿಸದೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಏನೇ ಸಮಸ್ಯೆ, ಭಿನ್ನಾಭಿಪ್ರಾಯವಿದ್ದರೂ ಹಿರಿಯರು ಬಗೆಹರಿಸಲಿದ್ದಾರೆ. ಶೀಘ್ರ ಎಲ್ಲವೂ ಸರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಖಾದಿ ಗ್ರಾಮೋದ್ಯೋಗ ಮಂಡಳಿ ಹೊರತಂದಿರುವ ಕ್ಯಾಲೆಂಡರ್ನಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಭಾವಚಿತ್ರ ಪ್ರಕಟಿಸಿರುವುದನ್ನು ಸಮರ್ಥಿಸಿಕೊಂಡ ಸುರೇಶ್ಕುಮಾರ್, 12 ತಿಂಗಳ ಕ್ಯಾಲೆಂಡರ್ನಲ್ಲಿ ಒಂದು ತಿಂಗಳ ಹಾಳೆಯಲ್ಲಿ ಮೋದಿ ಅವರ ಚಿತ್ರವಿದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಉಳಿದ 11 ತಿಂಗಳ ಕ್ಯಾಲೆಂಡರ್ನಲ್ಲಿ ಒಂದೊಂದು ಭಾವಚಿತ್ರವಿದೆ. ಇದಕ್ಕೆ ಕೆಲವರು ಅನಗತ್ಯ ಗೊಂದಲ ಸೃಷ್ಟಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್