ಆಯುಷ್‌ ವಾಹಿನಿ ಲೋಕಾರ್ಪಣೆ


Team Udayavani, Jan 16, 2017, 3:45 AM IST

BABA.jpg

ಬೆಂಗಳೂರು: ಭಾರತೀಯ ಪ್ರಾಚೀನ ವಿದ್ಯೆಗಳಾದ ಯೋಗ, ಆಧ್ಯಾತ್ಮ, ಧ್ಯಾನ, ಪ್ರಾಣಯಾಮ ವಿದ್ಯೆಗಳನ್ನು ದಿನನಿತ್ಯ ಪ್ರಸಾರ ಮಾಡುವ ಮೂಲಕ ಜನರಿಗೆ ಅವುಗಳನ್ನು ಕಲಿಸುವ “ಆಯುಷ್‌ ವಾಹಿನಿ’ಯನ್ನು ಭಾನುವಾರ ಯೋಗಗುರು ಬಾಬಾ ರಾಮ್‌ದೇವ್‌ ಲೋಕಾರ್ಪಣೆ ಮಾಡಿದರು.

ಕಾಮಧೇನು ಟೆಲಿ ಫಿಲಮ್ಸ್‌ ಅವರ ನೂತನವಾದ ಆಯುಷ್‌ ವಾಹಿನಿಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಭಾರತೀಯ ಪ್ರಾಚೀನ ವಿದ್ಯೆಗಳನ್ನು ಆಯುಷ್‌ ವಾಹಿನಿ ಮೂಲಕ ಪ್ರತಿದಿನ ಇಡೀ ವಿಶ್ವಕ್ಕೆ ಕಲಿಸಲಾಗುವುದು ಎಂದರು.

ಪ್ರತಿ ಮುಂಜಾನೆ ಯೋಗ ಮಾಡುವುದರಿಂದ ಸರ್ವರೋಗಗಳಿಂದ ಮುಕ್ತರಾಗಬಹುದು. ಯೋಗದಲ್ಲಿ ಶಕ್ತಿ ಇದೆ. ಅದರಿಂದ ದೇಹ, ಆತ್ಮ ಶುದ್ಧಿಯಾಗಿ ಆರೋಗ್ಯ ಲಭ್ಯವಾಗುತ್ತದೆ ಎಂಬ ಸತ್ಯವನ್ನು ಅರಿಯಬೇಕು ಎಂದು ಹೇಳಿದರು.

“ನಾನು ರಾಜಕಾಣಿಯಲ್ಲ. ಯೋಗಿ, ಸನ್ಯಾಸಿ. ಬಡಕುಟುಂಬದಲ್ಲಿ ಹುಟ್ಟಿ, ಸರ್ಕಾರಿ ಶಾಲೆಯಲ್ಲಿ ಮತ್ತೂಬ್ಬರ ಪಠ್ಯಪುಸ್ತಕಗಳನ್ನು ಪಡೆದು ಓದಿದ್ದೇನೆ. ಭಾರತೀಯ ಸಂಸ್ಕೃತಿಯಲ್ಲಿ ಉಲ್ಲೇಖೀತವಾದ, ಪರಿಸರದಿಂದ ಸಿಗುವಂತಹ ಆಯುರ್ವೇದ ಗಿಡಮೂಲಿಕೆಗಳನ್ನು ಬಳಸಿ ವಿವಿಧ ಪತಂಜಲಿ ಉತ್ಪನ್ನಗಳನ್ನು ತಯಾರಿಸಿ ಕೊಡುತ್ತಿದ್ದೇನೆ. ಅದರಿಂದ ನನಗೆ ಒಂದು ಪೈಸೆಯೂ ಬರುವುದಿಲ್ಲ. ವಿದೇಶಿ ಉತ್ಪನ್ನಗಳಿಗೆ ಪರ್ಯಾಯವಾಗಿ ದೇಶಿ ಉತ್ಪನ್ನಗಳನ್ನು ಮಾಡಿದ್ದು, ಇದರಿಂದ ವಿದೇಶಕ್ಕೆ ಹೋಗುವ ಹಣ ಸಾಕಷ್ಟು ಕಡಿಮೆಯಾಗಿದೆ’ ಎಂದರು.

ಆರೋಗ್ಯ ಸಚಿವ ರಮೇಶ್‌ಕುಮಾರ್‌ ಮಾತನಾಡಿ, ವೈದ್ಯ ವಿಜ್ಞಾನದಲ್ಲಿ ಆಗುತ್ತಿರುವ ಸಂಶೋಧನೆಗಳಿಂದ ಸಾಮಾನ್ಯ ಮನುಷ್ಯನಿಗೆ ಪರಿಹಾರ ಸಿಗದಿದ್ದರೆ ಅಂತಹ ಸಂಶೋಧನೆಗಳ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು. ಪ್ರಸ್ತುತ ದಿನಗಳಲ್ಲಿ ವೈದ್ಯಕೀಯ ನೀತಿ ಸಂಹಿತೆಯನ್ನೇ ಮರೆತು ಹಲವು ವೈದ್ಯರು ವ್ಯಾಪಾರಕ್ಕೆ ಇಳಿದಿದ್ದಾರೆ. ಯಾರು ವೈದ್ಯ ವೃತ್ತಿಯಲ್ಲಿ ತೊಡಗಿದ್ದಾರೋ ಅವರ ನಡೆ, ನುಡಿ, ಬದ್ಧತೆ, ಪ್ರಾಮಾಣಿಕತೆಯೇ ಅವರಿಗೆ ಗೌರವ ಹೆಚ್ಚುವಂತೆ ಮಾಡುತ್ತದೆ. ಸರ್ಕಾರ ಎಲ್ಲ ರೀತಿಯ ಸವಲತ್ತುಗಳನ್ನು ನೀಡಿದರೂ ಅದು ಇಂದು ಜನಸಾಮಾನ್ಯರಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೆಲವು ವರ್ಷಗಳ ಹಿಂದೆ ಖಾಸಗಿ ಆಸ್ಪತ್ರೆ, ಖಾಸಗಿ ಶಾಲೆಗಳು ಎಲ್ಲಿದ್ದವು? ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದರೂ ಜನ ಅಲ್ಲಿಗೆ ಹೋಗಲು ಹಿಂದೇಟು ಹಾಕುತ್ತಾರೆ. ಕೆಲವು ಆಸ್ಪತ್ರೆಗಳಲ್ಲಿ ಆಯುಷ್‌ ವೈದ್ಯ ಪದ್ಧತಿ ಆರಂಭಿಸಿದಾಗ ಕೆಲವರು ವಿರೋಧಿಸಿದರು. ಚಿಕಿತ್ಸೆಯ ಆಯ್ಕೆ ರೋಗಿಗಳಿಗೆ ಇರಲಿ ಎಂಬ ಕಾರಣಕ್ಕೆ ಎರಡೂ ರೀತಿಯ ಪದ್ಧತಿಯನ್ನು ಒದಗಿಸಿದ್ದೇವೆ. ಇದಕ್ಕೆ ಯಾರು ಅಡ್ಡಿಪಡಿಸಿದರೂ ನಾನು ಅಧಿಕಾರದಲ್ಲಿರುವವರೆಗೆ ಮುಂದುವರೆಸುತ್ತೇನೆ ಎಂದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಹಿಂದಿದ್ದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯನ್ನು ಈಗ ನೆನಪಿಸಿಕೊಳ್ಳುವಂತಾಗಿದೆ. ಪ್ರಕೃತಿಯೇ ಎಲ್ಲಕ್ಕೂ ಪರಿಹಾರ ಮತ್ತು ಚಿಕಿತ್ಸೆ ನೀಡುತ್ತದೆ. ಭಾರತೀಯ ಸಂಸ್ಕೃತಿ, ಯೋಗ, ಆಯುರ್ವೇದಗಳು ಮನುಷ್ಯ ಹೇಗಿರಬೇಕು ಎಂಬುದನ್ನು ಪ್ರಾಚೀನ ಕಾಲದಲ್ಲಿಯೇ ಹೇಳಿದೆ. ನಮ್ಮ ಗುರು, ಹಿರಿಯರು ನೂರಾರು ವರ್ಷ ಬಾಳಿ, ಬದುಕಿದ ನಿದರ್ಶನ ನಮ್ಮ ಮುಂದಿದೆ. ಪಾಶ್ಚಾತ್ಯ ಪದ್ಧತಿಗಳನ್ನು ಇಲ್ಲಿಗೆ ತರುವುದರ ಜತೆಗೆ ಅಲ್ಲಿನ ರೋಗಗಳನ್ನು ತರಲಾಗಿದ್ದು, ನಮ್ಮ ಪ್ರಾಚೀನ ಪದ್ಧತಿ ಅಳವಡಿಸಿಕೊಂಡು ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕ ಎನ್‌.ಎ.ಹ್ಯಾರೀಸ್‌, ಪದ್ಮಭೂಷಣ ಪುರಸ್ಕೃತರಾದ ಡಾ.ಬಿ.ಎಂ.ಹೆಗ್ಡೆ, ಡಾ.ವಿ.ಆರ್‌.ಗೌರಿಶಂಕರ್‌, ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್‌, ಆಯುಷ್‌ ಟಿವಿಯ ರಾಯಭಾರಿಯೂ ಆಗಿರುವ ಚಿತ್ರನಟ ಉಪೇಂದ್ರ, ಪ್ರಶಾಂತಿ ಆಯುರ್ವೇದಿಕ್‌ ಕೇಂದ್ರದ ಡಾ.ಗಿರಿಧರ್‌ ಕಜೆ, ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯ ಪ್ರಾಂಶುಪಾಲ ಡಾ.ಪ್ರಶಾಂತ್‌ ಶೆಟ್ಟಿ, ಆಯುಷ್‌ ಇಲಾಖೆ ನಿರ್ದೇಶಕ ರಾಜ್‌ಕಿಶೋರ್‌ ಸಿಂಗ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಸ್ತಾ ಟಿವಿಯಲ್ಲಿ ಹಿಂದಿಯಲ್ಲಿ ಮಾತ್ರ ಯೋಗ ಹೇಳಿಕೊಡುತ್ತಿದ್ದೆ. ಫೆ.1ರಿಂದ ಪ್ರತಿದಿನ ಆಯುಷ್‌ ವಾಹಿನಿಯಲ್ಲಿ ಕನ್ನಡ ಮತ್ತು ತಮಿಳಿನಲ್ಲಿ ಧ್ಯಾನ, ಆಧ್ಯಾತ್ಮ, ಯೋಗ, ಪ್ರಾಣಾಯಾಮ ವಿದ್ಯೆಗಳನ್ನು ಹೇಳಿಕೊಡಲಾಗುವುದು.
– ಬಾಬಾ ರಾಮ್‌ದೇವ್‌, ಯೋಗಗುರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.