ಟರ್ಕಿ ಸರಕು ವಿಮಾನ ಕಿರ್ಗಿಸ್ಥಾನದಲ್ಲಿ ಮನೆಗಳ ಮೇಲೆ ಪತನ: 37 ಸಾವು


Team Udayavani, Jan 16, 2017, 11:22 AM IST

Turkey Plane-700.jpg

ಬಿಷೆಕ್‌: ದಟ್ಟನೆಯ ಮಂಜು ಮುಸಕಿದ ವಾತಾವರಣದಲ್ಲಿ ಲ್ಯಾಂಡ್‌ ಆಗಲು ಯತ್ನಿಸುತ್ತಿದ್ದ  ಸರಕು ಸಾಗಣೆ ವಿಮಾನವೊಂದು ಇಂದು ಸೋಮವಾರ ಕಿರ್ಗಿಸ್ಥಾನದ ಮುಖ್ಯ ವಿಮಾನ ನಿಲ್ದಾಣಕ್ಕೆ ಸಮೀಪ ಹಲವಾರು ಮನೆಗಳು ಇರುವ ಪ್ರದೇಶದಲ್ಲಿ ಪತನಗೊಂಡ ಪರಿಣಾಮವಾಗಿ 37 ಜನರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಪತನಗೊಂಡ ವಿಮಾನವು ಟರ್ಕಿ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ಇದು ಹಾಂಕಾಂಗ್‌ನಿಂದ ಇಸ್ತಾಂಬುಲ್‌ಗೆ ಕಿರ್ಗಿಸ್ಥಾನದ ರಾಜಧಾನಿ ಬಿಷೆಕ್‌ ಮೂಲಕವಾಗಿ ತೆರಳುತ್ತಿತ್ತು. ಈ ವಿಮಾನವು ಕಿರ್ಗಿಸ್ಥಾನದ ಡಾಚಾ ಸೂ ಎಂಬ ಗ್ರಾಮದಲ್ಲಿ ಹಲವಾರು ಮನೆಗಳ ಸಮೂಹವಿದ್ದ ಸ್ಥಳದ ಮೇಲೆಯೇ ಇಂದು ಬೆಳಗ್ಗೆ 7.30ರ ಸುಮಾರಿಗೆ (ಸ್ಥಳೀಯ ಕಾಲಮಾನ) ಪತನ ಗೊಂಡಿತು. ಹಾಗಾಗಿ ಈ ದುರ್ಘ‌ಟನೆಯಲ್ಲಿ ಮೃತಪಟ್ಟ ಹೆಚ್ಚಿನವರು ಗ್ರಾಮಸ್ಥರೇ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ವಿಮಾನ ನಿಲ್ದಾಣದ ಆಡಳಿತಾಧಿಕಾರಿಗಳ ಪ್ರಕಾರ ಈ ನತದೃಷ್ಟ ವಿಮಾನವು ರಾಜಧಾನಿ ಬಿಷೆಕ್‌ ಸಮೀಪದ ಮನಾಸ್‌ ವಿಮಾನ ನಿಲ್ದಾಣದಲ್ಲಿ ಇಳಿಯುವುದಿತ್ತು.  ವಿಮಾನ ನಿಲ್ದಾಣದಲ್ಲಿ ದಟ್ಟನೆಯ ಮಂಜು ಮುಸುಕಿತ್ತು. ಹಾಗಿದ್ದರೂ ಲ್ಯಾಂಡಿಂಗ್‌ ಗಾಗಿ ವಿಮಾನ ಯತ್ನಿಸಿತು. ಆದರೆ ದುರದೃಷ್ಟವಶಾತ್‌ ನಿಖರತೆಯನ್ನು ಸಾಧಿಸಲಾರದೆ ಅದು ವಿಮಾನ ನಿಲ್ದಾಣಕ್ಕೆ ಸಮೀಪದ ಗ್ರಾಮದ ಮೇಲೆ ಪತನಗೊಂಡಿತು ಎಂದು ಎಎಫ್ಪಿ ಸುದ್ದಿ ಸಂಸ್ಥೆ ತಿಳಿಸಿದೆ.

ವಿಮಾನದ ಈ ಹಠಾತ್‌ ಪತನದಿಂದಾಗಿ ಸುಮಾರು 15 ಕಟ್ಟಡಗಳು ಧ್ವಂಸಗೊಂಡವು ಎಂದು ವಿಪತ್ತು ನಿರ್ವಹಣಾ  ಕೇಂದ್ರದ ಮುಖ್ಯಸ್ಥ ಮುಖಮ್ಮದ್‌ ಸರೋವ್‌ ತಿಳಿಸಿದ್ದಾರೆ. ವಿಮಾನದಲ್ಲಿ ಒಟ್ಟು ಐವರು ಇದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಪೈಲಟ್‌ ಹಾಗೂ ಗ್ರಾಮದ 15 ಮಂದಿಯ ಶವಗಳು ಈ ತನಕ ಸಿಕ್ಕಿವೆ ಎಂದು ಆರೋಗ್ಯ ಸೇವೆಗಳ ಸಚಿವಾಲಯ ತಿಳಿಸಿದೆ. 

ಟಾಪ್ ನ್ಯೂಸ್

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.