ಸಮಾಜ ಒಳಗೊಂಡಾಗ ರಂಗಭೂಮಿಗೆ ಉಳಿವು: ಡಾ.ಚೌಗಲೆ


Team Udayavani, Jan 16, 2017, 12:27 PM IST

mys2.jpg

ಮೈಸೂರು: ಸಮಾಜದಲ್ಲಿ ಜಾತಿ, ಧರ್ಮದ ಅಫೀಮು ತುಂಬುವವರಿಗೆ ರಂಗಭೂಮಿ ಪ್ರತ್ಯಸ್ತ್ರವಾಗಬೇಕು ಎಂದು ಡಾ.ಡಿ.ಎಸ್‌.ಚೌಗಲೆ ಹೇಳಿದರು. ರಂಗಾಯಣದ ಬಹುರೂಪಿ ಅಂತಾರಾಷ್ಟ್ರೀಯ ಬಹುಭಾಷಾ ನಾಟಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ವರ್ತಮಾನದ ಕರ್ನಾಟಕದಲ್ಲಿ ಕನ್ನಡ ರಂಗಭೂಮಿಯ ಪ್ರಯೋಗಗಳ ಕುರಿತು ಮಾತನಾಡಿದರು.  

ಕರ್ನಾಟಕದ ಒಟ್ಟು ರಂಗಭೂಮಿಯ ಪ್ರಾಂತೀಯ ವಿಸ್ತಾರವನ್ನು ನೋಡಿದಾಗ ಇಲ್ಲಿ ಪ್ರಾಯೋಜಿತ ನಾಟಕಗಳಿವೆ. ವೃತ್ತಿ ನಾಟಕ ಕಂಪನಿಗಳಿಗೂ ಸರ್ಕಾರ ವಾರ್ಷಿಕ ಅನುದಾನ ನೀಡುತ್ತಿದೆ. ಹೈದರಾಬಾದ್‌ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ಜನಪ್ರಿಯವಾಗಿದ್ದ ಸಣ್ಣಾಟ-ದೊಡ್ಡಾಟಗಳು ದಯನೀಯ ಸ್ಥಿತಿ ತಲುಪಿವೆ ಎಂದರು. 

ರಂಗಭೂಮಿಯ ಚಟುವಟಿಕೆ ಸಮಾಜವನ್ನು ಒಳಗೊಳ್ಳಬೇಕು. ಸಮಾಜವನ್ನು ಒಳಗೊಂಡಿರುವ ಕಾರಣಕ್ಕೆ ಇಂದಿಗೂ ಯಕ್ಷಗಾನ ಪ್ರಸಂಗಗಳು ಹೆಚ್ಚು ಪ್ರದರ್ಶನ ಕಾಣುತ್ತವೆ. ರಂಗಭೂಮಿಗೆ ಆ ಪರಿಸ್ಥಿತಿ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಾಟಕಗಳಿಗೆ ಸಹಾಯಧನ ನೀಡದೆ ಹೋದರೆ ನಾಟಕಗಳು ನಡೆಯುವುದಿಲ್ಲ. ರಂಗಭೂಮಿ ಜನ ಆಶ್ರಿತವಾಗಬೇಕು. ಆಗ ಮಾತ್ರ ರಂಗಭೂಮಿ ಶಾಶ್ವತವಾಗಿ ಉಳಿಯುತ್ತದೆ ಎಂದರು. 

ಮಹಾರಾಷ್ಟ್ರದಲ್ಲಿ ರಂಗಭೂಮಿಗೆ ಅಲ್ಲಿನ ಜನ ನೀರೆಯುತ್ತಿದ್ದಾರೆ. ಇದರಿಂದ ಇಂದಿಗೂ ಅಲ್ಲಿನ ನಾಟಕ ಕಂಪನಿಗಳು ಪ್ರವರ್ಧಮಾನದಲ್ಲಿವೆ. ತಾಂತ್ರಿಕತೆ ಜತೆಗೆ ಪ್ರಚಲಿತ ವಿದ್ಯಮಾನಗಳನ್ನು ಒಳಗೊಂಡ ನಾಟಕಗಳನ್ನು ನೋಡಲು ಜನರು ಬರುತ್ತಾರೆ. ಜತೆಗೆ ಅಂತಹ ನಾಟಕಗಳು ಅಂತಾರಾಷ್ಟ್ರೀಯ ಮಟ್ಟಕ್ಕೂ ಹೋಗುತ್ತವೆ ಎಂದು ಹೇಳಿದರು. ಕವಿತಾ ರೈ, ಬಿ.ಎಲ್‌.ರಾಜು, ಗುಬ್ಬಿಗೂಡು ರಮೇಶ್‌ ಮಾತನಾಡಿದರು. ಡಾ.ವಿಜಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹಿಂದಿ ಹೇರಿ ಬಹುಭಾಷೆ ಸಂಸ್ಕೃತಿ ನಾಶಕ್ಕೆ ಹುನ್ನಾರ
ಮೈಸೂರು:
ಹಿಂದಿ ಭಾಷೆಯನ್ನು ಬಲವಂತವಾಗಿ ಹೇರುವ ಮೂಲಕ ಕೇಂದ್ರ ಸರ್ಕಾರ, ಭಾರತದ ಬಹು ಭಾಷಾ ಸಂಸ್ಕೃತಿಯನ್ನು ನಾಶ ಮಾಡಲು ಹೊರಟಿದೆ ಎಂದು ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕನ್ನಡ ಭಾಷಾ ಪೀಠದ ನಿರ್ದೇಶಕ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.

ರಂಗಾಯಣ ಆಯೋಜಿಸಿರುವ ಬಹುರೂಪಿ ಅಂತಾರಾಷ್ಟ್ರೀಯ ಬಹುಭಾಷಾ ನಾಟಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದ ಸಮಾರೋಪ ಭಾಷಣ ಮಾಡಿದರು. ಭಾರತದ ಭಾಷೆಗಳಿಗೆ ತನ್ನದೇ ಪರಂಪರೆ ಇದೆ. ಶಿಕ್ಷಣ ನೀತಿ ಮಾರ್ಪಾಡು ಮಾಡುವ ಮೂಲಕ ಈ ಪರಂಪರೆಯ ಮೇಲೆ ಕೇಂದ್ರ ಸರ್ಕಾರ ಗದಾಪ್ರಹಾರಕ್ಕೆ ಮುಂದಾಗಿದೆ.

ವಿವಿಧೆತೆಯಲ್ಲಿ ಏಕತೆ ಕಾಪಾಡಿರುವ ಭಾರತದಲ್ಲಿ ಭಾಷೆಗಳು ಉಳಿಯಬೇಕಾದರೆ ರಂಗಭೂಮಿಯ ಅಗತ್ಯತೆ ಇದೆ. ಆದ್ದರಿಂದ ಭಾಷೆಗಳನ್ನು ಉಳಿಸಿ-ಬೆಳೆಸಲು ಪ್ರಬಲ ಮಾಧ್ಯಮವಾದ ರಂಗಭೂಮಿಯನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು. ರಂಗ ನಿರ್ದೇಶಕ ಸುರೇಶ್‌ ಅನಗಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಂಗಾಯಣದ ಉಪ ನಿರ್ದೇಶಕಿ ನಿರ್ಮಲಾ ಮಠಪತಿ, ರಂಗ ನಿರ್ದೇಶಕ ಪ್ರೊ.ಎಚ್‌.ಎಸ್‌.ಉಮೇಶ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನಾನೂ ದೇಶಭಕ್ತ, ಆದರೆ ಉಗ್ರ ರಾಷ್ಟ್ರವಾದಿಯಲ್ಲ: ಚಂಪಾ
ಮೈಸೂರು:
ನಾನು ಕೂಡ ದೇಶಭಕ್ತ. ನನಗೂ ದೇಶದ ಬಗ್ಗೆ ಭಕ್ತಿ, ಗೌರವ ಇದೆ. ಆದರೆ, ಯಾರೋ ಹೇಳಿಕೊಟ್ಟದ್ದನ್ನು ಪ್ರತಿಪಾದಿಸುವ ಉಗ್ರ ರಾಷ್ಟ್ರವಾದಿಯಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಹೇಳಿದರು. ರಂಗಾಯಣದಲ್ಲಿ ನಡೆಯುತ್ತಿರುವ ಬಹುರೂಪಿ ಅಂತಾರಾಷ್ಟ್ರೀಯ ಬಹುಭಾಷಾ ನಾಟಕೋತ್ಸವ ಅಂಗವಾಗಿ ಏರ್ಪಡಿಸಿದ್ದ ರಂಗಭೂಮಿ ಮತ್ತು ತಂತ್ರಜಾnನ; ಸಾಮಾಜಿಕ ಜಾಲತಾಣ ಮತ್ತು ರಂಗಭೂಮಿ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಎಂಟಿಸಿ ಬಸ್‌ಗಳಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವುಳ್ಳ ದೊಡ್ಡ ಜಾಹಿರಾತು ಫ‌ಲಕ ಅವಳಡಿಸಲಾಗಿದೆ. ಆ ಫ‌ಲಕದಲ್ಲಿ ನನ್ನ ಹಣ ಸುರಕ್ಷಿತವಾಗಿದೆ ಎಂದು ಘೋಷಣೆ ಇರುವುದು, ಯಾರ ಹಣ ಸುರಕ್ಷಿತವಾಗಿದೆ ಎಂಬ ಪ್ರಶ್ನೆಗಳೇಳುವಂತೆ ಮಾಡಿದೆ. ಮೋದಿ ಅವರ ಸರಳತೆ ನೋಡಿದರೆ, ಅವರ ಶರ್ಟಿಗೆ ಜೇಬು ಕೂಡ ಇದ್ದಂತಿಲ್ಲ. ಅವರ ಹತ್ತಿರ ಇರುವುದ್ಯಾವುದೂ ಸ್ವಂತದ್ದಲ್ಲ. ಎಲ್ಲವೂ ಅಂಬಾನಿ, ಅದಾನಿ, ಕಾರ್ಪೊರೇಟ್‌ ಕಪ್ಪು ಕುಳಗಳು, ಮಠ, ದೇವಸ್ಥಾನಗಳ ಹಣ. ಜತೆಗೆ ದೇಶವೇ ನಾನು ಎಂದು ತಿಳಿದುಕೊಂಡಿದ್ದಾರೆ. ಇದರಿಂದ ಅವರ ಹಣ ಸುರಕ್ಷಿತವಾಗಿದೆ ಎಂದು ಲೇವಡಿ ಮಾಡಿದರು.

ಇಂದಿರಾರಂತೆ ಮೋದಿ: ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ತಾವು ಬರೆದಿದ್ದ ಕವನವನ್ನು ನೆನಪಿಸಿಕೊಂಡರು. ಸರ್ವಾಧಿಕಾರಿ ನೆಲೆಯಲ್ಲಿ ಇಂದಿರಾಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದಂತೆ ನರೇಂದ್ರ ಮೋದಿ ಕೂಡ ನೋಟು ಅಮಾನ್ಯಿàಕರಣದ ಮೂಲಕ ಆರ್‌ಬಿಐ, ವಿತ್ತ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ತುರ್ತು ಪರಿಸ್ಥಿತಿ ಹೇರಲು ಹೊರಟಂತಿದೆ ಎಂದು ಹೇಳಿದರು.

ನಾವು ಸಾಮಾಜಿಕ ಜಾಲ ತಾಣಗಳನ್ನು ಬಳಸಬೇಕಾ? ಸಾಮಾಜಿಕ ಜಾಲ ತಾಣಗಳೇ ನಮ್ಮನ್ನು ಬಳಸಬೇಕಾ? ಎಂಬ ಪ್ರಶ್ನೆ ಎದ್ದಿದೆ. ನಾವು ಜಾಗೃತರಾಗಿದ್ದರೆ, ಸಾಮಾಜಿಕ ಜಾಲ ತಾಣಗಳಿಂದ ಅನಾಹುತ ಆಗುವುದಿಲ್ಲ. ರಂಗಭೂಮಿಯಲ್ಲಿ ಮುಖಾಮುಖೀ ಬೆರೆಯುತ್ತೇವೆ. ಹೀಗಾಗಿ ಸೋಷಿಯಲ್‌ ಮೀಡಿಯಾ ಬಳಕೆಯನ್ನು ಕಲಿತಿಲ್ಲ. ಯುವ ಪೀಳಿಗೆಯ ಕವಿಗಳಂತು ಹಾಳೆಯ ಮೇಲೆ ಬರೆದುಕೊಂಡು ಬಂದು ಓದಿದ್ದನ್ನು ನಾನು ನೋಡಿಲ್ಲ.

ಎಲ್ಲವನ್ನೂ ಮೊಬೈಲ್‌ನಲ್ಲೇ ಮಾಡಿಕೊಂಡು ಬಂದಿರುತ್ತಾರೆ. ಹಾಗೆಂದು ನಮ್ಮಲ್ಲಿ ರಾಜಕೀಯ, ಜಾತೀ, ಧರ್ಮ, ಅಹಂಕಾರ, ಪ್ರತಿಷ್ಠೆ ಮನೆ ಮಾಡಿರುವಂತೆಯೇ ಸೋಶಿಯಲ್‌ ಮೀಡಿಯಾದಲ್ಲೂ ಅದಕ್ಕಿಂತ ದೊಡ್ಡ ನಿಗೂಢತೆಗಳಿವೆ. ಅಂತಹ ಭೂಗತ ನನ್ನಂತವರಿಗೆ ಒಗ್ಗಲ್ಲ ಎಂದು ಹೇಳಿದರು. ಮೇಟಿ ಮಲ್ಲಿಕಾರ್ಜುನ, ಪೊ›.ಮುಜಾಫ‌ರ್‌ ಅಸ್ಸಾದಿ, ಪ್ರತಿಭಾ ಸಾಗರ ಮಾತನಾಡಿದರು.ಧಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.