ಪ್ರತಿಷ್ಠಿತ ಮಂತ್ರಿಮಾಲ್ ಹಿಂಭಾಗದ ಗೋಡೆ ಕುಸಿತ;ಮಂತ್ರಿಮಾಲ್ ಬಂದ್!
Team Udayavani, Jan 16, 2017, 3:41 PM IST
ಬೆಂಗಳೂರು:ನಗರದ ಮಲ್ಲೇಶ್ವರಂನಲ್ಲಿರುವ ಪ್ರತಿಷ್ಠಿತ ಮಂತ್ರಿಮಾಲ್ ನ ಹಿಂಭಾಗದ ಗೋಡೆ ಕುಸಿದಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದ್ದು, ಮಂತ್ರಿಮಾಲ್ ನಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಮಾಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಲಕ್ಷ್ಮಮ್ಮ ಎಂಬಾಕೆ ಗಾಯಗೊಂಡಿದ್ದು, ಆಕೆಯನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂತ್ರಿಮಾಲ್ ಗೋಡೆ ಕುಸಿದಿದೆ ಎಂಬ ಸುದ್ದಿಯಿಂದಾಗಿ ಮಾಲ್ ನಲ್ಲಿದ್ದ ಸಿಬ್ಬಂದಿಗಳು, ಜನರು ಆತಂಕಕ್ಕೀಡಾಗಿದ್ದಾರೆ ಎಂದು ವರದಿ ವಿವರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ತೆರವುಗೊಳಿಸಲಾಗುತ್ತಿದೆ ಎಂದು ವರದಿ ಹೇಳಿದೆ.
ನೀರು ಸರಬರಾಜು ಪೈಪ್ ತುಂಡಾಗಿ 1ರಿಂದ 3ನೇ ಮಹಡಿಯಲ್ಲಿ ನೀರು ತುಂಬಿಕೊಂಡಿತ್ತು. ನೀರು ಸಂಗ್ರಹದಿಂದ ಹಿಂಭಾಗದ ಗೋಡೆ ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ತಾತ್ಕಾಲಿಕವಾಗಿ ಮಂತ್ರಿಮಾಲ್ ಬಂದ್:
ಮುನ್ನೆಚ್ಚರಿಕೆಯ ಅಂಗವಾಗಿ ತಾತ್ಕಾಲಿಕವಾಗಿ ಮಂತ್ರಿಮಾಲ್ ಬಂದ್ ಮಾಡಲಾಗಿದೆ ಎಂದು ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಬಿಬಿಎಂಪಿ ಮೇಯರ್ ಪದ್ಮಾವತಿ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ