7 ಎಸೆತಗಳಲ್ಲಿ 6 ವಿಕೆಟ್‌: ಬೆಂಗಳೂರು ಕ್ರಿಕೆಟಿಗನ ರಾಷ್ಟ್ರೀಯ ದಾಖಲೆ


Team Udayavani, Jan 17, 2017, 3:54 PM IST

544.jpg

ಬೆಂಗಳೂರು: ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ ಸಿಎ) ಆಯೋಜಿಸಿರುವ ಕ್ಲಬ್‌ ಮಟ್ಟದ ಟಿ20 ಕ್ರಿಕೆಟ್‌ ಪಂದ್ಯವೊಂದರಲ್ಲಿ ಬೆಂಗಳೂರಿನ ಹುಡುಗ ಸರ್ಫ್ರಾಜ್‌ ಅಶ್ರಫ್ ರಾಷ್ಟ್ರೀಯ ದಾಖಲೆಯೊಂದನ್ನು ಬರೆದಿದ್ದಾರೆ.

ಸೈಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಪಂದ್ಯದ ರಾಜ್ಯ ತಂಡದ ಆಯ್ಕೆಗಾಗಿ ನೆಲಮಂಗಲ ಆದಿತ್ಯ ಗ್ಲೋಬಲ್‌ ಕ್ರೀಡಾಂಗಣದಲ್ಲಿ ನಡೆದ ಕೂಟದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಯಂಗ್‌ ಪಯೋನಿಯರ್‌ ತಂಡದ ಲೆಗ್‌ ಸ್ಪಿನ್ನರ್‌ ಸರ್ಫ್ರಾಜ್‌. ಮರ್ಕೆರಾ ಯೂತ್‌ ತಂಡದ ವಿರುದ್ಧ ಸೋಮವಾರ ನಡೆದ ಪಂದ್ಯದ ವೇಳೆ 7 ಎಸೆತಗಳಲ್ಲಿ ಹ್ಯಾಟ್ರಿಕ್‌ ಒಳಗೊಂಡಂತೆ ಒಟ್ಟು 6 ವಿಕೆಟ್‌ ಪಡೆದು ಕ್ರಿಕೆಟ್‌ ಲೋಕ ಅಚ್ಚರಿಪಡುವಂತೆ ಮಾಡಿದರು.

„ ಏನಿದು ಸಾಧನೆ?
 ಸರ್ಫ್ರಾಜ್‌ ಒಟ್ಟಾರೆ 3  ಓವರ್‌ಗಳನ್ನು ಎಸೆದಿದ್ದಾರೆ. ಇದರಲ್ಲಿ 3 ಮೇಡನ್‌, ಶೂನ್ಯ ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಬಳಿಸಿದ್ದಾರೆ. 9ನೇ ಓವರ್‌ ಎಸೆಯಲು ಆರಂಭಿಸಿದ ಸರ್ಫ್ರಾಜ್‌ಗೆ ಮೊದಲ 2 ಎಸೆತಗಳಲ್ಲಿ 2 ವಿಕೆಟ್‌ ಸಿಕ್ಕಿತು. 3ನೇ ಎಸೆತ ಡಾಟ್‌ಬಾಲ್‌ ಆಯಿತು.

ನಂತರದ ಮೂರು ಎಸೆತದಲ್ಲಿ ಸತತ ಮೂರು ವಿಕೆಟ್‌ ಕಬಳಿಸಿದರು. ಒಟ್ಟಾರೆ ಇವರ ಮೊದಲ ಓವರ್‌ನಲ್ಲಿ ಇವರಿಗೆ ಸಿಕ್ಕಿದ ವಿಕೆಟ್‌ ಸಂಖ್ಯೆ ಶೂನ್ಯಕ್ಕೆ 5. ನಂತರ 11ನೇ ಓವರ್‌ ಎಸೆಯಲು ಬಂದ ಇವರು ಮೊದಲ ಎಸೆತದಲ್ಲೇ ವಿಕೆಟ್‌ ಕಬಳಿಸಿ ವಿಕೆಟ್‌ಗಳಿಕೆ ಸಂಖ್ಯೆಯನ್ನು 6ಕ್ಕೇರಿಸಿಕೊಂಡರು. ಇವರ ಮಾರಕ ಬೌಲಿಂಗ್‌ನಿಂದಾಗಿ ಪಯೋನಿಯರ್‌ ತಂಡ ನೀಡಿದ್ದ 264 ರನ್‌ ಗುರಿ ಬೆನ್ನಟ್ಟಿದ ಮರ್ಕೆರಾ ಯೂತ್‌ ತಂಡ 14.3 ಓವರ್‌ಗಳಲ್ಲಿ 57 ರನ್‌ಗೆ ಆಲೌಟಾಗಿ ಭಾರೀ ಮುಖಭಂಗ ಅನುಭವಿಸಿತು.

„ ಯಾರಿವರು ಸರ್ಫ್ರಾಜ್‌?
ಮೂಲತಃ ಸರ್ಫ್ರಾಜ್‌ ಜಾರ್ಖಂಡ್‌ನ‌ವರು. ಸದ್ಯ ಇವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ಇವರು ಬೆಂಗಳೂರಿನ ಅಲ್‌ಅಮೀನ್‌ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು.

2014-15ರ ಸಾಲಿನ ಸೈಯದ್‌ ಮುಷ್ತಾಕ್‌ ಅಲಿ ಏಕದಿನ ಕ್ರಿಕೆಟ್‌ನಲ್ಲಿ ಜಾರ್ಖಂಡ್‌ ತಂಡವನ್ನು ಪ್ರತಿನಿಧಿಸಿದ್ದರು. ಒಟ್ಟಾರೆ 7 ಪಂದ್ಯಗಳಿಂದ 11 ವಿಕೆಟ್‌ ಕಬಳಿಸಿದ್ದರು. ಆ ವರ್ಷ ದೇಶೀಯ ಕ್ರಿಕೆಟ್‌ನಲ್ಲಿ 2ನೇ ಅತ್ಯಧಿಕ ವಿಕೆಟ್‌ ಪಡೆದ ಬೌಲರ್‌ ಎನಿಸಿಕೊಂಡಿದ್ದರು. ಸದ್ಯ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌)ನ ಪ್ರಮುಖ ತಂಡಗಳಲ್ಲಿ ಒಂದಾಗಿರುವ ಹುಬ್ಬಳ್ಳಿ ಟೈಗರ್ ತಂಡದ ಸದಸ್ಯರಾಗಿದ್ದಾರೆ.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.