ಬಿಎಸ್ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ
Team Udayavani, Jan 18, 2017, 3:45 AM IST
ಶಿವಮೊಗ್ಗ: ಬಿಜೆಪಿ ಬಿಕ್ಕಟ್ಟು ಶಮನವಾಗುವ ಬದಲು ಉಲ್ಬಣಗೊಳ್ಳುತ್ತಲೇ ಇದೆ. ಗೊಂದಲ ನಿವಾರಣೆಗೆ ಪಕ್ಷದ ರಾಜ್ಯ ನಾಯಕರು ಕಸರತ್ತು ನಡೆಸುತ್ತಿದ್ದರೆ, ಇತ್ತ ಜಿಲ್ಲಾ ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ಬಣದ ಕಾರ್ಯಕರ್ತರ ನಡುವಿನ ಬಿಕ್ಕಟ್ಟು ಸ್ಫೋಟಗೊಂಡಿದೆ. ಮಂಗಳವಾರ ಉಭಯ ನಾಯಕರ ಬೆಂಬಲಿಗರ ನಡುವೆ ಪಕ್ಷದ
ಕಚೇರಿಯಲ್ಲೇ ಮಾರಾಮಾರಿ ನಡೆದಿದೆ. ಇದರಿಂದಾಗಿ ಪಕ್ಷದ ಕಚೇರಿ ಮುಂಭಾಗದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ವಾಹನ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು. ಕೊನೆಗೆ ಕೆಲ ಮುಖಂಡರು ಎರಡೂ ಬಣದ ಉದ್ರಿಕ್ತ
ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.
ನಡೆದಿದ್ದೇನು?: ಸೋಮವಾರ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಮಧ್ಯದಲ್ಲೇ ಹೊರ ನಡೆದು ಅಶಿಸ್ತು ತೋರಿದ ಮುಖಂಡರಾದ ಗಿರೀಶ್ ಪಟೇಲ್, ಎಸ್. ಎನ್. ಚನ್ನಬಸಪ್ಪ, ಎಸ್.ದತ್ತಾತ್ರಿ ಮತ್ತಿತರರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಆಗ್ರಹಿಸಿ ಬಿಎಸ್ ವೈ ಬೆಂಬಲಿಗರು ಜಿಲ್ಲಾಧ್ಯಕ್ಷ ರುದ್ರೇಗೌಡರಿಗೆ ಮನವಿ ಸಲ್ಲಿಸಿದರು. ವಿಷಯ ತಿಳಿದ ಈಶ್ವರಪ್ಪ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಕಚೇರಿಯ ಬಳಿ ಜಮಾಯಿಸಿದರು.
ಈ ನಡುವೆ ಬಿಎಸ್ವೈ ಬೆಂಬಲಿಗರು ಘೋಷಣೆ ಕೂಗತೊಡಗಿದಾಗ ಈಶ್ವರಪ್ಪ ಬೆಂಬಲಿಗರು ಆಕ್ಷೇಪಿಸಿದರು. ಈ ಸಂದರ್ಭ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ತಾರಕಕ್ಕೇರಿ ಕಾರ್ಯಕರ್ತರು ಪರಸ್ಪರ ಕೈ ಕೈ
ಮಿಲಾಯಿಸಿದರು. ಪರಿಸ್ಥಿತಿ ನಿಯಂತ್ರಿಸಲು ಎಸ್.ರುದ್ರೇಗೌಡ ಮುಂದಾದಾಗ, ಈಶ್ವರಪ್ಪ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ಠಾಣೆಯಲ್ಲಿ ಎರಡೂ ಬಣದಿಂದ ಯಾವುದೇ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
MUST WATCH
ಹೊಸ ಸೇರ್ಪಡೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ