ನಾನು ತಪ್ಪು ಮಾಡಿಲ್ಲ, ಸುಳ್ಳು ಹೇಳಿ 2ನೇ ಸೈಟ್‌ ಪಡೆದಿಲ್ಲ ದಾಖಲೆ ಇದೆ


Team Udayavani, Jan 18, 2017, 3:45 AM IST

lead-1.jpg

ಬೆಂಗಳೂರು: “ನನ್ನ ವಿರುದ್ಧ ಮಾಡಲಾಗಿರುವ ನಿವೇಶನ ಖರೀದಿ ಹಾಗೂ ಗೋಮಾಳ ಜಮೀನು ವಿವಾದ ಆಧಾರ ರಹಿತ. ನಾನು ನ್ಯಾಯಮೂರ್ತಿಯಾಗಲು ಅರ್ಹನಾಗಿದ್ದವನು. ಈಗ ಏಕೆ ಅನರ್ಹನಾಗುತ್ತೇನೆ? ಲೋಕಾಯುಕ್ತ ಹುದ್ದೆ ಭರ್ತಿಯಾಗದಂತೆ ನೋಡಿಕೊಳ್ಳಲು ಕೆಲವರು ನಡೆಸುತ್ತಿರುವ ಷಡ್ಯಂತ್ರವಿದು. ಕಾನೂನುಪ್ರಕಾರ ನಾನೇನೂ ತಪ್ಪು ಮಾಡಿಲ್ಲ. ಎಲ್ಲವನ್ನೂ ಉಡುಪಿಯ ಶ್ರೀಕೃಷ್ಣ ಪರಮಾತ್ಮನೇ ನೋಡಿಕೊಳ್ಳುತ್ತಾನೆ’.

ಲೋಕಾಯುಕ್ತ ಸ್ಥಾನಕ್ಕೆ ಸರ್ಕಾರದಿಂದ ಶಿಫಾರಸುಗೊಂಡಿರುವ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಹೇಳಿರುವ ನೇರ ಮಾತಿದು. ರಾಜ್ಯಪಾಲರು ಇದೀಗ ನ್ಯಾ.ವಿಶ್ವನಾಥ ಶೆಟ್ಟಿ ಮೇಲಿರುವ ಆರೋಪಗಳ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಿ ಅವರ ಶಿಫಾರಸು ಕಡತವನ್ನು ವಾಪಸ್‌ ಕಳುಹಿಸಿದ್ದಾರೆ. ಈ ಬೆಳವಣಿಗೆ ಹಾಗೂ ತಮ್ಮ ಮೇಲಿನ ಆರೋಪಗಳ ಬಗ್ಗೆ ನ್ಯಾ.ವಿಶ್ವನಾಥ ಶೆಟ್ಟಿ ಅವರು “ಉದಯವಾಣಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ
ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.

ರಾಜ್ಯಪಾಲರು ಈಗ ಲೋಕಾಯುಕ್ತ ನೇಮಕ ಶಿಫಾರಸು ಕಡತವನ್ನು ವಾಪಸ್‌ ಕಳುಹಿಸಿರುವ ಬಗ್ಗೆ ನಿಮ್ಮ ಅಭಿಪ್ರಾಯ?
-ಆ ಬಗ್ಗೆ ನನಗೇನೂ ಗೊತ್ತಿಲ್ಲ. ಅಷ್ಟೇ ಅಲ್ಲ, ಈ ಹಂತದಲ್ಲಿ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯಪಾಲರ ಬಗ್ಗೆ ಮತ್ತು ಆ ಹುದ್ದೆಯ ಬಗ್ಗೆ ನನಗೆ ಅಪಾರ ಗೌರವವಿದೆ. ಹೀಗಾಗಿ, ನೋ ಕಮೆಂಟ್ಸ್‌.

-„ ಲೋಕಾಯುಕ್ತ ಹುದ್ದೆಗೆ ನೀವು ಆಕಾಂಕ್ಷಿಯಾಗಿದ್ದೀರಾ?
 ಲೋಕಾಯುಕ್ತ ಹುದ್ದೆ ಕೊಡಿ ಅಂತ ನಾನೆಂದು ಸರ್ಕಾರಕ್ಕೆ ಕೇಳಿರಲಿಲ್ಲ. ಏಕೆಂದರೆ, ಅದಕ್ಕಿಂತ ಉನ್ನತ ಮಟ್ಟದ ಸಾಂವಿಧಾನಿಕ ಹುದ್ದೆಯಾದ ನ್ಯಾಯಮೂರ್ತಿಯಾಗಿ ಸುದೀರ್ಘ‌ ಕಾಲ ಕೆಲಸ ಮಾಡಿ ಬಂದವನು. ನನ್ನ ವ್ಯಕ್ತಿತ್ವ ಮತ್ತು ಹಿನ್ನೆಲೆ ಪರಿಗಣಿಸಿ ಸರ್ಕಾರವೇ ನನ್ನ ಹೆಸರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಿ, ಉನ್ನತ ಮಟ್ಟದ ಸಮಿತಿ ಮೂಲಕ ಶಿಫಾರಸು ಮಾಡಿದೆ. ಆದರೆ, ರಾಜ್ಯಪಾಲರಿಗೆ ಶಿಫಾರಸು ಕಳುಹಿಸುವ ಮೊದಲು ಪರೋಕ್ಷವಾಗಿ ಸರ್ಕಾರ ನನ್ನ
ಒಪ್ಪಿಗೆ ಕೇಳಿತ್ತು. ಅದಕ್ಕೆ ನಾನು ಓಕೆ ಅಂದಿದ್ದೆ ಅಷ್ಟೇ. 

-„ ಏನಿದು ನಿಮ್ಮ ಮೇಲಿನ ಅಕ್ರಮ ಸೈಟ್‌ ಖರೀದಿ ಆರೋಪ?
 ನೋಡಿ, ನ್ಯಾಯಮೂರ್ತಿ ಆಗುವುದಕ್ಕೂ ಮೊದಲೇ ಅಂದರೆ, 1976ರಲ್ಲಿ ಆರ್‌ಟಿ ನಗರದಲ್ಲಿ ನನಗೆ ಬಿಡಿಎನಿಂದ ನಿವೇಶನ ಮಂಜೂರು ಆಗಿತ್ತು. 1984ರಿಂದಲೂ ಆ ಮನೆಯಲ್ಲಿ ವಾಸವಾಗಿದ್ದೇನೆ. ಆನಂತರ, 1995ರಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, ಆ ಹುದ್ದೆಯಲ್ಲಿ ಇರುವಾಗಲೇ ಜಿಕೆವಿಕೆ ಬಳಿಯಿರುವ ನ್ಯಾಯಾಂಗ ಬಡಾವಣೆಯಲ್ಲಿ 2ನೇ ನಿವೇಶನವನ್ನು ನನ್ನ ಹೆಸರಿನಲ್ಲೇ ಮಂಜೂರು ಮಾಡಿಸಿಕೊಂಡಿದ್ದೆ. ಆಗ ಆ ಬಡಾವಣೆ ಬಿಡಿಎ ವ್ಯಾಪ್ತಿಯಿಂದ ಹೊರಗಿತ್ತು.

-„ ಹಾಗಾದರೆ, 2ನೇ ನಿವೇಶನ ಪಡೆದು ಕೊಂಡಿರುವುದು ಕಾನೂನುಬಾಹಿರವಲ್ಲವೇ?
ಈ ವಿಚಾರದಲ್ಲಿ ನಾನೇನು ತಪ್ಪು ಮಾಡಿಲ್ಲ. ಏಕೆಂದರೆ, ನ್ಯಾಯಾಂಗ ಬಡಾವಣೆ ಈ ನಿವೇಶನಕ್ಕೆ ಅರ್ಜಿ ಸಲ್ಲಿಸಬೇಕಾದರೆ, ಆರ್‌.ಟಿ.ನ ಗರ ನಿವೇಶನದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖೀಸಿದ್ದೆ. ಆದರೆ, ಆ ಬಗ್ಗೆ ಅμಡವಿಟ್‌ ಸಲ್ಲಿಸಿರಲಿಲ್ಲ. ಹೀಗಾಗಿ, ಸುಳ್ಳು ಹೇಳಿ 2ನೇ ನಿವೇಶನ ಖರೀದಿಸಿಲ್ಲ.

„ ಹಾಗಾದರೆ, ಇಲ್ಲಿ ನಿಮ್ಮದೇನೂ ತಪ್ಪಿಲ್ಲ ವೇ?
ಖಂಡಿತಾ ಇಲ್ಲ; ಅಷ್ಟೇ ಏಕೆ, ನ್ಯಾಯಮೂರ್ತಿ ಸ್ಥಾನದಲ್ಲಿರುವಾಗಲೇ ಈ ನಿವೇಶನ ನನ್ನ ಹೆಸರಿಗೆ ಹಂಚಿಕೆಯಾಗಿತ್ತು. ನನ್ನ ಜತೆಗೆ ಬಹಳಷ್ಟು ಮಂದಿ ನ್ಯಾಯಮೂರ್ತಿಗಳು ಈ ಬಡಾವಣೆಯಲ್ಲಿ ನಿವೇಶನಗಳನ್ನು ಪಡೆದುಕೊಂಡಿದ್ದರು. ಈ ಬಡಾವಣೆಯಲ್ಲಿ ಸೈಟ್‌ ಇರುವ ಬಹಳಷ್ಟು ಹಾಲಿ ಹೈಕೋರ್ಟ್‌, ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳು ಉನ್ನತವಾದ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಹೀಗಾಗಿ, ನ್ಯಾಯಮೂರ್ತಿಯಾಗಿದ್ದಾಗ ಇಲ್ಲದ ಆರೋಪಗಳು ಈಗ ಯಾಕೆ?

-„ ಇನ್ನು, ನಿಮ್ಮ ಹೆಂಡತಿ, ಮಗನ ಹೆಸರಿನಲ್ಲಿಯೂ ಸೈಟ್‌ ಇದೆಯಲ್ಲಾ?
 ಸೂಕ್ತ ದಾಖಲೆಗಳೊಂದಿಗೆ 1986ರಲ್ಲಿ ಬೆಂಗಳೂರಿನಲ್ಲಿ ನನ್ನ ಹೆಂಡತಿ ಹೆಸರಿನಲ್ಲಿ ಕೃಷಿ ಭೂಮಿ ಖರೀದಿಯಾಗಿದೆ. ಅದು ಸರ್ಕಾರಿ ಗೋಮಾಳ ಭೂಮಿ ಅಲ್ಲ ಎಂಬುದಕ್ಕೆ ಸೂಕ್ತ ದಾಖಲೆಯಿದೆ. ನನ್ನ ಮಕ್ಕಳು ಸ್ವತಂತ್ರವಾಗಿ
ಬದುಕುತ್ತಿದ್ದಾರೆ. ಈ ನಡುವೆ, ನನ್ನ ಮತ್ತು ಹೆಂಡತಿ ಕುಟುಂಬ ಕೂಡ ಉಡುಪಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಹೊಂದಿದ್ದೇಧಿವೆ.

-„ ಆರೋಪಗಳನ್ನು ನೋಡಿದರೆ, ನೀವು ಲೋಕಾಯುಕ್ತ ಸ್ಥಾನಕ್ಕೆ ಅರ್ಹ ವ್ಯಕ್ತಿ ಅಂಥ ಅನಿಸುತ್ತದೆಯೇ?
ಜಡ್ಜ್ ಆಗಿ ಅರ್ಹನಾಗಿದ್ದವನು, ಈಗ ಹೇಗೆ ಅನರ್ಹನಾಗುತ್ತೇನೆ? ಒಂದು ವೇಳೆ, ನಾನು ಅರ್ಹನಾಗಿಲ್ಲದಿದ್ದರೆ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಲಹಾ ಸಮಿತಿ ನನ್ನ ಹೆಸರನ್ನು ಶಿಫಾರಸು ಮಾಡುವುದೇ? ಸಮಿತಿಯಲ್ಲಿ ಒಮ್ಮತದ ತೀರ್ಮಾನ ಆಗುವುದೇ?

– ಹಾಗಾದರೆ, ನಿಮ್ಮ ಹೆಸರು ಲೋಕಾಯುಕ್ತ ಹುದ್ದೆಗೆ ಸೂಕ್ತ ಆಯ್ಕೆಯೇ?
ಈ ಬಗ್ಗೆ ನಾನೇನು ಹೇಳಲಾರೆ. 1995ರಿಂದ ಹತ್ತೂವರೆ ವರ್ಷ ನ್ಯಾಯಮೂರ್ತಿಯಾಗಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ನಿವೃತ್ತಿ ಬಳಿಕವೂ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲನಾಗಿದ್ದೇನೆ. ವಕೀಲನಾಗಿ, ನ್ಯಾಯಮೂರ್ತಿ
ಯಾಗಿ ನನ್ನ ನಡತೆ ಬಗ್ಗೆ ನಿವೃತ್ತ ನ್ಯಾ.ಸಂತೋಷ್‌ ಹೆಗ್ಡೆ ಸೇರಿದಂತೆ ಬೇರೆಯವರಲ್ಲಿ ಕೇಳಿಕೊಳ್ಳಿ. ಅವರೆಲ್ಲ ನಾನು “ಅನ್‌μಟ್‌’ ಅಂಥ ಹೇಳಲಿ.

-„ ರಾಜ್ಯಪಾಲರು ಒಪ್ಪಿದರೆ, ಲೋಕಾಯುಕ್ತ ಹುದ್ದೆ ವಹಿಸಿಕೊಳ್ಳಲು ನೀವು ಸಿದ್ಧರಿದ್ದೀರಾ?
ದುಡ್ಡು ಮಾಡುವ ಉದ್ದೇಶವಿಟ್ಟುಕೊಂಡು ಲೋಕಾಯುಕ್ತನಾಗಲು ಬಯಸಿಲ್ಲ. ಜನರ ಸೇವೆಗೆ ಇದೊಂದು ದೊಡ್ಡ ಅವಕಾಶ ಎಂಬ ಕಾರಣಕ್ಕೆ ಆ ಸ್ಥಾನಕ್ಕೆ ಆಸೆಪಟ್ಟಿದ್ದೇನೆ. ಒಂದೊಮ್ಮೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದರೆ,
ಸಂತೋಷದಿಂದ ಆ ಹುದ್ದೆಯಲ್ಲಿ ಕೆಲಸ ಮಾಡುವೆ.

-„ ಇಂತಹ ಆರೋಪ ಗಮನಿಸಿದರೆ, ರಾಜ್ಯದಲ್ಲಿ ಲೋಕಾಯುಕ್ತಕ್ಕೆ ಅರ್ಹರು ಇಲ್ಲವೇ?
ಲೋಕಾಯುಕ್ತ ಸ್ಥಾನಕ್ಕೆ ಅರ್ಹರಾದವರು ಕರ್ನಾಟಕದಲ್ಲಿ ಯಾರೂ ಇಲ್ಲವೇ? ಎಷ್ಟು ದಿನ ಅಂತ ಆ ಸ್ಥಾನವನ್ನು ಹಾಗೆಯೇ ಖಾಲಿ ಬಿಟ್ಟಿರಬೇಕು. ಆದರೆ, ಇದರಿಂದ ಬಹಳಷ್ಟು ಮಂದಿಗೆ ಲಾಭವಾಗುತ್ತದೆ. ಅದೊಂದೇ ಕಾರಣಕ್ಕೆ
ಕೆಲವರು ವಿವಾದ ಸೃಷ್ಟಿಸಿ, ಲೋಕಾಯುಕ್ತವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

-„ ಒಂದು ವೇಳೆ ನಿಮಗೆ ಲೋಕಾಯುಕ್ತ ಹುದ್ದೆ ಕೈತಪ್ಪಿ ಹೋದರೆ?
ಹಾಗಾದರೆ, ನನಗೇನೂ ಬೇಸರವಿಲ್ಲ. ನನ್ನ ಮೇಲೆ ಕೆಲವರು ಮಾಡುತ್ತಿರುವ ಇಂಥಹ ಸುಳ್ಳು ಆರೋಪಗಳಿಗೆ ತಲೆಕೆಡಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಧಿಕಾರದ ಬಗ್ಗೆ ಆಸೆ ಇಲ್ಲ. ಎಲ್ಲ ಆರೋಪಗಳಿಗೂ ನನ್ನ ಬಳಿ ಸೂಕ್ತ
ದಾಖಲೆಗಳೊಂದಿಗೆ ಉತ್ತರಿಸಲು ಸಿದ್ಧ.

– ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.