“ವಿದ್ಯಾರ್ಥಿಗಳು ಸಮಾಜಮುಖೀಯಾಗಬೇಕು’
Team Udayavani, Jan 18, 2017, 12:05 PM IST
ಕೆ.ಆರ್.ಪುರ: ವಿದ್ಯಾರ್ಥಿ ದೆಸೆಯಿಂದಲ್ಲೆ ಮಕ್ಕಳು ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಆಮೂಲಕ ದೇಶ ಸೇವೆಗೆ ಸನ್ನದ್ಧರಾಗಬೇಕೆಂದು ಮೊಹರೆ ಶಾಲೆಯ ಅಧ್ಯಕ್ಷ ಲಕ್ಷ್ಮೀಶ್ರಾವ್ ಮೊಹರೆ ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಬಾಬುಸಾಪಾಳ್ಯ ಮೊಹರೆ ಪಬ್ಲಿಕ್ ಶಾಲೆಯ ವಾರ್ಷಿ ಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಕರು ತಮ್ಮ ಮುಂದಿನ ಜೀವನವನ್ನು ವೇಗವಾಗಿ ಬದಲಾಗುತ್ತಿರುವ ತಂತ್ರಜಾnನಗಳ ಜೊತೆ ಹೊಂದಿಕೊಳ್ಳುವ ವೇಗದಲ್ಲಿ ಸಮಾಜಮುಖೀ ಕಾರ್ಯಗಳಲ್ಲಿ ಭಾಗವಹಿಸಲು ಮುಂದಾಗುತ್ತಿಲ್ಲ ಇದು ಬೇಸರದ ಸಂಗತಿ ಎಂದು ನುಡಿದರು. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ ಮಹತ್ವದ್ದು ಗುರಿ ಸಾಧಿಸಲು ವಿದ್ಯಾರ್ಥಿಗಳು ಉತ್ತಮ ಮಾರ್ಗವನ್ನು ಬಳಸಿಕೊಂಡು ಗುರಿ ತಲುಪುವ ಮೂಲಕ ಸಾಧನೆಮಾಡಬೇಕೆಂದು ಕಿವಿಮಾತು ಹೇಳಿದರು.
ಸ್ವಾಮಿ ವಿವೇಕಾನಂದರಂತಹ ಮಹನೀಯರ ಆದರ್ಶಗಳ ಪಾಲನೆಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಿ ಹೊರಹೊಮ್ಮುತ್ತಾರೆ ಮಹನೀ ಯರ ಜೀವನಚರಿತ್ರೆಗಳನ್ನು ವಿದ್ಯಾರ್ಥಿ ಗಳ ಮನ ತಲುಪುವ ನಿಟ್ಟಿನಲ್ಲಿ ಪೋಷಕರು ಕಾರ್ಯಮಾಡಬೇಕೆಂದರು. ಪರೀಕ್ಷೆಗೆ ಭಯ ಬೀಳದೆ ಧೈರ್ಯದಿಂದ ಎದುರಿಸುವಂತೆ ಸಲಹೆ ನೀಡಿದರು.
ಪರೀûಾ ಸಮಯದಲ್ಲಿ ವಿದ್ಯಾರ್ಥಿ ಗಳಿಗೆ ಒತ್ತಡ ನಿವಾರಿಸುವ ಕಾರ್ಯವನ್ನು ಪೊಷಕರು ಮಾಡಬೆಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ನೃತ್ಯ ಕಾರ್ಯಕ್ರಮಗಳು ಗಮನಸೆಳೆಯಿತು. ಕಾರ್ಯಕ್ರಮದಲ್ಲಿ ಹಾಸ್ಯ ನಟ ದಯಾನಂದ್,ಶಾಲೆಯ ಕಾರ್ಯದರ್ಶಿ ಯಶೋಧರ ರಾವ್ ಮೊಹರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ