ಟೀಚರ್‌ column: ಆಧುನಿಕ ಯುಗದಲ್ಲಿ ಆಧುನಿಕರಾಗಿರಿ


Team Udayavani, Jan 19, 2017, 12:46 AM IST

Teacher-18-1.jpg

ಕಲಿಸುವ ಮತ್ತು ಕಲಿಯುವ ಎರಡೂ ಪದ್ಧತಿಗಳು ಬಹಳಷ್ಟು ಬದಲಾವಣೆಗೊಂಡಿವೆ. ವರ್ತಮಾನಕ್ಕೆ ತಕ್ಕಂತೆ ಬದಲಾಗುವುದೂ ಒಂದು ಶಿಕ್ಷಣವೇ.

ಪಾಠ ಮಾಡುವುದೆಂದರೇನು? ಸರಿಯಾದ ಸಮಯಕ್ಕೆ ಸಿಲೆಬಸ್‌ ಮುಗಿಸುವುದೇ? ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯುವಂತೆ ಮಾಡುವುದೇ? ಇರುವ ಪಠ್ಯವನ್ನು ಓದಿ ಹೇಳಿ ಅದರ ಸಾರಾಂಶವನ್ನು ವಿವರಿಸುವುದೇ? ಏನು? ಒಬ್ಬ ಶ್ರೇಷ್ಠ ಶಿಕ್ಷಕ ಹೇಗಿರಬೇಕು? ಪಠ್ಯವನ್ನು ಬೋಧಿಸಿದರಷ್ಟೇ ಉತ್ತಮ ಶಿಕ್ಷಕರಾಗುವುದಿಲ್ಲ. ಪಠ್ಯವಲ್ಲದೆ, ಹೊರಗೆ ನಡೆಯುತ್ತಿರುವ ಸತ್ಯವನ್ನೂ ತಿಳಿಸಿ, ಥಿಯರಿಯೊಂದಿಗೆ ಪ್ರಾಯೋಗಿಕ ಜ್ಞಾನವನ್ನೂ ಬೆಳೆಸುವವನು ಶ್ರೇಷ್ಠ ಶಿಕ್ಷಕ.

ಕೆಲವು ಶಿಕ್ಷಕರಿರುತ್ತಾರೆ. ನೀತಿ ಕತೆಗಳ ಆಗರ ಅವರು. ಮಕ್ಕಳಿಗೆ ಪಾಠದ ಜತೆಗೆ ನೀತಿ ಕತೆಗಳನ್ನೂ ಹೇಳಿ ತಾವು ಕಲಿಯುತ್ತಿರುವುದಕ್ಕೆ ಸಂಪರ್ಕ ಕಲ್ಪಿಸುತ್ತಾರೆ. ನೀವೂ ಹೀಗೆ ನೀತಿವಂತರಾಗಬೇಕು ಎನ್ನುತ್ತಾರೆ. ಸತ್ಯ ಹರಿಶ್ಚಂದ್ರನ ಕತೆಯನ್ನು ಹೇಳುತ್ತಾರೆ. ಗಾಂಧೀಜಿಯ ಆದರ್ಶವನ್ನು ಮನದಟ್ಟು ಮಾಡಿಸುತ್ತಾರೆ. ಶಿಕ್ಷಕ ಹೇಳಿದ್ದನ್ನೆಲ್ಲವನ್ನೂ ಮಕ್ಕಳು ಕೇಳುತ್ತಾರೆಂದಲ್ಲ. ಅದೂ ಈಗಿನ ಸೂಪರ್‌ಫಾಸ್ಟ್‌ ಮಕ್ಕಳಿಗೆ ಇದನ್ನೆಲ್ಲ ಹೇಳುವವರು ಒಂದು ಮಟ್ಟಿಗೆ ಅಸಡ್ಡೆಯ ವ್ಯಕ್ತಿಗಳಾಗಿಯೂ ಕಾಣಬಹುದು. ಆದರೂ ಪ್ರತಿ ಕಾಲಕ್ಕೂ ಆದರ್ಶದ ಕನಸಿನಲ್ಲೇ ಬೆಳೆಯಬೇಕು. ಅದು ಎಂದಿಗೂ ವಿದ್ಯಾರ್ಥಿಗಳಿಗೆ ಕೊರತೆ ಮಾಡಬಾರದು.

ಹಾಗಾದರೆ ನೀತಿ ಹೇಳುವುದು ಹೇಗೆ? ಅದನ್ನು ಪ್ರಾಯೋಗಿಕ ವಾಗಿ ತಿಳಿದು ಬೋಧಿಸುವವನು ಶ್ರೇಷ್ಠ ಶಿಕ್ಷಕ. ಆಧುನಿಕ ಯುಗಕ್ಕೆ ಅತ್ಯಾಧುನಿಕ ರೀತಿಯಲ್ಲಿ ಮೂಡಿಬಂದರೆ ವಿದ್ಯಾರ್ಥಿಗಳ ತಲೆಗೆ ಒಂದಿಷ್ಟು ಹೊಕ್ಕಬಹುದು. ಅದಕ್ಕೆ ಬೇಕಾದ ರೀತಿ, ವಿಧಾನವನ್ನು ಕಂಡುಕೊಂಡು, ಕಲಿತುಕೊಳ್ಳುವುದೂ ಶಿಕ್ಷಕರ ಇಂದಿನ ಅಗತ್ಯ. ಎಷ್ಟೋ ಬಾರಿ ವಿದ್ಯಾರ್ಥಿಗಳು ಒಂದು ಕಥೆಯ ಸಾರವನ್ನು ತಿಳಿಯದೇ, ಅದನ್ನು ಭಾಗಶಃ ಅರ್ಥ ಮಾಡಿಕೊಂಡು ತಪ್ಪು ದಾರಿಗೆ ಹೋಗುವ ಸಾಧ್ಯತೆಯೂ ಇರುತ್ತದೆ. ಅಂಥ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವ ಹೊಣೆ ಶಿಕ್ಷಕರದ್ದು. ಲೋಕ ಜ್ಞಾನದ ಮಹತ್ವವನ್ನು ಮನದಟ್ಟು ಮಾಡಿಕೊಡುವುದು ಮತ್ತೂಂದು ಆದ್ಯತೆಯ ಅಂಶ. ಅದರತ್ತಲೂ ಗಮನಹರಿಸುವವ ಶ್ರೇಷ್ಠ ಶಿಕ್ಷಕನೆಂದು ಹೇಳುವುದರಲ್ಲಿ ಸಂಶಯವಿಲ್ಲ.

– ಸಂದೇಶ್‌

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.