ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿ
Team Udayavani, Jan 20, 2017, 3:45 AM IST
ಬೆಳಗಾವಿ: ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ಸೇರಿದಂತೆ
ಜಿಲ್ಲೆಯ ಕಾಂಗ್ರೆಸ್ ಪ್ರಮುಖರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ಏಕಕಾಲಕ್ಕೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಟಾಳಕರ, ಗೋಕಾಕದಲ್ಲಿ ಸಚಿವ ರಮೇಶ ಜಾರಕಿಹೊಳಿ, ಇವರ ಸಹೋದರ ಲಖನ್ ಜಾರಕಿಹೊಳಿ,
ಸಚಿವರ ಆಪ್ತ ಆಲಿ ಅತ್ತಾರ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ, ನಿಪ್ಪಾಣಿ ಬಳಿ ಸಚಿವರ ಸಂಬಂಧಿಯೊಬ್ಬರ ನಿವಾಸದ ಮೇಲೆ ದಾಳಿ ನಡೆದಿದೆ. ಮನೆಗಳ ಹೊರಗೆ ಪೊಲೀಸ್ ಭದ್ರತೆಯೊಂದಿಗೆ ಅಧಿಕಾರಿಗಳು ದಿನವಿಡೀ ದಾಖಲೆಗಳ
ಪರಿಶೀಲನೆ ನಡೆಸಿವೆ.
3 ತಂಡಗಳಿಂದ ದಾಳಿ: ಬೆಳಗಾವಿ ಕುವೆಂಪು ನಗರದಲ್ಲಿರುವ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ಮನೆಯ ಮೇಲೆ ಬೆಳಗ್ಗೆ 8.30ರ ಸುಮಾರಿಗೆ ಗೋವಾ, ಹುಬ್ಬಳ್ಳಿ ಮತ್ತು ಬೆಂಗಳೂರಿನಿಂದ ಬಂದಿದ್ದ 8 ಜನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಹೆಬ್ಟಾಳಕರ ಮನೆಯಲ್ಲಿರಲಿಲ್ಲ. ಇನ್ನೊಂದೆಡೆ ಗೋಕಾಕ ಪಟ್ಟಣದಲ್ಲಿರುವ ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಮನೆ ಮತ್ತು ಕಾರ್ಯಾಲಯ, ಸಹೋದರ ಲಖನ್ ಜಾರಕಿಹೊಳಿ ಅವರ ಮನೆ, ಬಿಎಲ್ ಜೆ ಟ್ರಸ್ಟಿನ ಕಾರ್ಯಾಲಯ, ಹಳೇ ಮನೆ, ಜಿಲ್ಲಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಹಾಗೂ ಅಲಿ ಅತ್ತಾರ ಅವರ ಮನೆಗಳ ಮೇಲೆ ಬೆಳಗ್ಗೆ 8.30 ರ ವೇಳೆಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ತಡ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಕತ್ತಲಾದ ಮೇಲೂ ಪರಿಶೀಲನೆ ಮುಂದುವರಿದಿತ್ತು. ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿರುವದು ಇದೇ ಮೊದಲು. ಸಕ್ಕರೆ ಕಾರ್ಖಾನೆಗಳ ವ್ಯವಹಾರ, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದು
ದಾಳಿಗೆ ಕಾರಣ ಎನ್ನಲಾಗಿದೆ.
ದಾಳಿ ಸುದ್ದಿ ಗೊತ್ತಾಗುತ್ತಿದ್ದಂತೆ ಸಾರ್ವಜನಿಕರು ತೀವ್ರ ಕುತೂಹಲದಿಂದ ಸಚಿವರು ಹಾಗೂ ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷರ ಮನೆ ಮುಂದೆ ಜಮಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ