ಕೋಲಾರದಲ್ಲಿ ಸಂಕ್ರಾಂತಿ ಸಂಭ್ರಮ; ಕಾರ್ಗಿಲ್‌ ವೀರರಿಗೆ ಸನ್ಮಾನ


Team Udayavani, Jan 21, 2017, 3:00 PM IST

Murali-Krishna-Uttarayana.jpg

ಕೋಲಾರ: ನಗರದ ಕ್ರೀಡಾ ಅಭಿವೃದ್ಧಿ ಅಕಾಡೆಮಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸಂಕ್ರಾಂತಿ ಅಂಗವಾಗಿ ನಡೆಸಿದ ನಗೆಹಬ್ಬದ ವೇಳೆ ಕಾರ್ಗಿಲ್‌ ಯೋಧರು, ಜಿಲ್ಲೆಯ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಕ್ರೀಡಾ ಸಾಧಕರನ್ನು ಶಾಸಕ ಆರ್‌.ವರ್ತೂರು ಪ್ರಕಾಶ್‌ ಸನ್ಮಾನಿಸಿದರು.

ಕೋಲಾರ ಜಿಲ್ಲಾ ಕ್ರೀಡಾ ಅಭಿವೃದ್ಧಿ ಅಕಾಡೆಮಿ ವತಿಯಿಂದ ನಗರದ ಮಿನಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾರ್ಗಿಲ್‌ ವಿಜಯಕ್ಕೆ ಕಾರಣರಾದ ಹವಾಲ್ದಾರ್‌ ಟಿ.ಯು.ಜನಾದ‌ìನ್‌, ಹವಾಲ್ದಾರ್‌ ಸಿ.ಎಂ.ನಾರಾಯಣಸ್ವಾಮಿ, ಎಲ್‌.ನಾಯಕ್‌ ಆಂಜನೇಯಬಾಬು ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್‌, ಕೋಲಾರದ ಜನತೆಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರಿ, ಜಿಲ್ಲೆಗೆ ಒಳ್ಳೆಯ ಮಳೆ- ಬೆಳೆಯಾಗಲಿ ಎಂದು ಹಾರೈಸಿದರು. ಕನ್ನಡಸೇನೆ ರಾಜಾಧ್ಯಕ್ಷ ಕುಮಾರ್‌, ಜಿಲ್ಲೆಯಲ್ಲಿ ನಡೆಯುತ್ತಿರುವ ನೀರಾವರಿ ಹೋರಾಟ ಮತ್ತಷ್ಟು ತೀವ್ರಗೊಳ್ಳಬೇಕು ಎಂದರು. ಫೆ.18ರಂದು ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ಜನತೆಯನ್ನು ಕೋರಿದರು.

ಹಾಸ್ಯ ಕಲಾವಿದ ಪ್ರಾಣೇಶ್‌ ಮಾತನಾಡಿ, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿರುವ ನಗು ನೋವನ್ನು ಮರೆಸಿ ಆತ್ಮಸ್ಥೈರ್ಯವನ್ನು ತುಂಬುತ್ತದೆ. ಇಂದಿನ ಒತ್ತಡದ ಜೀವನದಿಂದಾಗಿ ಪರಸ್ಪರ ಬಾಂಧವ್ಯ ದೂರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗೆಹಬ್ಬಗಳು ಹೆಚ್ಚು ಹೆಚ್ಚಾಗಿ ಮೂಡಿ ಬರಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾದ ಯೋಗೇಶ್‌, ಭರತನಾಟ್ಯ ಕಲಾವಿದ ಮಾಲೂರಿನ ಜೆಎಸ್‌ಎಸ್‌ ಶಾಲೆಯ ಕನ್ನಡ ಪೂರ್ಣಶ್ರೀ, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಎಸ್‌.ಅಮೃತಾ, ಸಾಯಿ ನಾಗೇಂದ್ರ, ಜೆ.ವರ್ಷಿತಾ, ಸ್ವಾತಿ, ನಿತಿನ್‌ ಯಾದವ್‌ ಅವರನ್ನು ಸನ್ಮಾನಿಸಲಾಯಿತು.

ಹಾಸ್ಯ ಕಲಾವಿದರಾದ ನರಸಿಂಹಜೋಷಿ, ಬಸವರಾಜ್‌ ಮಹಾಮನಿ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ತಮ್ಮ ಸಾಹಿತ್ಯ ಹಾಗೂ ಹಾಸ್ಯದ ಮಿಶ್ರಣದೊಂದಿಗೆ ನೆರೆದಿದ್ದ ಪ್ರೇಕ್ಷಕರಿಗೆ ಉಣಬಡಿಸಿದರು. ಪ್ರಾಣೇಶ್‌, ನರಸಿಂಹಜೋಷಿ, ಮಹಾಮನಿ ಅವರ ನವಿರಾದ ಹಾಸ್ಯ ಚಟಾಕಿಗಳು ಜನತೆಯನ್ನು ಸಂತಸದಲ್ಲಿ ತೇಲಿಸಿದವು.

ಕೋಚಿಮುಲ್‌ ನಿರ್ದೇಶಕ ಕೆ.ವೈ.ನಂಜೇಗೌಡ,  ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್‌.ಗಣೇಶ್‌, ನಗರಸಭೆ ಸದಸ್ಯರಾದ ಪ್ರಸಾದ್‌ ಬಾಬು, ಮುರಳೀಗೌಡ, ಸೋಮಶೇಖರ್‌, ಬಂಗಾರಪೇಟೆ ಕನ್ನಡ ಸಂಘದ ಅಧ್ಯಕ್ಷ ಪಲ್ಲವಿ ಮಣಿ, ಬಿಜೆಪಿ ರಾಜ್ಯ ಯುವ ಕಾರ್ಯದರ್ಶಿ ಓಂಶಕ್ತಿ ಚಲಪತಿ, ಎಪಿಎಂಸಿ ನಿರ್ದೇಶಕ ದೇವರಾಜ್‌ ಇದ್ದರು. ಕುರುಬರಪೇಟೆ ವೆಂಕಟೇಶ್‌ ಸ್ವಾಗತಿಸಿದರೆ, ಶಿವಕುಮಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.