ಕೆಆರ್‌ಡಿಎಲ್‌ ಅಧ್ಯಕ್ಷ ನಗರ ಸಂಚಾರ


Team Udayavani, Jan 23, 2017, 3:10 PM IST

Sanil-1.jpg

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಕೇಂದ್ರದ ವಿವಿಧ ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಅಗತ್ಯವಿರುವ ಕ್ರಿಯಾಯೋಜನೆ ತಯಾರಿಸಿದ್ದು ಈ ಸಂಬಂಧ ಕಾಮಗಾರಿ ಅನುಷ್ಠಾನಕ್ಕಾಗಿ ಪರಿಶೀ ಲನೆ ನಡೆಸಲಾಗಿದೆ ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ‌ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದಲ್ಲಿ ಕೈಗೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಪರಿವೀಕ್ಷಣೆಗಾಗಿ ನಗರ ಸಂಚಾರ ಕೈಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಎಸ್‌ಎಫ್ಸಿ ಅನುದಾನದಡಿ 38 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪರಿಶಿಷ್ಟಜಾತಿ ಉಪಯೋಜನೆಯಡಿ 50 ಲಕ್ಷ ರೂ. ಪರಿಶಿಷ್ಟ ವರ್ಗ ಘಟಕ ಯೋಜನೆಯಡಿ 1 ಕೋಟಿ ರೂ. ಅನುದಾನ ಸಹ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಬಡಾವಣೆಗಳಿಗೆ ಕಾಮಗಾರಿ ಹಮ್ಮಿಕೊಳ್ಳುವ ಸಂಬಂಧ ಅಧಿಕಾರಿ ಗಳು ಕ್ರಿಯಾ ಯೋಜನೆ ತಯಾರು ಮಾಡಿ ದ್ದಾರೆ. ಇದರ ಸಾಧಕ ಬಾಧಕಗಳನ್ನು ಪರಿಶೀಲಿಸಿ ಅನುಷ್ಠಾನ ಪ್ರಕ್ರಿಯೆ ಕೈಗೊಳ್ಳಲು ಪೂರ್ವಭಾವಿಯಾಗಿ ವ್ಯಾಪಕವಾಗಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ನಗರದ 31 ವಾರ್ಡ್‌ಗಳಿಗೆ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಕಾಮಗಾರಿ ಕೈಗೊಳ್ಳಲು 30 ಲಕ್ಷ ರೂ. ಅನು ದಾನ ನಿಗದಿ ಮಾಡಲಾಗಿತ್ತು. ಆದರೆ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷರನ್ನು ಭೇಟಿ ಮಾಡಿ ಹೆಚ್ಚುವರಿ ನೆರವು ನೀಡುವಂತೆ ಕೋರಿದ್ದೆ. ನಮ್ಮ ಮನವಿಗೆ ಅಧ್ಯಕ್ಷರು ಸ್ಪಂದಿಸಿದ್ದು ತಲಾ 1 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಅನುದಾನಕ್ಕೆ ಅನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ಪ್ರಕ್ರಿಯೆಗೆ ಅನುವು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಅಭಿವೃದ್ಧಿ ಕಾಮಗಾರಿಗೆ ಸೂಚನೆ: ಚನ್ನೀಪುರದಮೋಳೆಯಲ್ಲಿ ಉಪ್ಪಾರ ಸಮುದಾಯ ವಾಸವಾಗಿದ್ದು ಈ ವಾರ್ಡ್‌ ಕೊಳಚೆ ನಿರ್ಮೂಲನಾ ಮಂಡಳಿ ವ್ಯಾಪ್ತಿಗೆ ಸೇರಿರಲಿಲ್ಲ. ಹೀಗಾಗಿ ಇಲ್ಲಿಯೂ ಮಂಡಳಿಯಿಂದ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಸಲುವಾಗಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ಭಾಗದಲ್ಲಿ ರಾಜಕಾಲುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದರು.

ಎಲ್ಲ ಬಡಾವಣೆಗಳಿಗೆ ರಸ್ತೆ, ಕುಡಿಯುವ ನೀರು, ಒಳಚರಂಡಿ, ಶೌಚಾಲಯ ಸೇರಿದಂತೆ ಎಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಬದ್ಧವಾಗಿದ್ದು ಲಭ್ಯವಿರುವ ಅನುದಾನ ಬಳಸಿಕೊಳ್ಳಲಾಗುತ್ತಿದೆ. ಈ ಹಿಂದೆಯೂ ಸಾಕಷ್ಟು ವಾರ್ಡ್‌ಗಳಿಗೆ ಭೇಟಿ ನೀಡಿ ಆಗಬೇಕಿರುವ ಕೆಲಸಗಳ ಪಟ್ಟಿ ಮಾಡಲಾಗಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.

ಕಳಪೆ ಕಾಮಗಾರಿಗೆ ಅಸಮಾಧಾನ: ವಾರ್ಡ್‌ ನಂ. 17, 23, 24 ಭಾಗದ ಬಡಾವಣೆಗಳಿಗೆ ಭೇಟಿ ನೀಡಿದ ಪುಟ್ಟರಂಗಶೆಟ್ಟಿ ಅವರು, ಅಲ್ಲಿ ಪ್ರಗತಿಯಲ್ಲಿರುವ ಒಳಚರಂಡಿ, ರಸ್ತೆ, ಇನ್ನಿತರ ಕಾಮಗಾರಿ ಪರಿಶೀಲಿಸಿದರು. ಕೆಲವೆಡೆ ಕಾಮಗಾರಿ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಗುಣಮಟ್ಟದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

ನಗರಸಭಾಧ್ಯಕ್ಷೆ ಎಸ್‌.ಎನ್‌.ರೇಣು ಕಾ, ಉಪಾಧ್ಯಕ್ಷ ಆರ್‌.ಎಂ.ರಾಜಪ್ಪ, ಸದಸ್ಯರಾದ ಚಿನ್ನಸ್ವಾಮಿ, ಕೆಂಪರಾಜು, ಮುಖಂ ಡರಾದ ಚಿಕ್ಕಮಹದೇವು, ಜಯಕುಮಾರ್‌, ಪೌರಾಯುಕ್ತ‌ ರಾಜಣ್ಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸತ್ಯ ಮೂರ್ತಿ, ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

court

Banned ಇಂಡಿಯನ್‌ ಮುಜಾಹಿದೀನ್‌ ಸಹ ಸಂಸ್ಥಾಪಕನಿಗೆ ಜಾಮೀನು

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ

Rain ಗುಡುಗು-ಸಿಡಿಲು ಮಳೆ; ಓರ್ವ ಸಾವು, ಇಬ್ಬರಿಗೆ ಗಾಯ; ಏಕಾಏಕಿ ವರ್ಷಧಾರೆ, ಹಲವು ಕಡೆ ಹಾನಿ

rain

Delhi; ಬಿರುಗಾಳಿ ಸಹಿತ ಮಳೆಗೆ ರಾಜಧಾನಿ  ತತ್ತರ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ವಾರಾಂತ್ಯ, ಸರಣಿ ರಜೆ: ಧಾರ್ಮಿಕ ಕ್ಷೇತ್ರ,ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

dhಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; ಸಮಾಜಕ್ಕಾಗಿ ದುಡಿವ ತುಡಿತವುಳ್ಳವರಿಂದ ಸಂಸ್ಥೆ ಪ್ರಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

vimana

Pakistan: ಬಾಲಕನ ಶವವನ್ನು ಬಿಟ್ಟೇ ಹಾರಿದ ವಿಮಾನ!

Kharge 2

5 ವರ್ಷಗಳ‌ಲ್ಲಿ ಭಾರತವು ಜಗತ್ತಿನ ಉತ್ಪಾದನ ಕೇಂದ್ರ: ಖರ್ಗೆ ಭರವಸೆ

EC

ಮತದಾನ ಮುಗಿದ ದಿನವೇ ಮಾಹಿತಿ ನೀಡಿ:ಆಯೋಗಕ್ಕೆ ಆಗ್ರಹ

1-wewqwqe

ಸನಾತನ ಸಂಸ್ಥೆ ಉಗ್ರ ಸಂಘಟನೆ: ಕಾಂಗ್ರೆಸ್‌ ನಾಯಕ ಚವಾಣ್‌

police crime

Fake encounter ಪ್ರಕರಣ: ಪೊಲೀಸ್‌ ಅಧಿಕಾರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.