ಸಚಿವ ಸ್ಥಾನಕ್ಕೆ ಆತಂಕವಿಲ್ಲ: ರಮೇಶ್
Team Udayavani, Jan 27, 2017, 3:45 AM IST
ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಸಚಿವ ಸ್ಥಾನಕ್ಕೆ ಯಾವುದೇ ಆತಂಕ ಎದುರಾಗಿಲ್ಲ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಯ ಹಿಂದೆ ಸ್ಥಳೀಯ ರಾಜಕಾರಣ ಇದೆ. ಕೆಲವರು ರಾಜಕೀಯ ಕಾರಣದಿಂದ ತಪ್ಪು ದಾರಿ ಹಿಡಿದಿದ್ದಾರೆ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ. ದ್ವೇಷದ ರಾಜಕೀಯ ಮಾಡಬಾರದು ಎಂದು ಮಾರ್ಮಿಕವಾಗಿ ತಿಳಿಸಿದರು.
ನೇರ ಮಾತನಾಡುವುದು ನನ್ನ ಸ್ವಭಾವ. ಯಾರಿಗೂ ಮೋಸ ಮಾಡಿಲ್ಲ. ವೈಯಕ್ತಿಕ ದ್ವೇಷದಿಂದ ನಾನು ಎಂದಿಗೂ ರಾಜಕೀಯ ಮಾಡುತ್ತಿಲ್ಲ. ನಗುವ ರಾಜಕಾರಣಿಗಳು ಮೋಸ ಮಾಡುತ್ತಾರೆ. ಸಚಿವನಾದ ತಕ್ಷಣವೇ ನಾನು ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಯಾವತ್ತೂ ಪ್ರಚಾರ ಬಯಸಿಲ್ಲ ಎಂದರು.
ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.