ಕಂಬಳಕ್ಕೆ ಕಾಯ್ದೆ ಬಲ
Team Udayavani, Jan 29, 2017, 3:50 AM IST
ಬೆಂಗಳೂರು: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳ ಹಾಗೂ ರಾಜ್ಯದ ಇತರೆಡೆ ಆಯೋಜಿಸುವ ಎತ್ತಿನ ಗಾಡಿ ಓಟವನ್ನು ಕಾನೂನು ಬದ್ಧಗೊಳಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ತಮಿಳುನಾಡಿನಲ್ಲಿ ಜಲ್ಲಿಕಟ್ಟುವಿಗೆ ಕಾನೂನಿನ ಮನ್ನಣೆ ನೀಡಲು ಕೈಗೊಂಡ ಕ್ರಮದ ಮಾದರಿಯಲ್ಲೇ ರಾಜ್ಯದಲ್ಲೂ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನ ಕೈಗೊಳ್ಳಲಾಗಿದೆ. ಫೆಬ್ರವರಿ 6ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಕಂಬಳ ಹಾಗೂ ಎತ್ತಿನಗಾಡಿ ಓಟವನ್ನು ಕಾನೂನುಬದ್ಧಗೊಳಿಸುವ ಸಂಬಂಧದ ಮಸೂದೆ ಮಂಡನೆಯಾಗಲಿದೆ. ಆದರೆ, ಅದಕ್ಕೂ ರಾಷ್ಟ್ರಪತಿಯವರ ಅಂಕಿತ ಅಗತ್ಯ.
ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಈ ಬಗ್ಗೆ ಮಾಹಿತಿ ನೀಡಿದರು. ಸಂಪುಟ ಸಭೆಯಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅಧಿಕೃತ ಮಾನ್ಯತೆ ನೀಡಲು ನಿರ್ಧರಿಸಲಾಯಿತು. ಈ ಸಂಬಂಧ ಪ್ರತ್ಯೇಕ ಕಾನೂನು ರೂಪಿಸಿ, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು. ಕಂಬಳಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಪ್ರಾಣಿಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧ ಕರಡು ಸಿದ್ಧಪಡಿಸಲು ಪಶುಸಂಗೋಪನೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಂಬಳ ಮತ್ತು ಎತ್ತಿನಗಾಡಿ ಓಟ ಗ್ರಾಮೀಣ ಕ್ರೀಡೆಯಾಗಿದ್ದು, ಜನಸಮುದಾಯ ಅದರೊಂದಿಗೆ ಭಾವನಾತ್ಮಕ ನಂಟು ಹೊಂದಿದೆ. ಇದರಲ್ಲಿ ಪ್ರಾಣಿ ಹಿಂಸೆಯ ಪ್ರಶ್ನೆಯೇ ಬರುವುದಿಲ್ಲ. ಹೀಗಾಗಿ, ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತಂದು ಪ್ರತ್ಯೇಕ ಕಾನೂನು ರೂಪಿಸಿ ಎರಡೂ ಕ್ರೀಡೆಗಳಿಗೆ ಕಾನೂನಿನ ಮಾನ್ಯತೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
MUST WATCH
ಹೊಸ ಸೇರ್ಪಡೆ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ