ಆಸ್ಟ್ರೇಲಿಯನ್‌ ಓಪನ್‌: ಫೈನಲ್‌ನಲ್ಲಿ ಎಡವಿದ ಸಾನಿಯಾ-ಡೋಡಿಗ್‌


Team Udayavani, Jan 30, 2017, 3:45 AM IST

AP1_29_2017_000026B.jpg

ಮೆಲ್ಬರ್ನ್: ಭಾರತದ ಸಾನಿಯಾ ಮಿರ್ಜಾ-ಕ್ರೊವೇಶಿಯಾದ ಇವಾನ್‌ ಡೋಡಿಗ್‌ ಜೋಡಿ ಆಸ್ಟ್ರೇಲಿಯನ್‌ ಓಪನ್‌ ಮಿಕ್ಸೆಡ್‌ ಡಬಲ್ಸ್‌ ಫೈನಲ್‌ನಲ್ಲಿ ಎಡವಿದೆ. ರವಿವಾರದ ಪ್ರಶಸ್ತಿ ಕಾಳಗದಲ್ಲಿ ಅಮೆರಿಕದ ಅಬಿಗೇಲ್‌ ಸ್ಪಿಯರ್-ಕೊಲಂಬಿಯಾದ ಜುವಾನ್‌ ಸೆಬಾಸ್ಟಿಯನ್‌ ಕಬಾಲ್‌ ಸೇರಿಕೊಂಡು ಇಂಡೋ-ಕ್ರೊವೇಶಿಯನ್‌ ಜೋಡಿಯನ್ನು 6-2, 6-4 ಅಂತರದ ನೇರ ಸೆಟ್‌ಗಳಲ್ಲಿ ಮಣಿಸಿತು. ಇದು ಸ್ಪಿಯರ್-ಕಬಾಲ್‌ ಜೋಡಿಗೆ ಒಲಿದ ಮೊದಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ.

ದ್ವಿತೀಯ ಶ್ರೇಯಾಂಕದ ಸಾನಿಯಾ-ಡೋಡಿಗ್‌ ಫೈನಲ್‌ಗೆ ತಕ್ಕ ಆಟ ಪ್ರದರ್ಶಿಸುವಲ್ಲಿ ವಿಫ‌ಲರಾದರು. ಅದರಲ್ಲೂ ಡೋಡಿಗ್‌ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಆವರು ಸರ್ವ್‌ ಮತ್ತು ಗ್ರೌಂಡ್‌ ಸ್ಟ್ರೋಕ್‌ಗಳೆರಡರಲ್ಲೂ ಎಡವಿದರು. ಇದು ಕೊಲಂಬಿಯನ್‌ ಜೋಡಿಗೆ ವರವಾಗಿ ಪರಿಣಮಿಸಿತು.

ಮೊದಲ ಸೆಟ್‌ನಲ್ಲೇ ಡೋಡಿಗ್‌ ಎಡವಿದಾಗ ಈ ಪಂದ್ಯ ಎತ್ತ ಸಾಗುತ್ತಿದೆ ಎಂಬುದು ಸ್ಪಷ್ಟಗೊಳ್ಳತೊಡಗಿತು. ಇಲ್ಲಿ ಸತತ 4 ಗೇಮ್‌ ಕಳೆದುಕೊಂಡ ಇಂಡೋ-ಕ್ರೊವೇಶಿಯನ್‌ ಜೋಡಿ ಮತ್ತೆ ಮೇಲೇಳಲಿಲ್ಲ. ಸಾನಿಯಾ ಭರವಸೆಯ ಆಟವಾಡುತ್ತಿದ್ದರೂ ಇದರಿಂದ ಪ್ರಯೋಜನವಾಗಲಿಲ್ಲ. ಇನ್ನೊಂದೆಡೆ ಎದುರಾಳಿ ಆಟಗಾರರು ಅಮೋಘ ಲಯದಲ್ಲಿದ್ದರು. ಸ್ಪಿಯರ್ ಅವರಂತೂ ಅದ್ಭುತ ಹಿಡಿತ ಸಾಧಿಸಿ ಮುನ್ನುಗ್ಗುತ್ತಿದ್ದರು. ದ್ವಿತೀಯ ಸೆಟ್‌ನಲ್ಲಿ 4-0 ಮುನ್ನಡೆ ಸಾಧಿಸಿದ್ದೇ ಇವರ ಪರಾಕ್ರಮಕ್ಕೆ ಸಾಕ್ಷಿ.

2ನೇ ಫೈನಲ್‌ ಸೋಲು
ಸಾನಿಯಾ ಮಿರ್ಜಾ-ಇವಾನ್‌ ಡೋಡಿಗ್‌ ಗ್ರ್ಯಾನ್‌ಸ್ಲಾಮ್‌ ಫೈನಲ್‌ನಲ್ಲಿ ಎಡವಿದ 2ನೇ ಸಂದರ್ಭ ಇದಾಗಿದೆ. ಕಳೆದ ವರ್ಷದ ಫ್ರೆಂಚ್‌ ಓಪನ್‌ ಫೈನಲ್‌ನಲ್ಲೂ ಇವರು ಸೋಲುಂಡಿದ್ದರು. ಅಂದು ಇವರನ್ನು ಕೆಡವಿದವರು ಮಾರ್ಟಿನಾ ಹಿಂಗಿಸ್‌-ಲಿಯಾಂಡರ್‌ ಪೇಸ್‌.

ಈ ಸೋಲಿನೊಂದಿಗೆ ಸಾನಿಯಾ ಮಿರ್ಜಾ 7ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಾಗಿ ಇನ್ನೂ ಕಾಯಬೇಕಾಯಿತು. 2009ರಲ್ಲಿ ಅವರು ಆಸ್ಟ್ರೇಲಿಯನ್‌ ಓಪನ್‌ನಲ್ಲೇ ತಮ್ಮ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಅಭಿಯಾನ ಆರಂಭಿಸಿದ್ದರು. ಅಂದು ಮಹೇಶ್‌ ಭೂಪತಿ ಜತೆಗೂಡಿ ಮಿಕ್ಸೆಡ್‌ ಡಬಲ್ಸ್‌ ಚಾಂಪಿಯನ್‌ ಆಗಿದ್ದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.