ನಾಳೆಯಿಂದ ಮೊದಲ ಮತ ಕದನ ಶುರು


Team Udayavani, Feb 3, 2017, 3:45 AM IST

election.jpg

– ಪಂಜಾಬ್‌ನ 117, ಗೋವಾದ 40 ಕ್ಷೇತ್ರಗಳಿಗೆ ಫೆ.4ರಂದು ಚುನಾವಣೆ
– ಬಿಜೆಪಿಗೆ ಸತ್ವಪರೀಕ್ಷೆ, ಕೈಗೆ ಅಗ್ನಿಪರೀಕ್ಷೆ, ಆಪ್‌ಗೆ ಮೊದಲ ಪರೀಕ್ಷೆ

ನವದೆಹಲಿ:
ಐದು ರಾಜ್ಯಗಳ ಪೈಕಿ ಪಂಜಾಬ್‌ ಮತ್ತು ಗೋವಾ ವಿಧಾನಸಭೆಗೆ ಫೆ.4ರಂದು ಮತದಾನ ನಡೆಯಲಿದೆ. ಈ ಮೂಲಕ ಒಂದೂವರೆ ತಿಂಗಳ ಮತದಾನ ಪ್ರಕ್ರಿಯೆ ಶುರುವಾಗಲಿದೆ. ಅದಕ್ಕೆ ಪೂರಕವಾಗಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಆಡಳಿತ ರೂಢ ಬಿಜೆಪಿಗೆ ನೋಟು ಅಪನಗದೀಕರಣದ ಬಳಿಕ ಎರಡು ಪುಟ್ಟ ರಾಜ್ಯಗಳಲ್ಲಿ ಸತ್ವಪರೀಕ್ಷೆ. ಅತ್ತ ಕಾಂಗ್ರೆಸ್‌ಗೆ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ಚುನಾವಣೆಯ ನೇತೃತ್ವ ವಹಿಸಿರುವ ರಾಹುಲ್‌ ಗಾಂಧಿಗೆ ಅಗ್ನಿ ಸವಾಲಾಗಿದ್ದರೆ, ಎರಡೂ ರಾಜ್ಯಗಳಲ್ಲಿ ಆಮ್‌ ಆದ್ಮಿ ಪಕ್ಷ ಮೊದಲ ಬಾರಿಗೆ ಸ್ಪರ್ಧಿಸುತ್ತಿದೆ.

ಮೊದಲ ಹಂತದಲ್ಲಿ ಪಂಜಾಬ್‌ನ 117, ಗೋವಾದ 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೇರಿದಂತೆ ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಅರುಣ್‌ ಜೇಟಿÉ, ಸ್ಮತಿ ಇರಾನಿ, ಮನೋಹರ್‌ ಪರ್ರಿಕರ್‌ ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಚಾರ ಮಾಡಿದ್ದಾರೆ. ಹತ್ತಿರ ಒಂದು ದಶಕದಿಂದ ಪಂಜಾಬ್‌ನಲ್ಲಿ ಅಕಾಲಿ ದಳದ ಜತೆಗೆ ಬಿಜೆಪಿಯ ಮೈತ್ರಿ ಸರ್ಕಾರವಿದ್ದು, ಡ್ರಗ್‌ ಮಾಫಿಯಾವನ್ನೇ ಸರ್ಕಾರದ ವೈಫ‌ಲ್ಯವೆಂದು ಬಿಂಬಿಸುತ್ತಿರುವ ಆಪ್‌ ಇಲ್ಲಿ ಅಧಿಕಾರದ ಮೇಲೆ ಕಣ್ಣಿಟ್ಟಿದೆ. ಸಿಎಂ ಅಮರಿಂದರ್‌ ಸಿಂಗ್‌ ಜೊತೆಗೆ ಬಿಜೆಪಿಯ ಸಿದ್ದು ಸೇರ್ಪಡೆಯೂ ಕೈಪಾಳಯದಲ್ಲಿ ಕೊಂಚ ಬಲ ಹೆಚ್ಚಿಸಿದೆ.

ಇತ್ತ ಗೋವಾದಲ್ಲಿ ಸಿಎಂ ಲಕ್ಷ್ಮೀಕಾಂತ್‌ ಪರ್ಶೇಕರ್‌ ಬದಲಾಗಿ ಮನೋಹರ್‌ ಪರ್ರಿಕರ್‌ ಅನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿರುವ ಬಿಜೆಪಿಯ ದ್ವಂದ್ವ ನಿಲುವನ್ನು ಕಾಂಗ್ರೆಸ್‌- ಆಪ್‌ ಸದುಪಯೋಗ ಪಡಿಸಿಕೊಳ್ಳಲು ಮುಂದಾಗಿವೆ. ಆರೆಸ್ಸೆಸ್‌ ಮುಖ ಪರ್ಶೇಕರ್‌ ಅವರನ್ನು ಪಕ್ಕಕ್ಕಿಟ್ಟು ಜನಪ್ರಿಯ ಮುಖ ಆರಿಸಿಕೊಳ್ಳುತ್ತಿರುವ ಬಿಜೆಪಿಯ ನಿಲುವು ಪಕ್ಷದಲ್ಲಿಯೇ ಬಿರುಕು ಮೂಡಿಸಿದರೂ ಅಚ್ಚರಿಯಿಲ್ಲ. ಕಾಂಗ್ರೆಸ್‌ ಪರ ರಾಹುಲ್‌ ಗಾಂಧಿ, ಆಪ್‌ ಪರ ಅರವಿಂದ ಕೇಜ್ರಿವಾಲ್‌, ಮನೀಷ್‌ ಸಿಸೋಡಿಯಾ ಅವರ ಪ್ರಚಾರದಿಂದ ಗೋವಾದಲ್ಲಿ ರಾಜಕೀಯ ನಶೆ ಉದ್ದೀಪಿಸಿತ್ತು.

ಕೇಜ್ರಿ ವಿರುದ್ಧ ರಾಹುಲ್‌ ವಾಗ್ಧಾಳಿ
ಪಂಜಾಬ್‌ನ  ಸಂಗ್ರೂರ್‌ನಲ್ಲಿ ಕೊನೆಯ ದಿನದ ಪ್ರಚಾರ ಭಾಷಣ ಮಾಡಿದ ರಾಹುಲ್‌ ಗಾಂಧಿ, ಮೂರು ದಿನದ ಹಿಂದೆ ನಡೆದ ಮೌರ್‌ ಮಾಂಡಿ ಕಾರು ಸ್ಫೋಟವನ್ನು ಪುನಃ ನೆನಪಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಹರ್ಮಿಂದರ್‌ ಸಿಂಗ್‌ ಜಸ್ಸಿ ಪ್ರಚಾರ ಸಭೆ ಮುಗಿದ ಕೂಡಲೇ ಈ ಸ್ಫೋಟವಾಗಿತ್ತು. “ಪಂಜಾಬಿನ ಶಾಂತಿ ಕದಡು¤ತಿರುವ ಶಕ್ತಿಗಳ ಪರ ಆಪ್‌ನ ಅರವಿಂದ್‌ ಕೇಜ್ರಿವಾಲ್‌ ಧ್ವನಿ ಎತ್ತುತ್ತಿದ್ದಾರೆ’ ಎಂದು ನೇರ ಆರೋಪಿಸಿದರು. “ಆಪ್‌- ಬಿಜೆಪಿ ಎರಡೂ ಸೈದ್ಧಾಂತಿಕವಾಗಿ ಅತಿರೇಕ ಹೊಂದಿರುವಂಥವು. ಇಂಥ ನಾಯಕರಿಂದಲೇ ಭಯಗ್ರಸ್ಥ ವಾತಾವರಣದಲ್ಲಿ ಪಂಜಾಬಿಗರು ಬದುಕುವಂತಾಗಿದೆ. ಇಲ್ಲಿನವರ ಉದ್ಯೋಗಗಳನ್ನು ಪಕ್ಕದ ಜಾರ್ಖಂಡ್‌, ಚತ್ತೀಸ್‌ಗಢ್‌ ಮಂದಿ ಕಸಿಯುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳು ನಿವಾರಣೆ ಆಗಲಿವೆ’ ಎಂದರು.

ಚುನಾವಣೆ ಬಂದಾಗ ಬಿಜೆಪಿಗೆ ರಾಮ ಜಪ: ಕಾಂಗ್ರೆಸ್‌ ಟೀಕೆ
“ಬಿಜೆಪಿ ಚುನಾವಣೆ ವೇಳೆ ಮಾತ್ರವೆ ಏಕೆ ರಾಮ ಮಂದಿರ ನಿರ್ಮಾಣವನ್ನು ಪ್ರಸ್ತಾಪಿಸುತ್ತದೆ? ಅಧಿಕಾರ ಹಿಡಿದ ಈ ಎರಡೂವರೆ ವರ್ಷದಲ್ಲಿ ಯಾಕೆ ಅವರಿಗೆ ರಾಮ ನೆನಪಾಗಲಿಲ್ಲ?’ ಕಾಂಗ್ರೆಸ್‌ ನೇತಾರ ಪ್ರದೀಪ್‌ ಮಾಥುರ್‌ ಹೀಗೊಂದು ಪ್ರಶ್ನೆ ಎಸೆದಿದ್ದಾರೆ. ಮಥುರಾ ಕ್ಷೇತ್ರದ ಅಭ್ಯರ್ಥಿ ಆಗಿರುವ ಮಾಥುರ್‌, “ಬಿಜೆಪಿಗೆ ರಾಮಮಂದಿರ ವಿವಾದ ಸದಾ ಜೀವಂತ ವಸ್ತುವಾಗಿರಬೇಕು. ಅದಕ್ಕೆ ತಾರ್ಕಿಕ ಅಂತ್ಯ ಕೊಡಲು ಅವರಿಗೆ ಮನಸ್ಸಿಲ್ಲ’ ಎಂದು ಕುಟುಕಿದ್ದಾರೆ.

ಅಸ್ವಸ್ಥರಾದರೂ ಬಾದಲ್‌ ಪ್ರಚಾರ
ನಿರಂತರ ಚುನಾವಣಾ ಪ್ರಚಾರದಿಂದಾಗಿ ಪಂಜಾಬ್‌ನ ಸಿಎಂ ಪ್ರಕಾಶ್‌ ಸಿಂಗ್‌ ಬಾದಲ್‌ ಅಸ್ವಸ್ಥರಾಗಿದ್ದರೂ, ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದಾರೆ. ವೈದ್ಯ ತಂಡ ಬಾದಲ್‌ ಅವರನ್ನು ಪರೀಕ್ಷಿಸಿ, ವಿಶ್ರಾಂತಿ ತೆಗೆದುಕೊಳ್ಳಲು ಹೇಳಿದ್ದರೂ ಅದನ್ನು ಅವರು ನಿರ್ಲಕ್ಷಿಸಿದ್ದಾರೆ. ಶಿರೋಮಣಿ ಅಕಾಲ ದಳದ ಅಭ್ಯರ್ಥಿಗಳ ಪರ ಸಮ್ರಾಲಾ, ಶಾರ್ದುಲ್‌ಗ‌ಢ್‌ ಮತ್ತು ಸುನಮ್‌ನಲ್ಲಿ ಪಾಲ್ಗೊಳ್ಳುವುದಾಗಿ 89 ವರ್ಷದ ಬಾದಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.