ಹೂಮಳೆ ಸುರಿಸಲು ಹೈಕೋರ್ಟ್‌ ಮೊರೆ!


Team Udayavani, Feb 3, 2017, 12:17 PM IST

high-court.jpg

ಬೆಂಗಳೂರು: ಗೃಹ ಪ್ರವೇಶದ ವೇಳೆ ಹೆಲಿಕಾಪ್ಟರ್‌ನಿಂದ ಮನೆ ಮೇಲೆ ಹೂಮಳೆ ಸುರಿಸಲು (ಪುಷ್ಪವೃಷ್ಟಿ) ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶಿಸಿ!
ಹೀಗೊಂದು ಅಚ್ಚರಿ ಮತ್ತು ಕುತೂಹಲದ ಅರ್ಜಿಯೊಂದು ಹೈಕೋರ್ಟ್‌ನಲ್ಲಿ ದಾಖಲಾಗಿದೆ.

ಇಂತಹ ಅಪರೂಪದ ಮನವಿ ಮಾಡಿರುವುದು ಬೆಂಗಳೂರು ಪೂರ್ವ ತಾಲೂಕಿನ ಮುಳ್ಳೂರು ಗ್ರಾಮದ ನಿವಾಸಿ ಎಂ.ಮುನಿರಾಜು. ಇವರ ಮನವಿ ಕೇಳಿ ಖುದ್ದು ಹೈಕೋರ್ಟ್‌ ಅಚ್ಚರಿಗೆ ಒಳಗಾಯಿತಲ್ಲದೆ, ಸಮಸ್ಯೆ ಬಗೆಹರಿಸುವ ಸಂಬಂಧ ವರ್ತೂರು ಪೊಲೀಸರಿಂದ ಸಲಹೆಯನ್ನೂ ಕೇಳಿದೆ. ಅಲ್ಲದೆ, ಪ್ರಕರಣದ ಕುರಿತು ಅಗತ್ಯ ಸಲಹೆ ನೀಡುವಂತೆ ಸರ್ಕಾರಿ ವಕೀಲರ ಮೂಲಕ ನಗರ ಪೊಲೀಸ್‌ ಆಯುಕ್ತರು ಮತ್ತು ವರ್ತೂರು ಠಾಣಾಧಿಕಾರಿಗೆ ನ್ಯಾಯಪೀಠ ನಿರ್ದೇಶಿಸಿದೆ.

ಏನಿದು ಅರ್ಜಿ?: ಮುಳ್ಳೂರು ಗ್ರಾಮದಲ್ಲಿ ಎಂ.ಮುನಿರಾಜು ಅವರು ಭವ್ಯವಾದ ಮನೆಯೊಂದನ್ನು ನಿರ್ಮಿಸಿದ್ದು, ಫೆ. 9ರಂದು ಗೃಹಪ್ರವೇಶಕ್ಕೆ ದಿನಾಂಕ ನಿಗದಿಪಡಿಸಿ ಬಂಧು-ಬಳಗದವರನ್ನು ಆಹ್ವಾನಿಸಿದ್ದಾರೆ. ಅಲ್ಲದೆ, ಗೃಹಪ್ರವೇಶವನ್ನು ವಿಶಿಷ್ಠವಾಗಿ ಆಚರಿಸಲು ಅಂದು ಹೆಲಿಕಾಪ್ಟರ್‌ ಮೂಲಕ ಮನೆ ಮೇಲೆ ಪುಷ್ಪವೃಷ್ಠಿಗೆ ತೀರ್ಮಾನಿಸಿ ಅದಕ್ಕಾಗಿ ಡೆಕ್ಕನ್‌ ಏರ್‌ವೆಸ್‌ ಪ್ರೈವೇಟ್‌ ಲಿಮಿಟೆಡ್‌ನ‌ ಹೆಲಿಕಾಪ್ಟರ್‌ ಕೂಡ ಕಾಯ್ದಿರಿಸಿದ್ದರು.

ಬಳಿಕ ಫೆ. 9ರಂದು ಮಧ್ಯಾಹ್ನ 11.30ರ ನಂತರ ಮನೆಯ ಮೇಲೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಲು ಅನುಮತಿ ಕೋರಿ ವರ್ತೂರು ಠಾಣಾ ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಮನವಿ ಸಲ್ಲಿಸಿದ್ದರು. ಪೊಲೀಸರು ಮನವಿ ಪರಿಗಣಿಸಿಲ್ಲವೆಂಬ ಕಾರಣಕ್ಕೆ ಜ. 30ರಂದು ನಗರ ಪೊಲೀಸ್‌ ಆಯುಕ್ತರಿಗೂ ಮನವಿ ಸಲ್ಲಿಸಿದ್ದರು. ಆದರೆ, ನಗರ ಪೊಲೀಸ್‌ ಆಯುಕ್ತರು ತಮ್ಮ ಮನವಿ ತಿರಸ್ಕರಿಸಿದರು ಎಂಬ ಕಾರಣಕ್ಕೆ ಹೈಕೋರ್ಟ್‌ ಮೊರೆ ಹೋಗಿರುವ ಮುನಿರಾಜು, ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶಿಸಿ ಎಂದು ಕೋರಿದ್ದಾರೆ.

ಇಂತಹ ಮನವಿ ಕೋರ್ಟ್‌ಗೆ ಬರಬೇಕೇ?: ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ, ಏನಿದು ಅರ್ಜಿ? ಇದೆಂಥಾ ಮನವಿ? ಇಂತಹ ಮನವಿ ಇಟ್ಟುಕೊಂಡು ಕೋರ್ಟ್‌ಗೆ ಬರಬೇಕೇ? ಕೋರ್ಟ್‌ ಇಂತಹ ಮನವಿಯನ್ನು ಹೇಗೆ ಪರಿಗಣಿಸಿ ಸಮಸ್ಯೆ ಪರಿಹರಿಸಬಹುದು? ಹೆಲಿಕಾಪ್ಟ ರ್‌ನಿಂದ ಮನೆಯ ಮೇಲೆ ಹೂಮಳೆ ಸುರಿಸುವುದಕ್ಕೆ ಅನುಮತಿ ನೀಡದಿರುವುದರಿಂದ ಅರ್ಜಿದಾರರಿಗೆ ಯಾವ ರೀತಿ ಅನ್ಯಾಯವಾಗಿದೆ? ಯಾವ ಹಕ್ಕು ಉಲ್ಲಂಘನೆಯಾಗಿದೆ? ಪೊಲೀಸರಿಗೆ ಕೋರ್ಟ್‌ ಏನೆಂದು ನಿರ್ದೇಶಿಸಬೇಕು? ಎಂದು ಪ್ರಶ್ನಿಸುವುದರ ಜತೆಗೆ ಅಚ್ಚರಿಯನ್ನೂ ವ್ಯಕ್ತಪಡಿಸಿದರು. 

ಈ ಕುರಿತು ಸರ್ಕಾರಿ ವಕೀಲರನ್ನು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ, ಪ್ರಕರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮತ್ತಷ್ಟು ವಿವರಣೆ ಪಡೆಯಬೇಕಿದೆ. ಅದಕ್ಕಾಗಿ ಕಾಲಾವಕಾಶ ನೀಡಬೇಕೆಂದು ಕೋರಿದರು. ಆ ಮನವಿ ಪರಿಗಣಿಸಿ ನ್ಯಾಯಪೀಠ, ಸೋಮವಾರ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.