ಸಂವಿಧಾನಬದ್ಧ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯ: ಪುರುಷೋತ್ತಮ ಮಾಸ್ತರ್‌


Team Udayavani, Feb 5, 2017, 3:45 AM IST

04ksdm1.jpg

ಬದಿಯಡ್ಕ: ಗಡಿನಾಡು ಕಾಸರಗೋಡಿನ ಅಲ್ಪಸಂಖ್ಯಾಕ ಕನ್ನಡಿಗರಿಗೆ ಸಂವಿಧಾನಬದ್ಧ ಹಕ್ಕುಗಳಿಗಾಗಿ ಹೋರಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿರುವುದು ದೌರ್ಭಾಗ್ಯ. ಆದರೂ ಹಕ್ಕು ಸಂರಕ್ಷಣೆಗಾಗಿ ಅನವರತ ಹೋರಾಟಕ್ಕೆ ಬದ್ದ ಎಂದು ಹಿರಿಯ ಕನ್ನಡ ಹೋರಾಟಗಾರ, ಕನ್ನಡ ಸಮನ್ವಯ ಸಮಿತಿ ಅಧ್ಯಕ್ಷ ಪುರುಷೋತ್ತಮ ಮಾಸ್ತರ್‌ ಹೇಳಿದರು.

ವಿವಿಧ ಕನ್ನಡ ಪರ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ವಿವಿಧ ಗ್ರಾ.ಪಂ. ಸಹಿತ ಆಡಳಿತ ಕಚೇರಿಗಳಿಗೆ ಹಮ್ಮಿಕೊಂಡಿರುವ ಹಕ್ಕೊತ್ತಾಯ ಪ್ರತಿಭಟನ ಮೆರವಣಿಗೆ ಮತ್ತು ಸಭೆ ಅಂಗವಾಗಿ ಶನಿವಾರ ಅಪರಾಹ್ನ ಬದಿಯಡ್ಕ ಗ್ರಾ. ಪಂ. ಕಾರ್ಯಾಲಯದ ಎದುರು ನಡೆಸಿದ ಸಾರ್ವಜನಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಭಾಷಾವಾರು ಪ್ರಾಂತ್ಯ ರಚನೆಯಿಂದ ಅನ್ಯಾಯಕ್ಕೊಳಗಾದ ಗಡಿನಾಡಿನ ಕನ್ನಡಿಗರ ಸತತ ನಿರ್ಲಕ್ಷÂ ತೀವ್ರ ಹತಾಶೆಗೊಳಪಡಿಸಿವೆ. ಮಂಜೇಶ್ವರ ಮತ್ತು ಕಾಸರಗೋಡು ತಾಲೂಕುಗಳ ಎಲ್ಲ ಸ್ಥಳೀಯಾಡಳಿತ ಕಚೇರಿಗಳಲ್ಲಿ ಕನ್ನಡ ಬಲ್ಲ ನೌಕರರನ್ನು ನೇಮಿಸಬೇಕೆಂಬ ವರದಿಯನ್ನು ಮೂಲೆಗುಂಪು ಮಾಡಿರುವುದು ಅನ್ಯಾಯ ಎಂದರು.

ಗಡಿನಾಡ ಕನ್ನಡಿಗರ ತಾಳ್ಮೆ ಪರೀಕ್ಷಿಸುವ ಸರಕಾರ ಅಗತ್ಯ ಪ್ರಾತಿನಿಧ್ಯ ನೀಡದಿದ್ದಲ್ಲಿ ಬೀದಿಗಿಳಿದು ಹೋರಾಡಬೇಕಾಗುತ್ತದೆ. ಗ್ರಾ.ಪಂ. ಸಹಿತ ಆಡಳಿತ ಕಚೇರಿಗಳಲ್ಲಿ ಕನ್ನಡಿಗ ನೌಕರರು, ಅಧಿಕಾರಿಗಳನ್ನು ನೇಮಿಸಿ ಇಲ್ಲಿಯ ಕನ್ನಡಿಗರ ಶಾಸನಬದ್ಧ ಹಕ್ಕುಗಳಿಗೆ ಬೆಲೆ ನೀಡಬೇಕು ಎಂದು ಅವರು ತಿಳಿಸಿದರು.

ಕರ್ನಾಟಕ ಸಮಿತಿ ಅಧ್ಯಕ್ಷ, ನ್ಯಾಯವಾದಿ ಮುರಳೀಧರ ಬಳ್ಳುಕುರಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಡಿನಾಡು ಕಾಸರಗೋಡಿನ ಕನ್ನಡ ಮನಸ್ಸುಗಳು ಅರಳಿದಾಗ ಸಮಸ್ಯೆ ಬಗೆಹರಿಯಬಲ್ಲವು. ಹಕ್ಕು ಸಂರಕ್ಷಣೆಗೆ ಬೀದಿಗಿಳಿದು ಹೋರಾಡಬೇಕಾದ ಅನಿವಾರ್ಯತೆ ಬಂದೊದಗಿದೆ. 

ಕಾಸರಗೋಡಿನ ಎಲ್ಲ ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲ ನೌಕರರು ಮತ್ತು ಕನ್ನಡದಲ್ಲೇ ಸುತ್ತೋಲೆ, ಅರ್ಜಿ ಸಲ್ಲಿಸುವಿಕೆ ಆಗಬೇಕೆಂಬ ಸರಕಾರದ ನಿರ್ದೇಶನವಿದ್ದರೂ ಅದು ಅನುಷ್ಠಾನಗೊಳ್ಳದಿರುವುದರಲ್ಲಿ ಕನ್ನಡಿಗರ ಪ್ರಶ್ನಿಸುವಿಕೆಯ ಕೊರತೆಯಿದೆ. ಈ ಬಗ್ಗೆ ಗಟ್ಟಿ ಧ್ವನಿಯ ಬೇಡಿಕೆ ಬರಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಎಸ್‌.ವಿ. ಭಟ್‌, ಬಿ.ವಿ. ಕಕ್ಕಿಲ್ಲಾಯ, ಜಯರಾಮ ಮಂಜತ್ತಾಯ ಎಡನೀರು, ಕರ್ನಾಟಕ ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಶಂಕರನಾರಾಯಣ ಭಟ್‌ ಟಿ., ಬ್ಲಾಕ್‌ ಪಂಚಾಯತ್‌ ಸದಸ್ಯ ಅವಿನಾಶ್‌ ರೈ, ವೆಂಕಟರಮಣ ಕೆದಿಲಾಯ, ಮೊಹಮ್ಮದಾಲಿ ಪೆರ್ಲ, ವಿ.ಬಿ. ಕುಳಮರ್ವ, ಪ್ರಭಾವತಿ ಕೆದಿಲಾಯ ಮೊದಲಾದವರು ಮಾತನಾಡಿದರು.

ಸಾರ್ವಜನಿಕ ಸಭೆಗೆ ಮೊದಲು ಬದಿಯಡ್ಕ ಕ್ಯಾಂಪ್ಕೋ ಪರಿಸರದಿಂದ ಬೃಹತ್‌ ಮೆರವಣಿಗೆ ಬದಿಯಡ್ಕ ಪ್ರಧಾನ ರಸ್ತೆಯಲ್ಲಿ ಸಾಗಿ ಗ್ರಾ.ಪಂ. ಎದುರು ಸಮಾರೋಪಗೊಂಡಿತು.

ಮೆರವಣಿಗೆಯನ್ನು ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌ ಉದ್ಘಾಟಿಸಿದರು. ಸಾರ್ವಜನಿಕ ಸಭೆ ಬಳಿಕ ಗ್ರಾ. ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌ ಅವರಿಗೆ ಮನವಿ ಸಮರ್ಪಿಸಲಾಯಿತು. ಡಾ| ಬೇ.ಸಿ. ಗೋಪಾಲಕೃಷ್ಣ ಭಟ್‌ ಸ್ವಾಗತಿಸಿ, ಸಂಯೋಜಕ ರೋಹಿತ್‌ ಕುಮಾರ್‌ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.