ಇಂಗ್ಲೆಂಡ್‌  ಟೆಸ್ಟ್‌  ನಾಯಕತ್ವಕ್ಕೆ ಕುಕ್‌ ರಾಜೀನಾಮೆ


Team Udayavani, Feb 7, 2017, 3:45 AM IST

06-SPO-7.jpg

ಲಂಡನ್‌: ದಾಖಲೆಯ 59 ಪಂದ್ಯಗಳಲ್ಲಿ  ನಾಯಕರಾಗಿ ಇಂಗ್ಲೆಂಡ್‌ ಟೆಸ್ಟ್‌ ತಂಡವನ್ನು ಮುನ್ನಡೆಸಿದ್ದ ಅಲಸ್ಟೇರ್‌ ಕುಕ್‌ ಸೋಮವಾರ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿ ದ್ದಾರೆ. ಇದೊಂದು ದುಃಖದ ದಿನ ಆದರೆ ತಂಡಕ್ಕಾಗಿ ಸರಿಯಾದ ನಿರ್ಧಾರ ವೆಂದು ಪ್ರತಿಕ್ರಿಯೆ ನೀಡಿದ್ದಾರೆ.

ಟೆಸ್ಟ್‌ನಲ್ಲಿ 11,057 ರನ್‌ ಪೇರಿಸುವ ಮೂಲಕ ಇಂಗ್ಲೆಂಡಿನ ಗರಿಷ್ಠ ರನ್‌ ಸ್ಕೋರರ್‌ ಎನಿಸಿಕೊಂಡಿರುವ ಕುಕ್‌ 2012ರ ಆಗಸ್ಟ್‌ನಲ್ಲಿ ಇಂಗ್ಲೆಂಡ್‌ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಅವರ ನಾಯಕತ್ವದಲ್ಲಿ ಇಂಗ್ಲೆಂಡ್‌ ತಂಡ 2013 ಮತ್ತು 2015ರಲ್ಲಿ ತವರಿ ನಲ್ಲಿ ಆ್ಯಶಸ್‌ ಸರಣಿ ಜಯಿಸಿತ್ತು ಮಾತ್ರವಲ್ಲದೇ ಭಾರತ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಸಾಧನೆ ಮಾಡಿತ್ತು.

ಯಾರ್ಕ್‌ಶೈರ್‌ ಬ್ಯಾಟ್ಸ್‌ಮನ್‌ ಜೋ ರೂಟ್‌ ಅವರು ಕುಕ್‌ ಅವರ ಉತ್ತರಾಧಿಕಾರಿಯಾಗುವ ಫೇವರಿಟ್‌ ಆಟಗಾರ ಆಗಿದ್ದಾರೆ. ಈ ಕುರಿತ ಪ್ರಕಟನೆ ಮುಂದಿನೆರಡು ವಾರಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.

ಇಂಗ್ಲೆಂಡ್‌ ತಂಡದ ನಾಯಕನಾಗಿ ರುವುದು ಮತ್ತುಕಳೆದ ಐದು ವರ್ಷ ಟೆಸ್ಟ್‌ ತಂಡವನ್ನು ಮುನ್ನಡೆಸಿರುವುದು ನನಗೆ ಸಿಕ್ಕಿದ ಬಲುದೊಡ್ಡ ಗೌರವ ವೆಂದು ಭಾವಿಸುತ್ತೇನೆ ಎಂದು 32ರ ಹರೆಯದ ಕುಕ್‌ ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.

ನಾಯಕನ ಹುದ್ದೆಯಿಂದ ಕೆಳಗೆ ಇಳಿಯುವುದು ನಿಜವಾಗಿಯೂ ಕಠಿನ ನಿರ್ಧಾರ. ಆದರೆ ಇದು ಸರಿಯಾದ ನಿರ್ಧಾರ ಮತ್ತು ತಂಡಕ್ಕಾಗಿ ಸರಿ ಯಾದ ಸಮಯವೆಂದು ನನಗೆ ತಿಳಿದಿದೆ ಎಂದವರು ಪ್ರತಿಕ್ರಿಯೆ ನೀಡಿದರು.

2010ರಿಂದ 2014ರ ನಡುವೆ ಕುಕ್‌ ಅವರು ದಾಖಲೆಯ 69 ಏಕ ದಿನ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ವನ್ನು ಮುನ್ನಡೆಸಿದ್ದರು. ಅವರು ಗರಿಷ್ಠ ಸಂಖ್ಯೆಯ ಪಂದ್ಯಗಳಲ್ಲಿ ಟೆಸ್ಟ್‌ ನಾಯಕರಾಗಿ ತಂಡವನ್ನು ಮುನ್ನಡೆಸಿದ ಆಟಗಾರ ಆಗಿದ್ದು ಗರಿಷ್ಠ ಸಂಖ್ಯೆಯ ಟೆಸ್ಟ್‌ ಶತಕಗಳನ್ನು ಸಿಡಿಸಿದವರಾಗಿದ್ದಾರೆ. 

2012ರಲ್ಲಿ ಅವರು ವಿಸ್ಡನ್‌ ವರ್ಷದ ಶ್ರೇಷ್ಠ  ಕ್ರಿಕೆಟಿಗ ಮತ್ತು 2013ರಲ್ಲಿ ಐಸಿಸಿ ವಿಶ್ವದ ಶ್ರೇಷ್ಠ ಟೆಸ್ಟ್‌ ನಾಯಕರೆಂಬ ಗೌರವಕ್ಕೆ ಕುಕ್‌ ಪಾತ್ರರಾಗಿದ್ದರು.

ಕುಕ್‌ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಚೇರ್ಮನ್‌ ಕಾಲಿನ್‌ ಗ್ರೇವ್ಸ್‌ ಅವರಿಗೆ ರವಿವಾರ ರಾಜೀನಾಮೆ ಸಲ್ಲಿಸಿದ್ದರು. ಆದರೆ ಕುಕ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. 

ಹಲವು ಕಾರಣಗಳಿಗಾಗಿ ಇದೊಂದು ವೈಯಕ್ತಿಕವಾಗಿ ದುಃಖದ ದಿನ. ಆದರೆ ನಾನು ನಾಯಕತ್ವ ವಹಿಸಿದಾಗ ಸಹಕರಿಸಿದ ಎಲ್ಲರಿಗೂ, ಎಲ್ಲ ಕೋಚ್‌ಗಳಿಗೂ ಮತ್ತು ಬೆಂಬಲ ಸಿಬಂದಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇವರ ಜತೆ ಇಂಗ್ಲೆಂಡಿನ ಅಭಿಮಾನಿಗಳಿಗೆ ಮತ್ತು ಬಾರ್ಮಿ ಆರ್ಮಿಗೆ ಕೂಡ ಕೃತಜ್ಞತೆ ಸಲ್ಲಿಸುವೆ
ಅಲಸ್ಟೇರ್‌ ಕುಕ್‌

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.