ಜಯಾ ಸಾವು; ಯಾವುದೇ ತನಿಖೆಗೂ ಸಿದ್ಧ: ಶಶಿಕಲಾ
Team Udayavani, Feb 9, 2017, 3:45 AM IST
– ಸಿಎಂ ಆಗುತ್ತೇನೆಂಬ ನಂಬಿಕೆ ಶೇ.100ರಷ್ಟಿದೆ
– ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೆ
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾ ಅವರ ಸಾವಿನ ಸಂಬಂಧ ಯಾವುದೇ ರೀತಿಯ ತನಿಖೆಗೂ ನಾನು ಸಿದ್ಧ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಹೇಳಿದ್ದಾರೆ.
ಬುಧವಾರ ಖಾಸಗಿ ವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಜಯಾ ಸಾವಿನ ಬಗ್ಗೆ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.
“ನಾನು ಯಾರೆಂಬುದು ಅಮ್ಮಾಗೆ ಗೊತ್ತು. ನಾನು ಯಾರಿಗೂ ಉತ್ತರಿಸಬೇಕಾದ ಅಗತ್ಯವಿಲ್ಲ. ತಮಿಳುನಾಡಿನ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತೇನೆ ಎಂಬ ನಂಬಿಕೆ ನನಗೆ ಶೇ. 100ರಷ್ಟಿದೆ’ ಎಂದು ಶಶಿಕಲಾ ನುಡಿದಿದ್ದಾರೆ.
ಇದೇ ಸಂದರ್ಭ ವಿಪಕ್ಷ ಡಿಎಂಕೆ ವಿರುದ್ಧವೂ ಹರಿಹಾಯ್ದ ಶಶಿಕಲಾ, “ಪನ್ನೀರ್ಸೆಲ್ವಂ ಅವರ ಇತ್ತೀಚೆಗಿನ ವರ್ತನೆಯ ಹಿಂದೆ ಡಿಎಂಕೆ ಕೈವಾಡವಿದೆ. ಡಿಎಂಕೆ ಯಾವತ್ತೂ ನಮ್ಮ ಪಕ್ಷವನ್ನು ನಾಶ ಮಾಡಲು ಯತ್ನಿಸಿದೆ’ ಎಂಬ ಆರೋಪವನ್ನೂ ಮಾಡಿದ್ದಾರೆ.
“ಜಯಾರನ್ನು ಆಸ್ಪತ್ರೆಗೆ ಸೇರಿಸಲು ವಿಳಂಬ ಮಾಡಿದೆ ಎಂಬ ಆರೋಪ ಸುಳ್ಳು. ನಾನು ಅಮ್ಮಾನನ್ನು ಹೇಗೆ ನೋಡಿಕೊಂಡೆ ಎಂಬುದು ನನ್ನ ಹಿರಿಯ ಸಹೋದರಿ, ಆಸ್ಪತ್ರೆಯಲ್ಲಿದ್ದ ಎಲ್ಲರಿಗೂ ಗೊತ್ತು.
ಈಗ ಅಮ್ಮಾ ಸಾವಿನ ಕುರಿತು ಯಾವುದೇ ತನಿಖೆ ನಡೆದರೂ ನನಗೆ ಭಯವಿಲ್ಲ. ಕೊನೆಯ ದಿನದವರೆಗೂ ಆಸ್ಪತ್ರೆಯಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಅಮ್ಮಾ ಅವರು ಜಯಾ ಟಿವಿಯಲ್ಲಿ ಧಾರಾವಾಹಿಯನ್ನೂ ವೀಕ್ಷಿಸಿದ್ದರು. ಪನ್ನೀರ್ಸೆಲ್ವಂ ಮತ್ತು ಪಾಂಡಿಯನ್ ಅಮ್ಮನಿಗೆ ಮೋಸ ಮಾಡಿದರು,” ಎಂದೂ ಶಶಿಕಲಾ ಹೇಳಿದ್ದಾರೆ. ಇದೇ ವೇಳೆ, ರಾಜಕೀಯ ಬಿಕ್ಕಟ್ಟಿನಲ್ಲಿ ಬಿಜೆಪಿಯ ಪಾತ್ರವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ