ಮಧ್ಯಾಹ್ನ 2 ಗಂಟೆಗೆ ರಾಜ್ಯಪಾಲ ವಿದ್ಯಾಸಾಗರ ಜೊತೆ ಶಶಿಕಲಾ ಭೇಟಿ
Team Udayavani, Feb 9, 2017, 10:49 AM IST
ಚೆನ್ನೈ : ತಮಿಳು ನಾಡಿನಲ್ಲಿ ನಡೆಯುತ್ತಿರುವ ರಾಜಕೀಯ ಪ್ರಹಸನಕ್ಕೆ ಹೊಸ ತಿರುವು ಸಿಗುವ ಇನ್ನೊಂದು ಸೂಚನೆ ಎಂಬಂತೆ ಇಂದು ಗುರುವಾರ ರಾಜ್ಯಪಾಲ ವಿದ್ಯಾಸಾಗರಾವ್ ಅವರು ಚೆನ್ನೈ ತಲುಪಲಿದ್ದು ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ನಟರಾಜನ್ ಅವರನ್ನು ಭೇಟಿಯಾಗಲಿರುವುದಾಗಿ ತಿಳಿದು ಬಂದಿದೆ.
ಪ್ರಭಾರ ಮುಖ್ಯಮಂತ್ರಿ ಓ ಪನ್ನೀರ ಸೆಲ್ವಂ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಅವರು ಆಳುವ ಪಕ್ಷದಲ್ಲಿ ತಮಗೇ ಬಹುಮತವಿದೆ ಎಂದು ಹೇಳಿಕೊಳ್ಳುತ್ತಿರುವಂತೆಯೇ ಉಭಯತರೊಳಗಿನ ಜಟಾಪಟಿ ತಾರಕಕ್ಕೇರಿದೆ.
ಈ ನಡುವೆ ಪನ್ನೀರಸೆಲ್ವಂ ತಾನು ಪಕ್ಷದ ಕೋಶಾಧಿಕಾರಿಯಾಗಿರುವುದರಿಂದ ತನ್ನ ಅನುಮತಿ ಇಲ್ಲದೇ ಯಾವುದೇ ಹಣಕಾಸು ವ್ಯವಹಾರ ನಡೆಯಲು ಬಿಡಕೂಡದು ಎಂದು ಬ್ಯಾಂಕುಗಳಿಗೆ ಪತ್ರ ಬರೆದಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ಹೊತ್ತಿಗೆ ರಾಜ್ಯಪಾಲ ವಿ ವಿದ್ಯಾಸಾಗರ ರಾವ್ ಅವರು ಎಐಎಡಿಎಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮತ್ತು ಪಕ್ಷದ ಶಾಸಕರನ್ನು ಭೇಟಿಯಾಗಲಿರುವರೆಂದು ತಿಳಿದುಬಂದಿದೆ. ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ಇಂದು ಮಧ್ಯಾಹ್ನ 12.10ರ ಸುಮಾರಿಗೆ ಮುಂಬಯಿಯಿಂದ ಹೊರಡುವ ನಿರೀಕ್ಷೆ ಇದೆ.
ಇದೇ ವೇಳೆ ತಮಿಳು ನಾಡು ಸರಕಾರ ಮಾಜಿ ಮುಖ್ಯ ಕಾರ್ಯದರ್ಶಿ ಗಣದೇಶಿಕನ್ ಮತ್ತು ಐಎಎಸ್ ಅತುಲ್ ಆನಂದ್ ಅವರ ಮೇಲಿನ ಅಮಾನತನ್ನು ತೆರವುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ