ಉಪಹಾರ್ ಅಗ್ನಿ ದುರಂತ ಕೇಸ್; ಅನ್ಸಾಲ್ ಗೆ 1 ವರ್ಷ ಜೈಲು: ಸುಪ್ರೀಂ
Team Udayavani, Feb 9, 2017, 3:09 PM IST
ನವದೆಹಲಿ:ಉಪಹಾರ್ ಚಿತ್ರಮಂದಿರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 1997 ಜೂನ್ 13ರಂದು ದೋಷಿಯಾಗಿದ್ದ ಗೋಪಾಲ್ ಅನ್ಸಾಲ್ ಒಂದು ವರ್ಷ ಜೈಲುಶಿಕ್ಷೆ ಅನುಭವಿಸಬೇಕೆಂದು ಗುರುವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅನ್ಸಾಲ್ ಈಗಾಗಲೇ 4 ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದ.
59 ಜನರ ಸಾವಿಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಗೋಪಾಲ್ ಅನ್ಸಾಲ್ ನಾಲ್ಕು ವಾರಗಳೊಳಗೆ ಶರಣಾಗಿ ಉಳಿದಿರುವ ಜೈಲುಶಿಕ್ಷೆಯನ್ನು ಅನುಭವಿಸಬೇಕೆಂದು ಸುಪ್ರೀಂಕೋರ್ಟ್ ಪೀಠ ಬಹುಮತದ(2:1) ತೀರ್ಪನ್ನು ನೀಡಿದೆ.
ಉಪಹಾರ್ ಚಿತ್ರಮಂದಿರದ ಅಗ್ನಿದುರಂತ ಘಟನೆಯಲ್ಲಿ ಸುಶೀಲ್ ಅನ್ಸಾಲ್ ಕೂಡಾ ದೋಷಿಯಾಗಿದ್ದು, ಈಗಾಗಲೇ 4 ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದು, ವಯೋಮಾನದ ದೃಷ್ಟಿಯಿಂದ ಬಾಕಿ ಉಳಿದಿರುವ ಜೈಲುಶಿಕ್ಷೆಯಿಂದ ವಿನಾಯ್ತಿ ನೀಡಲಾಗಿದೆ.
2015ರ ಆಗಸ್ಟ್ 19 ರಂದು ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಸುಶೀಲ್ ಮತ್ತು ಗೋಪಾಲ್ಗೆ 30 ಕೋಟಿ ರೂ. ಪರಿಹಾರವನ್ನು ಮೃತರ ಕುಟುಂಬಸ್ಥರಿಗೆ ನೀಡಬೇಕು ಎಂದು ತೀರ್ಪು ನೀಡಿತ್ತು. 3 ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದರೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದೂ ಸಹ ತಿಳಿಸಿತ್ತು. ಕೋರ್ಟ್ ತೀರ್ಪಿನ ನಂತರ ಅನ್ಸಾಲ್ ಸಹೋದರರು ಪರಿಹಾರದ ಮೊತ್ತವನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪಾವತಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!