ಅಮರಾವತಿ ಎಂಬ ಕಸದ ನಗರಿ


Team Udayavani, Feb 10, 2017, 3:45 AM IST

Amaravathi.jpg

“ಜಟ್ಟ’ ಚಿತ್ರದ ಚಿತ್ರೀಕರಣವನ್ನು ಮುಗಿಸಿ ಗಿರಿರಾಜ್‌ ಮತ್ತು ತಂಡದವರು ಬೆಂಗಳೂರಿಗೆ ಬರುವಷ್ಟರಲ್ಲಿ ಕಸದ ಸಮಸ್ಯೆ ಶುರುವಾಗಿತ್ತಂತೆ. ಆಗಲೇ ಯಾಕೆ ಈ ವಿಷಯದ ಕುರಿತು ಒಂದು ಸಿನಿಮಾ ಮಾಡಬಾರದು ಎಂಬ ಯೋಚಸ‌ನೆ ಗಿರಿರಾಜ್‌ಗೆ ಬಂದಿತ್ತಂತೆ.

“ಮೂರು ದಿನಗಳ ಕಾಲ ಅವರು ಧರಣಿ ಕೂತರು. ಆಗ ಶುರುವಾದ ಕಸದ ಸಮಸ್ಯೆ, ಇನ್ನೂ ಬಗೆಹರಿದಿಲ್ಲ. ಕಸದ ಸಮಸ್ಯೆ ಬಹಳ ದೊಡ್ಡದು. ಪೌರ ಕಾರ್ಮಿಕರ ಸಮಸ್ಯೆ ಸಹ ದೊಡ್ಡದು. ಸಾಂಕ್ರಾಮಿಕ ರೋಗಗಳ ವಿರುದ್ಧ ಅವರು ಹೋರಾಡಬೇಕು, ಎಷ್ಟೋ ಜನ ಚರಂಡಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಅವರ ಬಗ್ಗೆ ಯಾರಿಗೂ ಹೆಚ್ಚಿಗೆ ಗಮನವಿಲ್ಲ’ ಎಂದು ಗಿರಿರಾಜ್‌ ಹೇಳಿಕೊಂಡರು. ಆ ಸಿನಿಮಾದ ಹೆಸರೇ “ಅಮರಾವತಿ’. ಈ ವಾರ ಬಿಡುಗಡೆಯಾಗುತ್ತಿರುವ ಐದು ಚಿತ್ರಗಳಲ್ಲಿ ಅದೂ ಸಹ ಒಂದು. ಬಿಡುಗಡೆಗೆ ಒಂದು ವಾರವಿದೆ ಅನ್ನುವಷ್ಟರಲ್ಲಿ ಚಿತ್ರದ ಬಗ್ಗೆ ಮಾತನಾಡುವುದರ ಜೊತೆಗೆ, ಹಾಡುಗಳನ್ನು ಸಹ ಬಿಡುಗಡೆ ಮಾಡಿಸಿದರು ಗಿರಿರಾಜ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿಸುವುದಕ್ಕೆ ಹಿರಿಯ ನಿರ್ದೇಶಕ ಶಿವಮಣಿ ಅವರನ್ನು ಕರೆಸಿದ್ದರು. ಹಾಡುಗಳ ಬಿಡುಗಡೆಗೂ ಮುನ್ನ ಮಾತುಗಳು.

“ಮೊದಲೇ ಹೇಳಿದಂತೆ ಹಲವು ವಿಷಯಗಳಿವೆ. ಪ್ರಮುಖವಾಗಿ ನಾವು ಕಸ ಹಾಕುವಾಗ ವಿಂಗಡೆ ಮಾಡಿ ಹಾಕಬೇಕು. ಈ ವಿಷಯದ ಕುರಿತು ಅರಿವಾದರೆ, ಸಮಸ್ಯೆ ಬಗೆಹರಿಯಬಹುದು. ನಾನು ಒಂದು ವರದಿ ಓದುತ್ತಿದ್ದೆ. ದೆಹಲಿಯಲ್ಲಿ ಅದೆಷ್ಟೋ ಪೌರಕಾರ್ಮಿಕರು ಏಡ್ಸ್‌ಗೆ ತುತ್ತಾಗಿದ್ದರು. ಈ ಕುರಿತು ತನಿಖೆ ನಡೆಸಿದಾಗ ಗೊತ್ತಾಗಿದ್ದೇನೆಂದರೆ, ಅವೆಲ್ಲಾ ಆಸ್ಪತ್ರೆಯೊಂದರ ತ್ಯಾಜ್ಯವನ್ನು ಎಸೆಯುವಾಗ ಹತ್ತಿದ ಸೋಂಕು ಅಂತ. ಆ ಆಸ್ಪತ್ರೆಯಲ್ಲಿ ಏಡ್ಸ್‌ ರೋಗಿಗಳ ವಿಭಾಗವಿತ್ತಂತೆ. ಅವರಿಗೆ ಚುಚ್ಚಿದ ಸಿರಿಂಜ್‌ಗಳು, ಇವರಿಗೆ ಚುಚ್ಚಿ ಏಡ್ಸ್‌ ಸೋಂಕು ತಗಲಿದೆ. ಈ ಒಂದು ನಿರ್ಲಕ್ಷ್ಯದಿಂದ ಆದ ಅನಾಹುತ ಅಷ್ಟಿಷ್ಟಲ್ಲ. ಮೈಮರೆತಾಗ ಆಗುವ ಅವಾಂತರದಿಂದ ಏನೆಲ್ಲಾ ಆಗುತ್ತದೆ ಎನ್ನುವುದನ್ನು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದೇನೆ’ ಎನ್ನುತ್ತಾರೆ ಗಿರಿರಾಜ್‌.

ಈ ಚಿತ್ರವನ್ನು ಮಾಧವ ರೆಡ್ಡಿ ಎನ್ನುವವರು ನಿರ್ಮಿಸಿದ್ದಾರೆ. ಅವರು ಗಿರಿರಾಜ್‌ ಅವರ ತಂದೆಯ ಸ್ನೇಹಿತರಂತೆ. ಅವರಿಗೆ ಈ ಕಥೆಯ ರಿಸ್ಕ್ ಹೇಳಿದಾಗ ಅವರು, ಈ ಚಿತ್ರದಿಂದ ದುಡ್ಡು ಬರುತ್ತದೋ ಇಲ್ಲವೋ ಗೊತ್ತಿಲ್ಲ, ಹೆಮ್ಮೆ ಇರಬೇಕು ಅಂದರಂತೆ. ಅದರಂತೆ ಅವರೇ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ, 18 ರಂಗಭೂಮಿ ಪ್ರತಿಭೆಗಳನ್ನು ಪರಿಚಯಿಸಲಾಗಿದೆ. ಜೊತೆಗೆ ಅಚ್ಯುತ್‌ ಕುಮಾರ್‌, ವೈಶಾಲಿ ದೀಪಕ್‌ ಮುಂತಾದವರು ನಟಿಸಿದ್ದಾರೆ. ಅಭಿಲಾಷ್‌ ಲಾಖÅ ಮತ್ತು ಜೋಯೆಲ್‌ ಡುಬ್ಬ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.