ಕಿರುಕುಳ ಸಹಿಸದೇ ಲೆಕ್ಕ ಅಧಿಕಾರಿ ರಾಜೀನಾಮೆ


Team Udayavani, Feb 10, 2017, 3:50 AM IST

resignation.jpg

ಬೆಂಗಳೂರು: ಲೆಕ್ಕಪರಿಶೋಧನೆ ಹೆಸರಲ್ಲಿ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಆಗುತ್ತಿರುವುದನ್ನು ಗಮನಕ್ಕೆ ತಂದ ಲೆಕ್ಕಪರಿಶೋಧಕರೊಬ್ಬರು ಅಧಿಕಾರಿಗಳ ಕಿರುಕುಳ ತಾಳದೆ ರಾಜೀನಾಮೆ ನೀಡಿದ ಘಟನೆ ವರದಿಯಾಗಿದೆ.

ಸಮವರ್ತಿ ಲೆಕ್ಕಪರಿಶೋಧನೆ ಹೆಸರಲ್ಲಿ ಕೋಟ್ಯಂತರ ರೂ. ದುಂದು ವೆಚ್ಚ ಆಗುತ್ತಿರುವುದನ್ನು ಗಮನಿಸಿದ ನಿವೃತ್ತ ಲೆಕ್ಕಾಧಿಕಾರಿಯೂ ಆಗಿರುವ ಸದ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಅರ್ಥಿಕ ಸಲಹೆಗಾರರ ಶಾಖೆಯಲ್ಲಿ ಕಳೆದ 8 ತಿಂಗಳಿಂದ ಹೊರಗುತ್ತಿಗೆ ಲೆಕ್ಕ ಸಮಾಲೋಚಕರಾಗಿ ಸೇವೆ ಸಲ್ಲಿಸುತ್ತಿದ್ದ ಜಿ. ನಿಜಗುಣ ಮೂರ್ತಿ, ಮೇಲಧಿಕಾರಿಗಳ ಗಮನಕ್ಕೆ ತಂದರು. ಆಂತರಿಕ ಆರ್ಥಿಕ ಸಲಹೆಗಾರರಿಗೆ ಪತ್ರ ಬರೆದರು. ಅವರ ಪತ್ರದ ಆಧಾರದಲ್ಲಿ 13.86 ಕೋಟಿ ರೂ. ವ್ಯರ್ಥ ವೆಚ್ಚ ಆಗಿದೆ ಎಂದು ಆಂತರಿಕ ಆರ್ಥಿಕ ಸಲಹೆಗಾರರ, ಆಯುಕ್ತರಿಗೆ ಟಿಪ್ಪಣಿ ಬರೆದರು. ಆದರೂ ಯಾವುದೇ ಕ್ರಮ ಆಗಿಲ್ಲ. ಅಂತಿಮವಾಗಿ ಈ ವಿಚಾರವನ್ನು ನಿಜಗುಣ ಅವರು ಗ್ರಾಮೀಣಾಭಿವೃದ್ಧಿ ಸಚಿವರ ಗಮನಕ್ಕೂ ತಂದರು. ಈ ನಡುವೆ ನಿಜಗುಣ ಅವರಿಗೆ ಮೇಲಧಿಕಾರಿಗಳಿಂದ “ಅಸಹಕಾರ ಧೋರಣೆ’ ಆರಂಭವಾಯಿತು. ಬೇಸತ್ತ ನಿಜಗುಣ ಫೆ.3ರಂದು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಹೊರನಡೆದಿದ್ದಾರೆ.

ಅಧಿಕಾರಿಗಳಿಗೆ ಪಾರದರ್ಶಕತೆ ಹೆಸರಿನಲ್ಲಿ “ಬಣ್ಣದ ಕಲ್ಪನೆ’ಗಳನ್ನು ತೇಲಿಬಿಟ್ಟು ಗ್ರಾಮೀಣಾಭಿವೃದ್ಧಿ ಇಲಾಖೆಯ ಉದ್ಯೋಗ ಖಾತರಿ ಸೇರಿ ವಿವಿಧ ಯೋಜನೆಗಳ “ಸ್ವತಂತ್ರ ಸಮವರ್ತಿ ಲೆಕ್ಕಪರಿಶೋಧನೆ’ಯ ಗುತ್ತಿಗೆ ಗಿಟ್ಟಿಸಿಕೊಂಡಿರುವ 14 ಖಾಸಗಿ ಲೆಕ್ಕಪರಿಶೋಧಕರ ಜಾಲ ಮೂರು ವರ್ಷದ ಅವಧಿಯಲ್ಲಿ 13.86 ಕೋಟಿ  ರೂ.ಗಳನ್ನು  “ಖಾತರಿ’ಪಡಿಸಿಕೊಂಡಿದೆ.

ಇಲಾಖೆಯ ಯೋಜನೆಗಳ “ಶಾಸನಬದ್ಧ ಲೆಕ್ಕಪರಿಶೋಧನೆ’ಯನ್ನು ಮಾತ್ರ ಖಾಸಗಿ ಲೆಕ್ಕಪರಿಶೋಧಕರಿಂದ ಮಾಡಿಸಬಹುದು. ಇದು ಬಹಳ ಹಿಂದಿನಿಂದ ನಡೆದು ಬಂದ ಪದ್ದತಿ. ಆದರೆ, 2014ರಲ್ಲಿ “ಸ್ವತಂತ್ರ ಸಮವರ್ತಿ ಲೆಕ್ಕಪರಿಶೋಧನೆ’ ಪದ್ಧತಿ ಜಾರಿಗೆ ತರುವಲ್ಲಿ ಯಶಸ್ವಿಯಾದ ಕೆಲ ಖಾಸಗಿ ಲೆಕ್ಕಪರಿಶೋಧಕರು, ಅಧಿಕಾರಿಗಳ “ನೆರವಿನಿಂದ’ ಕಾಯ್ದೆ-ನಿಯಮಗಳಲ್ಲಿ ಅವಕಾಶವೇ ಇಲ್ಲದ ಪರ್ಯಾಯ ವ್ಯವಸ್ಥೆಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಜಾರಿಗೆ ತಂದ ಈ ಸಮವರ್ತಿ ಲೆಕ್ಕಪರಿಶೋಧನೆ ವ್ಯವಸ್ಥೆಗೆ ಯಾವುದೇ ಸರ್ಕಾರಿ ಆದೇಶವಿಲ್ಲ. 

ಗ್ರಾಮೀಣಾಭಿವೃದ್ಧಿ ಸಚಿವರ ಅನುಮೋದನೆಯೂ ಇಲ್ಲ. ಆರ್ಥಿಕ ಇಲಾಖೆಯ ಸಹಮತಿ ಇಲ್ಲ. ಸಚಿವ ಸಂಪುಟದ ಒಪ್ಪಿಗೆ ಇಲ್ಲ ಎನ್ನಲಾಗಿದೆ.

ಅದರಂತೆ, 2014-15 ರಿಂದ 2016-17ನೇ ಸಾಲಿನಲ್ಲಿ ಮೂರು ವರ್ಷಗಳ ಅವಧಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಉದ್ಯೋಗ ಖಾತರಿ ಸೇರಿ ಇತರ ಯೋಜನೆಗಳ “ಸ್ವತಂತ್ರ ಸಮವರ್ತಿ ಲೆಕ್ಕಪರಿಶೋಧನೆಗೆ’ 29 ಜಿಲ್ಲೆಗಳಲ್ಲಿ ಖಾಸಗಿ ಲೆಕ್ಕಪರಿಶೋಧಕರನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕೆ ಏಳು ಖಾಸಗಿ ಲೆಕ್ಕಪರಿಶೋಧಕರು 22 ಜಿಲ್ಲೆಗಳ ಲೆಕ್ಕಪರಿಶೋಧನಾ ಕಾರ್ಯಾದೇಶ ಪಡೆದುಕೊಂಡಿದ್ದರೆ, ಉಳಿದ 7 ಲೆಕ್ಕಪರಿಶೋಧಕರು ಬಾಕಿ ಏಳು ಜಿಲ್ಲೆಗಳ ಕಾರ್ಯಾದೇಶ ಪಡೆದುಕೊಂಡಿದ್ದಾರೆ. ಇದಕ್ಕಾಗಿ ಪ್ರತಿ ವರ್ಷ 4.62 ಕೋಟಿ ರೂ.ಗಳಂತೆ ಮೂರು ವರ್ಷದ ಅವಧಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ 13.86 ಕೋಟಿ ರೂ. ವೆಚ್ಚ ಮಾಡಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.