ತಪ್ಪಿದ ಭಾರೀ ಅನಾಹುತ: ಆಗಸದಲ್ಲೇ ಗೋಏರ್ ವಿಮಾನದ ರೆಕ್ಕೆಗೆ ಬೆಂಕಿ!
Team Udayavani, Feb 10, 2017, 9:47 AM IST
ಹೊಸದಿಲ್ಲಿ: ಭಾರೀ ವಿಮಾನ ದುರಂತವೊಂದು ಅದೃಷ್ಟವಷಾತ್ ತಪ್ಪಿ ಹೋಗಿದ್ದು, ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರಾಟ ನಡೆಸುತ್ತಿದ್ದ ವಿಮಾನದ ರೆಕ್ಕೆಗೆ ಆಗಸದಲ್ಲೇ ಬೆಂಕಿ ಹೊತ್ತಿಕೊಂಡ ಆತಂಕಕಾರಿ ಘಟನೆ ಗುರುವಾರ ಸಂಜೆ ನಡೆದಿದೆ.
ರೆಕ್ಕೆಯಲ್ಲಿ ಬೆಂಕಿ ನೋಡಿದ ಕೂಡಲೇ ಸಿಬಂದಿಗಳಿಗೆ ವಿಚಾರ ತಿಳಿಸಿದ್ದು, ತಕ್ಷಣವೇ ವಿಮಾನದ ಪೈಲಟ್ ಸವಾಲನ್ನು ಸ್ವೀಕರಿಸಿ ವಿಮಾನವನ್ನು ಲ್ಯಾಂಡ್ ಮಾಡುವಲ್ಲಿ ಯಶಸ್ವಿಯಾದರು. ತಕ್ಷಣವೇ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಲಾಯಿತು.
ಈ ಭಯಾನಕ ಅನುಭವವನ್ನು ಸೌರಭ್ ಟೆಂಡನ್ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು, ನಾನು ವಿಮಾನದ ಪ್ರಯಾಣಿಕರಲ್ಲಿ ಒಬ್ಬನಾಗಿದ್ದೆ. ವಿಮಾನ ಹಾರಾಟ ನಡೆಸುತ್ತಿದ್ದ ವೇಳೆ ಪ್ರಯಾಣಿಕರು ಬೆಂಕಿ,ಬೆಂಕಿ ಎಂದು ಕೂಗಿದ್ದು ನಾನು ಎಡ ಬದಿಯ ರೆಕ್ಕೆಯನ್ನು ನೋಡಿದಾಗ ಬೆಂಕಿ ಉರಿಯುತ್ತಿತ್ತು. ಸುಮಾರು 30 ಸೆಕೆಂಡುಗಳ ಕಾಲ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಪೈಲೆಟ್ ವಿಮಾನದ ಇಂಜಿನ್ ಆಫ್ ಮಾಡಿ 30 ನಿಮಿಷಗಳ ಒಳಗಾಗಿ ಲ್ಯಾಂಡ್ ಮಾಡುವಲ್ಲಿ ಸಫಲರಾದರು.ನಿಜವಾಗಿಯೂ ಅವರೊಬ್ಬ ಹೀರೋ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ