ಉ.ಪ್ರ. ಇಂದು ಮೊದಲ ಹಂತ: 839 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Team Udayavani, Feb 11, 2017, 3:45 AM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಶನಿವಾರದಿಂದ ಮತದಾನ ಆರಂಭವಾಗಲಿದೆ. ಒಟ್ಟು ಏಳು ಹಂತಗಳ ಪೈಕಿ ಇದು ಮೊದಲನೇಯದ್ದು. ಪಶ್ಚಿಮ ಉತ್ತರ ಪ್ರದೇಶದ 73 ಕ್ಷೇತ್ರಗಳಲ್ಲಿನ 839 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್ ಮೈತ್ರಿ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನೋಯ್ಡಾ ಕ್ಷೇತ್ರದಿಂದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್, ಮಥುರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಮಾಥೂರ್, ತಾನಾಭವನ್ನಿಂದ ಬಿಜೆಪಿಯ ವಿವಾದಿತ ಶಾಸಕ ಸುರೇಶ್ ರಾಣಾ ಮುಖ್ಯವಾಗಿ ಕಣದಲ್ಲಿದ್ದಾರೆ.
ಮೋದಿ ಲೇವಡಿ: ಉ.ಪ್ರ.ದ ಬಿಜ್ನೋರ್ನಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ರ್ಯಾಲಿ ನಡೆಸಿ, ಎಸ್ಪಿ-ಕಾಂಗ್ರೆಸ್ ಮೈತ್ರಿ ವಿರುದ್ಧ ಹರಿಹಾಯ್ದಿದ್ದಾರೆ. ಉತ್ತರಪ್ರದೇಶ ಮತ್ತು ಇಡೀ ದೇಶವನ್ನು ಲೂಟಿ ಮಾಡಿದ ಎರಡು ಕುಟುಂಬಗಳನ್ನು ಸೋಲಿಸಿ ಎಂದು ಕರೆ ನೀಡಿದ್ದಾರೆ. “ಗೂಗಲ್ನಲ್ಲಿ ಹುಡುಕಾಡಿದರೆ ರಾಹುಲ್ ಬಗ್ಗೆ ಇರುವಷ್ಟು ಜೋಕ್ಗಳು ಬೇರೆ ಯಾವ ನಾಯಕನ ಬಗ್ಗೆಯೂ ಇಲ್ಲ’ ಎಂದಿದ್ದಾರೆ.
ರೇಪಿಸ್ಟ್ಗಳಿಗೆ ಉಪ್ಪು ಸವರಿ: ಉಮಾ
ಉತ್ತರ ಪ್ರದೇಶದ ಬುಲಾಂದ್ ಶಹರ್ನಲ್ಲಿ ನಡೆದ ಗ್ಯಾಂಗ್ರೇಪ್ ಅಪರಾಧಿಗಳನ್ನು ಬಂಧಿಸಲು ವಿಫಲವಾದ ಎಸ್ಪಿ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಉಮಾಭಾರತಿ ಗುಡುಗಿದ್ದಾರೆ. “ಯಾರು ಬಲತ್ಕಾರದಂಥ ದುಷ್ಕೃತ್ಯ ಎಸಗುತ್ತಾರೋ, ಅಂಥವರನ್ನು ಉಲ್ಟಾ ನೇತು ಹಾಕಬೇಕು. ಚರ್ಮ ಸುಲಿಯುವ ತನಕ ಅವರನ್ನು ಥಳಿಸಬೇಕು. ರಕ್ತ ಸೋರುತ್ತಿರುವ ಆ ಗಾಯಕ್ಕೆ ಉಪ್ಪು ಮತ್ತು ಖಾರದ ಪುಡಿಯನ್ನು ಸವರಬೇಕು’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ