ನಾಗರಹಾವನ್ನು ಬೆನ್ನಟ್ಟಿ ನುಂಗಿದ ಕಾಳಿಂಗ!


Team Udayavani, Feb 14, 2017, 5:19 PM IST

shivmogga.jpg

ಹೊಸನಗರ: ನಾಗರಹಾವನ್ನು ಬೆನ್ನಟ್ಟಿ ಬಂದ ಕಾಳಿಂಗ ಬೆದರಿ ಹುತ್ತ ಸೇರುತ್ತಿದ್ದರೂ ಬಿಡದೇ ನಾಗರಹಾವನ್ನು ಹೊರಗೆಳೆದು ಸಂಪೂರ್ಣ ನುಂಗಿದ ಅಪರೂಪದ ದೃಶ್ಯಕ್ಕೆ ಮುಂಡಳ್ಳಿ ಗ್ರಾಮ ಸಾಕ್ಷಿಯಾಯಿತು. ಹೌದು, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಡಳ್ಳಿ ಗ್ರಾಮದಲ್ಲಿ ರವಿವಾರ ಸಂಜೆ ಈ ಅಪರೂಪದ ಘಟನೆ ನಡೆದಿದೆ. ಬೆನ್ನಟ್ಟಿ ಬಂದ ಕಾಳಿಂಗ ಸರ್ಪಕ್ಕೆ ಬೆದರಿ ಹುತ್ತ ಸೇರಿಕೊಂಡಿತ್ತು ನಾಗರಹಾವು.

ಆದರೂ ಬಿಡದ ಕಾಳಿಂಗ ಹುತ್ತದೊಳಕ್ಕೆ ಹೊಕ್ಕು ನಾಗರಹಾವನ್ನು ಹೊರಗೆಳೆದು ನುಂಗಲು ಆರಂಭಿಸಿತು. ಸುತ್ತಮುತ್ತಲು ಜನ ಸೇರಿದ್ದರೂ ಕೂಡ ಅದ್ಯಾವುದನ್ನು ಲೆಕ್ಕಿಸದ ಕಾಳಿಂಗ ಕೇವಲ 10 ನಿಮಿಷದಲ್ಲಿ ನಾಗರಹಾವು ನುಂಗಿ ಹಾಕಿತ್ತು. ಹಾವೆಂದರೇ ಭಯ ಬೀಳುವ ಮಂದಿ ಈ ಅಪರೂಪದ ದೃಶ್ಯವನ್ನು ಕುತೂಹಲದಿಂದ ವೀಕ್ಷಿಸಿದರು. 

ಸುದ್ದಿ ಮುಟ್ಟಿಸಿದರು: ಮುಂಡಳ್ಳಿ ಗ್ರಾಮದ ಮನೆಗಳ ಪಕ್ಕದಲ್ಲಿ ನಾಗರಹಾವನ್ನು ಕಾಳಿಂಗ ಸರ್ಪವೊಂದು ಬೆನ್ನಟ್ಟಿ ಬೇಟೆಯಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಆಗುಂಬೆಯ ಮಳೆಕಾಡು ಉರಗ ತಜ್ಞ ಅಜಯಗಿರಿಗೆ ಸುದ್ದಿ ಮುಟ್ಟಿಸಿದರು. ಆದರೆ ಅವರು ಸ್ಥಳಕ್ಕೆ ಬರುವ ಹೊತ್ತಿಗೆ ಕಾಳಿಂಗ ಅರ್ಧದಷ್ಟು ಹಾವನ್ನು ನುಂಗಿ ಆಗಿತ್ತು. ಕಾಳಿಂಗ ಸರ್ಪ ಹಾವನ್ನು ಸಂಪೂರ್ಣ ನುಂಗಿದ ಮೇಲೆ ಕಾಳಿಂಗನನ್ನು ಸೆರೆ ಹಿಡಿದು ಸಮೀಪದ ಕಾಡಿಗೆ ಬಿಟ್ಟರು. 

ಅಪರೂಪದ ದೃಶ್ಯ: ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಆದರೆ ಕಾಳಿಂಗ ಸರ್ಪ ನಾಗರಹಾವನ್ನು ನುಂಗುವ ದೃಶ್ಯ ಕಂಡು ಬಂದಿದ್ದು ಮಾತ್ರ ಅಪರೂಪ. ಮುಂಡಳ್ಳಿಯ ಬಯಲು ಪ್ರದೇಶದಲ್ಲೇ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ನಾಗರಹಾವು ನುಂಗುವ ವೇದಿಕೆ ಮಾಡಿಕೊಂಡಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರ ಕಣ್ಣಲ್ಲಿ ಆ ಅಪರೂಪದ ದೃಶ್ಯ ಸೆರೆಯಾಯಿತು. 

ಆತಂಕ ಮತ್ತು ಜಾಗೃತಿ: ನಾಗರಹಾವು ನುಂಗುವ ದೃಶ್ಯ ನೋಡಿದ ಸ್ಥಳೀಯರು ಆತಂಕಕ್ಕೋಲಗಾದರು. ನಾಗರಹಾವಿನ ದೋಷ, ಸಂಸ್ಕಾರ ಹೀಗೆ ಗ್ರಾಮಸ್ಥರ ತಲೆಯೊಳಗೆ ಆತಂಕಕ್ಕೂ ಕಾರಣವಾಗಿತ್ತು. ಆದರೆ ಕಾಳಿಂಗ ಸರ್ಪದ ಬಗ್ಗೆ ಮಾಹಿತಿ ನೀಡಿದ ಅಜಯಗಿರಿ, ಯಾರೂ ಭಯಪಡುವ ಅವಶ್ಯಕತೆ ಇಲ್ಲ. ದೊಡ್ಡ ಹಾವು ಸಣ್ಣ ಹಾವನ್ನು ನುಂಗುವುದು ಪ್ರಕೃತಿ ನಿಯಮ. ಅಲ್ಲದೆ ನಾಗರಹಾವೇ ಕಾಳಿಂಗ  ಸರ್ಪದ ಆಹಾರ ಎಂದು ಭಯ ಹೋಗಲಾಡಿಸುವ ಪ್ರಯತ್ನ ಮಾಡಿದರು.

ಅಲ್ಲದೆ ಕಾಳಿಂಗ ಸರ್ಪ ಕಾಣಿಸಿಕೊಂಡ ಸಂದರ್ಭದಲ್ಲಿ ಮುನ್ನೆಚ್ಚರಿಕೆಯಾಗಿ ಹೇಗೆ ನಡೆದುಕೊಳ್ಳಬೇಕು ಎಂದು ಜಾಗೃತಿ ಮೂಡಿಸಿದರು. ಪಾಪ ಪುಣ್ಯವೋ.. ಕಾಳಿಂಗ ಸರ್ಪವೊಂದು ನಾಗರಹಾವು ಸಂಪೂರ್ಣ ಭಕ್ಷಿಸುವ ಕುತೂಹಲಕಾರಿ ಅಪರೂಪದ ದೃಶ್ಯ ಕ್ಯಾಮೆರಾ ಕಣ್ಣು ಮಾತ್ರವಲ್ಲದೆ, ಸ್ಥಳೀಯ ಗ್ರಾಮಸ್ಥರ ಕಣ್ಣಲ್ಲೂ ಸೆರೆಯಾಗಿದ್ದು ಮಾತ್ರ ಸುಳ್ಳಲ್ಲ. 

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.