ತಮಿಳರ ಚಿನ್ನಮ್ಮ, ಕರ್ನಾಟಕದಲ್ಲಿ ಜೈಲಮ್ಮ!


Team Udayavani, Feb 15, 2017, 3:35 AM IST

14-PTI-3.jpg

ದೆಹಲಿ: ಜಯಲಲಿತಾ ಚಿತ್ರನಟಿಯಾಗಿ ಜನಪ್ರಿಯ ಗೊಂಡಿದ್ದು, ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿಯಾಗಿದ್ದು, ಜನರಿಂದ ಆಮ್ಮ ಎಂದು ಕರೆಸಿಕೊಂಡಿದ್ದು, ¸‌ಭ್ರಷ್ಟಾಚಾರ ಎಸಗಿದ್ದು ಎಲ್ಲವೂ ತಮಿಳುನಾಡಿನಲ್ಲೇ. ಆದರೆ ಅವರು ಜೈಲು ಸೇರಿದ್ದು ಮಾತ್ರ ಕರ್ನಾಟಕದಲ್ಲಿ! 

ಈಗ ಚಿನ್ನಮ್ಮಾಳ ಸರದಿ. ಹೈಕೋರ್ಟ್‌ ಜಯಲಲಿತಾ ಮತ್ತವರ ಆಪ್ತ ರಾಗಿದ್ದ ಶಶಿಕಲಾ, ಇಳವರಸಿ, ಸುಧಾಕರನ್‌ ಅವರನ್ನು ಖುಲಾಸೆಗೊಳಿಸಿದ್ದ ತೀರ್ಪನ್ನು ಸುಪ್ರೀಂ ರದ್ದುಗೊಳಿಸಿದೆ. ಇವರನ್ನು ಅಪರಾಧಿಗಳೆಂದು ಘೋಷಿಸಿದ್ದ ವಿಚಾರಣಾ ಕೋರ್ಟಿನ ತೀರ್ಪನ್ನು ಎತ್ತಿ ಹಿಡಿದಿದೆ.

ಹಾಗೆ ನೋಡಿದರೆ, ಈ ಪ್ರಕರಣ ಕರ್ನಾಟಕಕ್ಕೆ ವರ್ಗಾವಣೆಗೊಂಡದ್ದೆ ಒಂದು ಕೌತುಕ. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂದು ಆಗ ಜನತಾ ಪಕ್ಷದ ಅಧ್ಯಕ್ಷರಾಗಿದ್ದ, ಈಗ ಬಿಜೆಪಿ ಮುಖಂಡರಾಗಿರುವ ರಾಜ್ಯಸಭಾ ಸದಸ್ಯ ಸುಬ್ರಮಣ್ಯನ್‌ ಸ್ವಾಮಿ 1996ರಲ್ಲಿ ಚೆನ್ನೈಯ ಪ್ರಿನ್ಸಿಪಲ್‌ ಸೆಷನ್ಸ್‌ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ನ್ಯಾಯಾಲಯ ಈ ಬಗ್ಗೆ ಎರಡು ತಿಂಗಳಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಈ ಆದೇಶವನ್ನು ಅಲ್ಲಿನ ಹೈಕೋರ್ಟ್‌ನಲ್ಲಿ ಜಯಲಲಿತಾ ಪ್ರಶ್ನಿಸಿದ್ದರು. ಆರಂಭದಲ್ಲಿ ಪ್ರಕರಣದ ತನಿಖೆಗೆ ಮದ್ರಾಸ್‌ ಹೈಕೋರ್ಟ್‌ ತಡೆಯಾಜ್ಞೆ ನೀಡಿದರೂ, ಬಳಿಕ ವಿಚಕ್ಷಣಾ ನಿರ್ದೇಶಕರು ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಪ್ರಕರಣದ ತನಿಖೆ ನಡೆಸಲು 1996ರಲ್ಲಿ ಅವಕಾಶ ನೀಡಿತು. ತನಿಖೆ ಬಳಿಕ, ಜಯಾ ಜೊತೆಗೆ ಶಶಿಕಲಾ, ಸುಧಾಕರನ್‌ ಮತ್ತು ಇಳವರಸಿ ಅವರನ್ನು ಕೂಡ ಪ್ರಕರಣದಲ್ಲಿ ಸಹ ಆರೋಪಿಗಳೆಂದು ಹೆಸರಿಸಲಾಯಿತು.

ಆದರೆ, ಸಿಎಂ ಆಗಿರುವ ಜಯಲಲಿತಾ ತನಿಖೆ ಮೇಲೆ ಪ್ರಭಾವ ಬೀರಬಹುದು ಎಂದು ಆರೋಪಿಸಿ, ಈ ಪ್ರಕರಣದಲ್ಲಿ ಇನ್ನೊಬ್ಬ ದೂರುದಾರರಾಗಿದ್ದ ಡಿಎಂಕೆಯ ಅನºಳಗನ್‌ ಈ ಪ್ರಕರಣವನ್ನು ತಮಿಳುನಾಡಿನಿಂದ ಹೊರಗೆ ವರ್ಗಾಯಿಸುವಂತೆ ಸುಪ್ರೀಂಗೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ 2003ರಲ್ಲಿ ಸುಪ್ರೀಂಕೋರ್ಟ್‌ ಪ್ರಕರಣವನ್ನು ಕರ್ನಾಟಕಕ್ಕೆ ವರ್ಗಾಯಿಸಿತು. ಬಳಿಕ, ಕರ್ನಾಟಕ ಬಿಟ್ಟು ಬೇರೆ ಯಾವುದಾದರೂ ರಾಜ್ಯಕ್ಕೆ ಪ್ರಕರಣವನ್ನು ವರ್ಗಾಯಿಸಿ ಎಂದು ಜಯಲಲಿತಾ ಕೋರ್ಟ್‌ನ ಮೊರೆ ಹೋದರಾದರೂ ಕೋರಿಕೆ ಸಮ್ಮತಿಸಲಿಲ್ಲ.

ಸುಪ್ರೀಂ ಸೂಚನೆ ಮೇರೆಗೆ 2003ರಲ್ಲಿ ಕರ್ನಾಟಕ ಸರ್ಕಾರ, ವಿಶೇಷ ನ್ಯಾಯಾಲಯ ಸ್ಥಾಪಿಸಿತು. 2014ರ ಸೆಪ್ಟೆಂಬರ್‌ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಜಯಲಲಿತಾ ಮತ್ತವರ ಮೂವರು ಸಂಗಡಿಗರನ್ನು ಅಪರಾಧಿಗಳೆಂದು ಘೋಷಿಸಿತು. ಜಯಲಲಿತಾ ತಮಿಳುನಾಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಜೈಲು ಸೇರಿದರು. ಆದರೆ, ಈ ತೀರ್ಪಿನ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌, ಆರೋಪಿಗಳನ್ನು ಖುಲಾಸೆ ಮಾಡಿತು. ಕರ್ನಾಟಕ ಸರ್ಕಾರ ಸುಪ್ರೀಂನಲ್ಲಿ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತು. ಕರ್ನಾಟಕಕ್ಕೆ ಈ ಪ್ರಕರಣವನ್ನು ಮುಂದುವರಿಸುವ ಅಧಿಕಾರವಿಲ್ಲ ಎಂದು ಜಯಾ ಕ್ಯಾತೆ ತೆಗೆದರೂ, ಅದಕ್ಕೆ ಮನ್ನಣೆ ನೀಡಿದ ನ್ಯಾಯಾಲಯ, ಈಗ ಮೂವರನ್ನೂ ಅಪರಾಧಿಗಳೆಂದು ತೀರ್ಪಿತ್ತಿದೆ. ಹೀಗಾಗಿ, ಈ ಪ್ರಕರಣದಲ್ಲಿನ ಅಪರಾಧಿಗಳು ಮತ್ತು ಅಪರಾಧ ತಮಿಳುನಾಡಿನಲ್ಲಿ ನಡೆದರೂ ಕರ್ನಾಟಕ ಈ ಪ್ರಕರಣವನ್ನು ಅಂತ್ಯಕ್ಕೆ ಕೊಂಡು ಹೋಗುವಲ್ಲಿ ಸಫ‌ಲವಾಗಿದೆ. ಶಶಿಕಲಾ, ಸುಧಾಕರನ್‌ ಮತ್ತು ಇಳವರಸಿ ಮತ್ತೆ ಪರಪ್ಪನ ಆಗ್ರಹಾರದಲ್ಲಿಯೇ ಜೈಲು ಶಿಕ್ಷೆ ಅನುಭವಿಸಬೇಕಿದೆ.

ಟಾಪ್ ನ್ಯೂಸ್

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.