ಸ್ವಾಮಿ ಸಮರ್ಥ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಇಂಗ್ಲಿಷ್‌ ಚರ್ಚಾಗೋಷ್ಠಿ


Team Udayavani, Feb 16, 2017, 4:09 PM IST

15-Mum09.jpg

ಸೊಲ್ಲಾಪುರ: ಮಾಹಿತಿ ತಂತ್ರಜ್ಞಾನದ ಜೊತೆಗೆ ನೈತಿಕ ಮೌಲ್ಯವು  ಶಿಕ್ಷಕ ವೃತ್ತಿಯಲ್ಲಿ ತುಂಬಾ ಮಹತ್ವದ್ದಾಗಿದೆ ಎಂದು ವಿಜಯಪುರದ ನಿವೃತ್ತ ಇಂಗ್ಲಿಷ್‌ ಪ್ರಾಧ್ಯಾಪಕ ರಮೇಶ್‌ ಜೋಶಿ ಹೇಳಿದರು.

ಅಕ್ಕಲಕೋಟ ತಾಲೂಕು ಇಂಗ್ಲಿಷ್‌ ಶಿಕ್ಷಕ ಸಂಘಟನೆ ಹಾಗೂ ತಾಲೂಕು ಪಂಚಾಯತ್‌ ಶಿಕ್ಷಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ  ಅಕ್ಕಲ್‌ಕೋಟೆಯ ಸ್ವಾಮಿ ಸಮರ್ಥ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆದ ಇಂಗ್ಲಿಷ್‌ ಚರ್ಚಾ

ಗೋಷ್ಠಿಯಲ್ಲಿ ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿ ಎಂದರೆ ದೇವರು, ಶಾಲೆ ಎಂದರೆ ಮಂದಿರ, ಶಿಕ್ಷಕ ಎಂದರೆ ಪೂಜಾರಿ ಎಂದು ತಿಳಿದು ಜ್ಞಾನದ ಜತೆಗೆ ನೈತಿಕ ಮೌಲ್ಯವು ಅಳವಡಿಸಿಕೊಳ್ಳಬೇಕು. ಇಂಗ್ಲಿಷ್‌ ಪಾಶ್ಚಿಮಾತ್ಯ ಭಾಷೆಯಾಗಿದ್ದರೂ ಇಂದು ಜ್ಞಾನದ ಖಜಾನೆಯಾಗಿದೆ. ಶಿಕ್ಷಕರು ಇಂಗ್ಲಿಷ್‌ ಭಾಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿ ಹೆಚ್ಚಿಸಬೇಕು. ಬೋಧನೆ ಮಾಡುವಾಗ ಹೊಸ-ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಹೊಸದಾಗಿ ಪರಿಚಯವಾಗಿರುವ ಜ್ಞಾನ ರಚನಾವಾದ ಪದ್ದತಿಯನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಅನುಭವ ಮೇಲೆ ಪಾಠ ಹೇಳಬೇಕು. ಅಲ್ಲದೆ ಶಿಕ್ಷಕರ ಪಾತ್ರ ಮಾರ್ಗದರ್ಶಕ, ಪ್ರೇರಕ, ಸಹಾಯಕ, ನಿರ್ದೇಶಕ ಹಾಗೂ ಮಿತ್ರನದ್ದಾಗಿದೆ ಎಂದರು.

ಸುರೇಖಾ ಹೋಳಿಕಟ್ಟಿ ಅವರು ಮಾತನಾಡಿ, ಶಿಕ್ಷಕರು ಇಂಗ್ಲಿಷ್‌ ಮಾತನಾಡುವ ಕೌಶಲವನ್ನು ಬೆಳಿಸಿಕೊಳ್ಳಬೇಕು. ಇದಕ್ಕಾಗಿ ಹೆಚ್ಚು ಶ್ರವಣದ ಆವಶ್ಯಕತೆ ಇದೆ. ದಿನನಿತ್ಯದ ಸಂಭಾಷಣೆಗಳನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರೆ ಅವರಲ್ಲಿ ಮಾತನಾಡುವ ಕೌಶಲ ಹೆಚ್ಚಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಸ್‌. ಎಂ. ಜಾಧವ್‌, ನೀಲಕಂಠ ಪಾಟೀಲ್‌, ಸಚಿನ್‌ ಕಾಟೆ ಅವರನ್ನು ಸಮ್ಮಾನಿಸಲಾಯಿತು. ವಟವೃಕ್ಷ ಸ್ವಾಮಿ ಸಮರ್ಥ ದೇವಸ್ಥಾನದ ಅಧ್ಯಕ್ಷ ಮಹೇಶ ಇಂಗಳೆ, ಅನ್ನಛತ್ರ ಮಂಡಳದ ವಿಶ್ವಸ್ತ ಅಮೋಲ ಭೋಸಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿನಾಥ ಸ್ವಾಮಿ, ತಾಲೂಕು ಇಂಗ್ಲೀಷ್‌ ಶಿಕ್ಷಕ  ಸಂಘಟನೆ ಉಪಾಧ್ಯಕ್ಷ ಶ್ರೀಶೈಲ ಮಮಾಣೆ ಮೊದಲಾದವರು ಪಾಲ್ಗೊಂಡಿದ್ದರು.
ಅಕ್ಕಲ್‌ಕೋಟೆ ತಾಲೂಕು ಇಂಗ್ಲೀಷ್‌ ಶಿಕ್ಷಕ ಸಂಘಟನೆಯ ಅಧ್ಯಕ್ಷ ಬಸಯ್ಯ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ. ಜೆ. ಪೂಜಾರಿ  ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ ಅತನೂರೆ ವಂದಿಸಿದರು.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬಹ್ರೈನ್‌ ಬಿಲ್ಲವಾಸ್‌-ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Desi Swara: ಬಹ್ರೈನ್‌ ಬಿಲ್ಲವಾಸ್‌-ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Desi Swara: ಪೋಲೆಂಡ್‌ ಕನ್ನಡಿಗರ ಸಂಘ: ಸಂಭ್ರಮದ ಯುಗಾದಿ ಆಚರಣೆ

Desi Swara: ಪೋಲೆಂಡ್‌ ಕನ್ನಡಿಗರ ಸಂಘ: ಸಂಭ್ರಮದ ಯುಗಾದಿ ಆಚರಣೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.