ಮೇಕೆದಾಟು ಬಳಿ ಅಣೆಕಟ್ಟು: 2 ರಾಜ್ಯಗಳಿಗೂ ಉಪಯುಕ್ತ


Team Udayavani, Feb 17, 2017, 3:45 AM IST

mekedatu.jpg

ಬೆಂಗಳೂರು: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವ ಯೋಜನೆ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಜತೆಗೆ ವಿದ್ಯುತ್‌ ಉತ್ಪಾದನೆ ಯೋಜನೆಯನ್ನೂ ಒಳ ಗೊಂಡಿದೆ. ಕರ್ನಾಟಕವಷ್ಟೇ ಅಲ್ಲದೆ ತಮಿಳುನಾಡಿಗೂ ಇದರಿಂದ ಉಪಯೋಗವಾಗಲಿದೆ.  ಮೇಕೆದಾಟು ಬಳಿ ಕಾವೇರಿ ನದಿಗೆ ಅಣೆಕಟ್ಟೆ ನಿರ್ಮಾಣಕ್ಕೆ 5,912 ಕೋಟಿ ರೂ. ವೆಚ್ಚದ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿರುವ ಸರ್ಕಾರ ಅದಕ್ಕೆ ತಾತ್ವಿಕ ಅನುಮೋದನೆಯನ್ನೂ ನೀಡಿದೆ. ವಿವಿಧ ಹಂತಗಳನ್ನು ದಾಟಿ ಯೋಜನೆ ಕಾರ್ಯರೂಪಕ್ಕೆ ಬಂದರೆ ಕರ್ನಾಟಕದಷ್ಟೇ
ಅನುಕೂಲ ತಮಿಳುನಾಡಿಗೂ ಆಗುತ್ತದೆ ಎನ್ನುತ್ತಾರೆ ನೀರಾವರಿ ತಜ್ಞರು.

ಯೋಜನೆ ಪೂರ್ಣಗೊಂಡ ಬಳಿಕ 379.5 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುವುದರ ಜತೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ 16.1 ಟಿಎಂಸಿ ಕುಡಿಯುವ ನೀರು ಲಭ್ಯವಾಗಲಿದ್ದು, ಭವಿಷ್ಯದಲ್ಲಿ ಬೆಂಗಳೂರು
ನಗರದ ಕುಡಿಯುವ ನೀರಿನ ಕೊರತೆಯ ಆತಂಕವನ್ನು ದೂರ ಮಾಡಲಿದೆ.

ಯಾಕಾಗಿ ಈ ಯೋಜನೆ?: ಪ್ರಸ್ತುತ ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತದೆ. ಈ ನೀರಿನ ಪ್ರಮಾಣವನ್ನು ಬಿಳಿಗುಂಡ್ಲುವಿನಲ್ಲಿ ಮಾಪನ ಮಾಡಲಾಗುತ್ತದೆ. ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಬಿಳಿಗುಂಡ್ಲುವರೆಗೆ ನೀರು ಸಂಗ್ರಹಿಸಲು ಅವಕಾಶಗಳಿಲ್ಲ.ಹೀಗಾಗಿ ರಾಜ್ಯದ ಹಿತರಕ್ಷಣೆ ಜತೆಗೆ ತಮಿಳುನಾಡಿಗೆ ಮಾಸಿಕ ಹರಿಸಬೇಕಾಗಿರುವ ನೀರಿನ ಪ್ರಮಾಣಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲು
ಮೇಕೆದಾಟು ಬಳಿ ಸಮತೋಲನ ಜಲಾಶಯ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

ಉಪಯೋಗಗಳು: ವಿದ್ಯುತ್‌ ಉತ್ಪಾದನೆ ಕುಡಿವ ನೀರು ಪೂರೈಕೆ ಜತೆಗೆ ಹಲವು ಪರಿಸರ ಸಂಬಂಧಿ ಉಪಯೋಗಗಳೂ ಇದರಲ್ಲಿದೆ. ಯೋಜನೆಯಿಂದ ಪರಿಸರ ಸಮತೋಲನ ವಾಗುವುದರ ಜತೆಗೆ ಜಲಾನಯನ ಪ್ರದೇಶಗಳಲ್ಲಿ ಅಂತರ್ಜಲಮಟ್ಟ ವೃದ್ಧಿಯಾಗುತ್ತದೆ. ಸುತ್ತಲೂ ಅರಣ್ಯ ಪ್ರದೇಶ ಅಭಿವೃದ್ಧಿ, ವನ್ಯ ಪ್ರಾಣಿ ಸಂಕುಲಕ್ಕೆ ಕುಡಿವ ನೀರು ಲಭ್ಯವಾಗುತ್ತದೆ. ಪ್ರವಾಸೋದ್ಯಮ ಬೆಳವಣಿಗೆ ಜತೆಗೆ ಮೀನು ಉತ್ಪಾದನಾ ಉದ್ಯಮ ಅಭಿವೃದ್ಧಿಗೂ
ಸಹಾಯಕವಾಗುತ್ತದೆ.

ತ.ನಾಡಿಗೆ ಆಗುವ ಅನುಕೂಲ: ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕವು ತಮಿಳುನಾಡಿಗೆ ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಕಾವೇರಿ ನದಿಯಿಂದ ನೀರು ಹರಿಸಬೇಕಾಗಿದೆ. ಹೆಚ್ಚು ಮಳೆ ಬಂದ ಅವಧಿಯಲ್ಲಿ ನಿಗದಿಗಿಂತ ಹೆಚ್ಚು ನೀರು ತಮಿಳುನಾಡು ಸೇರುತ್ತಿದ್ದು, ಅಲ್ಲಿಯೂ ಸಂಗ್ರಹಕ್ಕೆ ಅವಕಾಶವಿಲ್ಲದೆ ಸಮುದ್ರ ಸೇರುತ್ತದೆ.

ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸಿ ಮಳೆಗಾಲದಲ್ಲಿ ಹೆಚ್ಚಾಗಿ ಹರಿಯುವ ನೀರಿನ ಪೈಕಿ 64 ಟಿಎಂಸಿ ನೀರನ್ನು ಹಿಡಿದಿಟ್ಟುಕೊಂಡು ಅಗತ್ಯ ಸಂದರ್ಭದಲ್ಲಿ ಬಿಡುಗಡೆ ಮಾಡಲು ಅನುಕೂಲವಾಗುತ್ತದೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.