ಏಕೈಕ ಟಿ-20 ಮುಖಾಮುಖೀ ತಾಹಿರ್‌ ಅಬ್ಬರ; ಕಿವೀಸ್‌ ತತ್ತರ


Team Udayavani, Feb 18, 2017, 3:45 AM IST

Imran.jpg

ಆಕ್ಲೆಂಡ್‌: ಸರಣಿಯ ಏಕೈಕ ಟಿ-20 ಮೇಲಾಟದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ನ್ಯೂಜಿಲ್ಯಾಂಡನ್ನು 78 ರನ್ನುಗಳ ಭಾರೀ ಅಂತರದಿಂದ ಕೆಡವಿದೆ.

ಮಳೆ ಭೀತಿಯಿಲ್ಲದೆ ಸಾಗಿದ ಶುಕ್ರವಾರದ ಸ್ಪರ್ಧೆಯಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ದಕ್ಷಿಣ ಆಫ್ರಿಕಾ 6 ವಿಕೆಟಿಗೆ 185 ರನ್‌ ಪೇರಿಸಿದರೆ, ನ್ಯೂಜಿಲ್ಯಾಂಡ್‌ ಕೇವಲ 14.5 ಓವರ್‌ಗಳಲ್ಲಿ 107 ರನ್ನಿಗೆ ಗಂಟುಮೂಟೆ ಕಟ್ಟಿತು. 62 ರನ್‌ ಬಾರಿಸಿದ ಆರಂಭಕಾರ ಹಾಶಿಮ್‌ ಆಮ್ಲ, 24ಕ್ಕೆ 5 ವಿಕೆಟ್‌ ಹಾರಿಸಿ ಜೀವನಶ್ರೇಷ್ಠ ಸಾಧನೆಗೈದ ಇಮ್ರಾನ್‌ ತಾಹಿರ್‌ ದಕ್ಷಿಣ ಆಫ್ರಿಕಾ ಗೆಲುವಿನ ರೂವಾರಿಗಳಾಗಿ ಮೂಡಿಬಂದರು.

ಆಫ್ರಿಕಾಕ್ಕೆ ಹಾಶಿಮ್‌ ಆಮ್ಲ-ಫಾ ಡು ಪ್ಲೆಸಿಸ್‌ ಜೋಡಿಯಿಂದ ಅಬ್ಬರದ ಆರಂಭ ಲಭಿಸಿತು. ಅಪಾಯಕಾರಿ ಓಪನರ್‌ ಕ್ವಿಂಟನ್‌ ಡಿ ಕಾಕ್‌ ಖಾತೆ ತೆರೆಯದೆ ಮರಳಿದರೂ ದ್ವಿತೀಯ ವಿಕೆಟಿಗೆ ಜತೆಗೂಡಿದ ಆಮ್ಲ-ನಾಯಕ ಡು ಪ್ಲೆಸಿಸ್‌ ಸೇರಿಕೊಂಡು ಸ್ಫೋಟಕ ಆಟಕ್ಕೆ ಮುಂದಾದರು. ಆತಿಥೇಯರ ದಾಳಿಯನ್ನು ಪುಡಿಗುಟ್ಟುತ್ತ 8.3 ಓವರ್‌ಗಳಿಂದ 87 ರನ್‌ ಪೇರಿಸಿದರು. ಮಧ್ಯಮ ಕ್ರಮಾಂಕದಲ್ಲಿ ಎಬಿ ಡಿ ವಿಲಿಯರ್, ಜೀನ್‌ಪಾಲ್‌ ಡ್ಯುಮಿನಿ ಅವರಿಂದಲೂ ಉತ್ತಮ ಪ್ರದರ್ಶನ ಕಂಡುಬಂತು.

ಆಮ್ಲ ಅವರಿಂದ ಅರ್ಧ ಶತಕದ ಕೊಡುಗೆ ಸಂದಾಯವಾಯಿತು. 43 ಎಸೆತ ನಿಭಾಯಿಸಿದ ಅವರು 9 ಬೌಂಡರಿ, ಒಂದು ಸಿಕ್ಸರ್‌ ನೆರವಿನಿಂದ 62 ರನ್‌ ಹೊಡೆದರು. ಇದು ಆಮ್ಲ ಅವರ 6ನೇ ಫಿಫ್ಟಿ. ಬಿರುಸಿನ ಆಟವಾಡಿದ ಡು ಪ್ಲೆಸಿಸ್‌ 25 ಎಸೆತಗಳಿಂದ 36 ರನ್‌ ಹೊಡೆದರು. ಇದರಲ್ಲಿ 3 ಸಿಕ್ಸರ್‌, ಒಂದು ಬೌಂಡರಿ ಒಳಗೊಂಡಿತ್ತು.

ಡಿ ವಿಲಿಯರ್ 17 ಎಸೆತಗಳಿಂದ 26 ರನ್‌ (3 ಬೌಂಡರಿ, 1 ಸಿಕ್ಸರ್‌), ಡ್ಯುಮಿನಿ 16 ಎಸೆತಗಳಿಂದ 29 ರನ್‌ (2 ಬೌಂಡರಿ, 2 ಸಿಕ್ಸರ್‌) ಬಾರಿಸಿದರು.

ತಾಹಿರ್‌ ಜೀವನಶ್ರೇಷ್ಠ ಸಾಧನೆ
ದೊಡ್ಡ ಮೊತ್ತವನ್ನು ಬೆನ್ನಟ್ಟಲಿಳಿದ ನ್ಯೂಜಿಲ್ಯಾಂಡಿಗೆ ಆರಂಭದಲ್ಲಿ ಕ್ರಿಸ್‌ ಮಾರಿಸ್‌, ಆ್ಯಂಡಿಲ್‌ ಫೆಲುಕ್ವಾಯೊ ಬೆದರಿಕೆಯೊಡ್ಡಿದರು. ಬಳಿಕ ಲೆಗ್‌ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಸಿಂಹಸ್ವಪ್ನರಾದರು. 10 ರನ್‌ ಆಗುವಷ್ಟರಲ್ಲಿ 2 ವಿಕೆಟ್‌ ಉದುರಿಸಿಕೊಂಡ ಕಿವೀಸ್‌ ಕುಸಿಯುತ್ತಲೇ ಹೋಯಿತು.

ಲೆಗ್‌ಸ್ಪಿನ್ನರ್‌ ತಾಹಿರ್‌ ಟಿ-ಟ್ವೆಂಟಿಯಲ್ಲಿ ಮೊದಲ ಸಲ 5 ವಿಕೆಟ್‌ ಕಿತ್ತು ಮಿಂಚಿದರು. ಈ ಸಾಧನೆಯ ವೇಳೆ ಅವರು 50 ವಿಕೆಟ್‌ ಬೇಟೆಯನ್ನೂ ಪೂರ್ತಿಗೊಳಿಸಿದರು. ಇದು ಅವರ 31ನೇ ಪಂದ್ಯ. ಈ ಲೆಕ್ಕಾಚಾರದಲ್ಲಿ ತಾಹಿರ್‌ ಅವರದು 2ನೇ ಅತೀ ವೇಗದ ಸಾಧನೆ. ಲಂಕೆಯ ಅಜಂತ ಮೆಂಡಿಸ್‌ 26 ಪಂದ್ಯಗಳಲ್ಲಿ 50 ವಿಕೆಟ್‌ ಸಾಧನೆ ಮಾಡಿದ್ದರು. ಇತ್ತಂಡಗಳಿನ್ನು ಏಕದಿನ ಸರಣಿಯಲ್ಲಿ ಸೆಣಸಲಿದ್ದು, ಮೊದಲ ಪಂದ್ಯ ಫೆ. 19ರಂದು ಹ್ಯಾಮಿಲ್ಟನ್‌ನಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-6 ವಿಕೆಟಿಗೆ 185 (ಆಮ್ಲ 62, ಡು ಪ್ಲೆಸಿಸ್‌ 36, ಡ್ಯುಮಿನಿ 29, ಬೌಲ್ಟ್ 8ಕ್ಕೆ 2, ಗ್ರ್ಯಾಂಡ್‌ಹೋಮ್‌ 22ಕ್ಕೆ 2). ನ್ಯೂಜಿಲ್ಯಾಂಡ್‌-14.5 ಓವರ್‌ಗಳಲ್ಲಿ 107 (ಬ್ರೂಸ್‌ 33, ಸೌಥಿ 20, ತಾಹಿರ್‌ 24ಕ್ಕೆ 5, ಫೆಲುಕ್ವಾಯೊ 19ಕ್ಕೆ 3, ಮಾರಿಸ್‌ 10ಕ್ಕೆ 2). ಪಂದ್ಯಶ್ರೇಷ್ಠ: ಇಮ್ರಾನ್‌ ತಾಹಿರ್‌.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.