ಸರ್ಕಾರದ ತುಘಲಕ್ ದರ್ಬಾರ್: ಎಚ್ಡಿಕೆ ವಾಗ್ಧಾಳಿ
Team Udayavani, Feb 18, 2017, 6:55 AM IST
ಮೈಸೂರು: ಮೌಲ್ಯಮಾಪನ ಬಹಿಷ್ಕರಿಸುವ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ತುಘಲಕ್ ದರ್ಬಾರ್ನಂತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದರೆ ಶಿಕ್ಷೆ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಸರ್ಕಾರದ ಈ ನಿರ್ಧಾರವನ್ನು ನೋಡಿದರೆ ಇದು ತುಘಲಕ್ ಸರ್ಕಾರವೋ? ಅಥವಾ ಸದ್ದಾಂ ಹುಸೇನ್ ಸರ್ಕಾರವೋ ಎಂಬ ಅನುಮಾನ ಮೂಡುತ್ತದೆ. ಅರ್ಹತೆ ಇಲ್ಲದವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದರೆ ಇಂತಹ ಸಮಸ್ಯೆ ಎದುರಾಗಲಿದ್ದು, ಅಧಿಕಾರಿ ಹೇಳಿದ್ದಕ್ಕೆ ಸಚಿವರು ಹೆಬ್ಬೆಟ್ಟು ಒತ್ತುತ್ತಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನ:
ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಕಾರ್ಯಕರ್ತರು ಗೊಂದಲಕ್ಕೆ ಸಿಲುಕುತ್ತಾರೆ. ಈ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆ
ಯಿದ್ದು, ಈ ಕುರಿತು ಕಾರ್ಯಕರ್ತರ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಳಲೆ ಕೇಶವಮೂರ್ತಿ ಅಪಾಯ ಕಾರಿ: ಕಳಲೆ ಕೇಶವಮೂರ್ತಿ ಅಪಾಯ ಕಾರಿ ವ್ಯಕ್ತಿ. ಜೆಡಿಎಸ್ ಬಿಡಲು ಅವರು ನಮ್ಮ ಅನುಮತಿ ಪಡೆದಿಲ್ಲ. ಕೇಶವಮೂರ್ತಿಯನ್ನು ಸಜ್ಜನ ಎಂದುಕೊಂಡಿದ್ದೆ, ಆದರೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಈ ರೀತಿ ಸುಳ್ಳು ಹೇಳುತ್ತಾರೆಂದು ತಿಳಿದಿರಲಿಲ್ಲ. ಅವರ ನಡೆಯಿಂದ ಅವರೊಬ್ಬ ಅಪಾಯಕಾರಿ ವ್ಯಕ್ತಿ ಎನ್ನುವುದು ಸಾಬೀತಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ