ನಟ ವಿಷ್ಣುವರ್ಧನ್ ಸ್ಮಾರಕನಿರ್ಮಾಣಕ್ಕೆ ಮತ್ತೆ ವಿಘ್ನ
Team Udayavani, Feb 18, 2017, 7:03 AM IST
ಮೈಸೂರು: ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಸ್ಮಾರಕ ನಿರ್ಮಿಸಲಾಗುತ್ತಿರುವ ಮೈಸೂರು ತಾಲೂಕಿನ ಹಾಲಾಳು ಗ್ರಾಮದ ಉದೂºರು ಕ್ರಾಸ್ ಬಳಿಯ ಭೂಮಿ ತಮ್ಮ ಸ್ವಾಧೀನದಲ್ಲಿದೆ ಎಂದು ನಾಲ್ವರು ರೈತರು ತಕರಾರು ತೆಗೆದಿದ್ದು, ನಗರದ ಸಿವಿಲ್ ನ್ಯಾಯಾಲಯದಿಂದ ತಾತ್ಕಾಲಿಕ ಪ್ರತಿಬಂಧಕಾಜ್ಞೆ ತಂದಿದ್ದಾರೆ.
ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ 5 ಎಕರೆ ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಜಿಲ್ಲಾಡಳಿತ
ಹಸ್ತಾಂತರಿಸಿದೆ. ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರ 5 ಕೋಟಿ ರೂ. ಮಂಜೂರು ಮಾಡಿದ್ದು, ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದೆ. 2016ರ ಡಿಸೆಂಬರ್ 6ರಂದು ಸ್ಮಾರಕ ನಿರ್ಮಾಣಕ್ಕೆ ಭೂಮಿಪೂಜೆ ನಿಗದಿಯಾಗಿತ್ತು. ತಮಿಳುನಾಡು
ಸಿಎಂ ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಣೆಯಾಗಿದ್ದರಿಂದ ಸರ್ಕಾರಿ ಕಾರ್ಯಕ್ರಮ ಕೂಡ ರದ್ದಾಯಿತು. ಬಳಿಕ, ಭಾರತಿ ವಿಷ್ಣುವರ್ಧನ್ ಭೂಮಿಪೂಜೆ ನೆರವೇರಿಸಿದ್ದರು. ಅಂದಿನಿಂದ ಸ್ಮಾರಕ ನಿರ್ಮಾಣ ಕಾಮಗಾರಿ ಭರದಿಂದ ಸಾಗಿತ್ತು. ಆದರೆ, ಗ್ರಾಮದ ಚನ್ನಪ್ಪ, ಹಾಗೂ ಇತರ ಮೂವರು ರೈತರು ಕಳೆದ 10 ವರ್ಷಗಳಿಂದ ಈ ಭೂಮಿ ತಮ್ಮ
ಸ್ವಾಧೀನದಲ್ಲಿದೆ ಎಂದು ವಾದಿಸಿ, ಸ್ಮಾರಕ ನಿರ್ಮಾಣಕ್ಕೆ ಭೂಮಿ ಬಿಟ್ಟು ಕೊಡಲು ಪ್ರತಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ಮೈಸೂರು ತಾಲೂಕು ತಹಶೀಲ್ದಾರ್ ರಮೇಶ್ ಬಾಬು, ಸ್ಮಾರಕ ನಿರ್ಮಾಣಕ್ಕೆ 5 ಎಕರೆ
ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರಿಸಿದ ಜಿಲ್ಲಾಧಿಕಾರಿಗಳ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿಲ್ಲ. ಹೀಗಾಗಿ, ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ