ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಪೂರ್ವ ವಲಯಕ್ಕೆ ಪ್ರಶಸ್ತಿ
Team Udayavani, Feb 19, 2017, 3:45 AM IST
ಮುಂಬಯಿ: ಪಶ್ಚಿಮ ವಲಯ ತಂಡವನ್ನು 8 ವಿಕೆಟ್ಗಳಿಂದ ಭರ್ಜರಿಯಾಗಿ ಸೋಲಿಸಿದ ಪೂರ್ವ ವಲಯ ತಂಡವು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಅಂತರ್ ವಲಯ ಕ್ರಿಕೆಟ್ ಕೂಟದ ಪ್ರಶಸ್ತಿ ಗೆದ್ದುಕೊಂಡಿದೆ.
ಶನಿವಾರ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಶ್ಚಿಮ ವಲಯ ತಂಡವು 20- ಓವರ್ಗಳಲ್ಲಿ 5 ವಿಕೆಟಿಗೆ 149 ರನ್ ಪೇರಿಸಿತು. ಇದಕ್ಕುತ್ತರವಾಗಿ ವಿರಾಟ್ ಸಿಂಗ್ ಮತ್ತು ಇಶಾಂಕ್ ಜಗ್ಗಿ ಅವರ ಅರ್ಧಶತಕದಿಂದಾಗಿ ಪೂರ್ವ ವಲಯ ತಂಡವು 13.4 ಓವರ್ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 153 ರನ್ ಪೇರಿಸಿ ಗೆಲುವು ಸಾಧಿಸಿತು. ಈ ಗೆಲುವಿನಿಂದ ಪೂರ್ವ ವಲಯ ತಂಡವು ಆಡಿದ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ದಿನದ ಎರಡನೇ ಪಂದ್ಯದಲ್ಲಿ ದಕ್ಷಿಣ ವಲಯ ತಂಡವನ್ನು 2 ವಿಕೆಟ್ಗಳಿಂದ ಸೋಲಿಸಿದ ಮಧ್ಯ ವಲಯ ತಂಡವು ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿ 12 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆಯಿತು. ದಕ್ಷಿಣ, ಉತ್ತರ ಮತ್ತು ಪಶ್ಚಿಮ ವಲಯ ತಂಡಗಳು ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿದ್ದವು.
ವಿರಾಟ್, ಜಗ್ಗಿ ಅರ್ಧಶತಕ
ಗೆಲ್ಲಲು 150 ರನ್ ಗಳಿಸುವ ಗುರಿ ಪಡೆದ ಪೂರ್ವ ವಲಯ ತಂಡವು ಉತ್ತಮ ಆರಂಭ ಪಡೆಯಿತು. ಅರುಣ್ ಕಾರ್ತಿಕ್ ಮತ್ತು ವಿರಾಟ್ ಸಿಂಗ್ ಕೇವಲ 5.2 ಓವರ್ಗಳಲ್ಲಿ 61 ರನ್ ಪೇರಿಸಿದರು. ಆಬಳಿಕ ವಿರಾಟ್ ಅವರನ್ನು ಸೇರಿಕೊಂಡ ಇಶಾಂಕ್ ಜಗ್ಗಿ ಭರ್ಜರಿ ಆಟವಾಡಿ ತಂಡದ ಅಮೋಘ ಗೆಲುವಿಗೆ ಕಾರಣರಾದರು. ಅವರಿಬ್ಬರು ದ್ವಿತೀಯ ವಿಕೆಟಿಗೆ 80 ರನ್ ಪೇರಿಸಿದರು. ಗೆಲ್ಲಲು 9 ರನ್ ಇರುವಾಗ ಜಗ್ಗಿ ಔಟಾದರು. ಕೇವಲ 30 ಎಸೆತ ಎದುರಿಸಿದ ಜಗ್ಗಿ 3 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 56 ರನ್ ಸಿಡಿಸಿದರೆ ವಿರಾಟ್ 34 ಎಸೆತಗಳಿಂದ 58 ರನ್ ಗಳಿಸಿ ಅಜೇಯರಾಗಿ ಉಳಿದರು. 5 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ