ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಬೃಹತ್ ಪ್ರತಿಭಟನೆ
Team Udayavani, Feb 19, 2017, 3:45 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ (ಫೆ. 20)ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ಅಶ್ವತ್ಥ ನಾರಾಯಣ, “ಮುಖ್ಯಮಂತ್ರಿಗಳು ಕಾಂಗ್ರೆಸ್ ಹೈಕಮಾಂಡ್ಗೆ 1000 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬುದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಬಳಿ ಪತ್ತೆಯಾದ ಡೈರಿಯಿಂದ ಗೊತ್ತಾಗಿದೆ. ಹಾಗೆಯೇ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆ, ಕಚೇರಿಯಲ್ಲಿ ಐಟಿ ದಾಳಿ ವೇಳೆ 162 ಕೋಟಿ ರೂ.ಗಿಂತ ಹೆಚ್ಚು ಆಸ್ತಿ ಪತ್ತೆಯಾಗಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ’ ಎಂದು ದೂರಿದರು.
“ಸಾಕ್ಷ್ಯಸಹಿತ ಆರೋಪ ಮಾಡಿದರೂ ಮುಖ್ಯಮಂತ್ರಿಗಳು ತಳ್ಳಿಹಾಕುತ್ತಾರೆ. ಗೋವಿಂದರಾಜು ಅವರ ಬಳಿ ಪತ್ತೆಯಾಗಿರುವ ಡೈರಿಯಲ್ಲಿ ಉಕ್ಕಿನ ಮೇಲ್ಸೇತುವೆ ಯೋಜನೆಗೆ ಸಂಬಂಧಪಟ್ಟಂತೆ 65 ಕೋಟಿ ರೂ. ಪಡೆಯಲಾಗಿದೆ ಎಂದು ದಾಖಲಾಗಿದೆ. ಈ ಡೈರಿ ಬಗ್ಗೆ ಕೇಳಿದರೆ ಮುಖ್ಯಮಂತ್ರಿಗಳು ಹಾರಿಕೆ ಉತ್ತರ ನೀಡುತ್ತಾರೆ. ಇದೊಂದು ಕಿಕ್ಬ್ಯಾಕ್ ಸರ್ಕಾರದ್ದು, ಇದರ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಅವರ ಸಂಭಾಷಣೆಯನ್ನು ತಿರುಚಿ ಗೊಂದಲ ಸೃಷ್ಟಿಸಲಾಗುತ್ತಿದೆ. ಸಂಪೂರ್ಣ ಮಾತುಕತೆಯ ಸಿ.ಡಿಯನ್ನು ಜನರ ಮುಂದಿಟ್ಟರೆ ಸತ್ಯಾಂಶ ಗೊತ್ತಾಗಲಿದೆ. ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.
ನಗರ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ, “ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಫೆ.20ರಂದು ಬೆಳಗ್ಗೆ 11 ಗಂಟೆಗೆ ಪುರಭವನ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದ್ದು ನಂತರ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗುವುದು’ ಎಂದು ಹೇಳಿದರು. ಶಾಸಕ ವೈ.ಎ.ನಾರಾಯಣಸ್ವಾಮಿ, “ಶಾಸಕ ಎಂ.ಟಿ.ಬಿ.ನಾಗರಾಜ್ ನಿವಾಸ ಹಾಗೂ ಕಚೇರಿಯಲ್ಲಿ ಐಟಿ ದಾಳಿ ವೇಳೆ 130 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ದೂರಿದರು.
ನಗರ ಪೊಲೀಸ್ ಆಯುಕ್ತರಿಗೆ ದೂರು
ಈ ಮಧ್ಯೆ, ಸಚಿವರಾದ ರಮೇಶ್ಕುಮಾರ್, ಬಸವರಾಜ ರಾಯರೆಡ್ಡಿ, ಎಂ.ಬಿ.ಪಾಟೀಲ್, ಡಾ.ಶರಣ್ಪ್ರಕಾಶ್ ಪಾಟೀಲ್ ಹಾಗೂ ಈಶ್ವರ ಖಂಡ್ರೆ ಹಾಗೂ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ವಿರುದ್ಧ ಬಿಜೆಪಿಯು ನಗರ ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ನಡುವಿನ ಸಂಭಾಷಣೆಯ ಸಿಡಿ ತಿರುಚಲಾಗಿದೆ. ತಿರುಚಿದ ಸಿಡಿ ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿ ತೇಜೋವಧೆಗೆ ಯತ್ನಿಸಲಾಗಿದೆ. ಹೀಗಾಗಿ, ಐಪಿಸಿ ಸೆಕ್ಷನ್ 196 ಹಾಗೂ ಎಸ್ಐಟಿ ಕಾಯ್ದೆ 43 (6)ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಮಾಜಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ, ವಿಜಯಕುಮಾರ್, ವಕ್ತಾರ ಅಶ್ವಥ್ನಾರಾಯಣ, ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಆಯುಕ್ತರನ್ನು ಭೇಟಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ