ಮೇ ಅಂತ್ಯಕ್ಕೆ ನೀಲಾವರ-ಕೂರಾಡಿ ಸೇತುವೆ ಪೂರ್ಣ: ಸಚಿವ ಪ್ರಮೋದ್
Team Udayavani, Feb 19, 2017, 8:59 AM IST
ಬ್ರಹ್ಮಾವರ: ಬಹುದಿನಗಳ ಕನಸಾದ ನೀಲಾವರ-ಕೂರಾಡಿ ಸಂಪರ್ಕ ಸೇತುವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮೇ ಅಂತ್ಯದೊಳಗೆ ಪೂರ್ಣ ಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶನಿವಾರ ಕುಂಜಾಲಿನಲ್ಲಿ ನೀಲಾವರ ಗ್ರಾಮ ಮಟ್ಟದ ಜನ ಸಂಪರ್ಕ ಸಭೆ ಉದ್ಘಾಟಿಸಿದರು. ಸಚಿವನಾಗಿ ಆಯ್ಕೆಯಾದ ಮೇಲೆ ರಾಜ್ಯದೆಲ್ಲೆಡೆ ಸಂಚರಿಸಬೇಕಾದ ಕಾರ್ಯ ಒತ್ತಡವಿದ್ದರೂ ಕ್ಷೇತ್ರದ ಜನರ ಅಹ ವಾಲುಗಳಿಗೆ ಸ್ಪಂದಿಸಬೇಕೆಂಬ ಉದ್ದೇಶ
ದಿಂದ ರಾಜ್ಯದಲ್ಲೇ ಮೊತ್ತಮೊದಲ ಬಾರಿಗೆ ಗ್ರಾಮ ಮಟ್ಟದಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳ ಲಾಗುತ್ತಿದೆ. ಎಲ್ಲ ಇಲಾಖಾ ಅಧಿಕಾರಿ ಗಳನ್ನು ಒಳಗೊಂಡ ಇಡೀ ಸರಕಾರವೇ ಗ್ರಾಮಕ್ಕೆ ಆಗಮಿಸು ವುದರಿಂದ ಜನರು ಇದರ ಸದುಪಗಪಡಿಸಿಕೊಳ್ಳಬೇಕು ಎಂದರು.
ಗ್ರಾಮಗಳಿಗೆ ಮಹತ್ವ
ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿ ಕೋಟ್ಯಂತರ ರೂ. ಅನುದಾನದಿಂದ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ಬಿಪಿಎಲ್ ಕಾರ್ಡ್ ಪಡೆಯಲು ಸೂಕ್ತ ಅನುಕೂಲ ಕಲ್ಪಿಸಿದೆ. ಬಸವ ವಸತಿ ಅನುದಾನ ಹೆಚ್ಚಿಸಿದೆ, ವಿವಿಧ ಭಾಗ್ಯಗಳನ್ನು ಕರುಣಿಸಿದೆ ಎಂದು ಪ್ರಮೋದ್ ಅವರು ಹೇಳಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಅಕ್ರಮ ಸಕ್ರಮ- ಸಮಿತಿ ಅಧ್ಯಕ್ಷ ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸದಸ್ಯರಾದ ಗೋಪಿ ಕೆ. ನಾಯ್ಕ, ಸುಧೀರ್ ಕುಮಾರ್ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಆಶಾ ಕೋಟ್ಯಾನ್, ಉಪಾಧ್ಯಕ್ಷ ರಮೇಶ್ ಪೂಜಾರಿ, ಸದಸ್ಯರು, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಕೆಡಿಪಿ ಸದಸ್ಯ ಉಮೇಶ್ ಎ. ನಾಯ್ಕ ಸ್ವಾಗತಿಸಿ, ನಾಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ