ಅಭಿವೃದ್ಧಿಯತ್ತ ಮುಂಡಾಜೆಯ ರುದ್ರಭೂಮಿ


Team Udayavani, Feb 22, 2017, 3:11 PM IST

2102ble8ph.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಗಾಂಧೀ ಗ್ರಾಮ ಪುರಸ್ಕಾರವನ್ನು ಪಡೆದ ಗ್ರಾ. ಪಂ. ಮುಂಡಾಜೆ. ಆದರೆ ಮುಂಡಾಜೆಯ ರುದ್ರಭೂಮಿ ತೀರಾ ನಿರ್ಲಕ್ಷ್ಯಕ್ಕೊಳಗಾಗಿತ್ತು. ಇದೀಗ ಗ್ರಾ.ಪಂ, ವಿವಿಧ ಸಂಘ ಸಂಸ್ಥೆಗಳು ಮತ್ತು ಊರಿನ ಜನರ ಸಹಕಾರದೊಂದಿಗೆ ರುದ್ರಭೂಮಿಗೆ ಕಾಯಕಲ್ಪ ನೀಡಲಾಗುತ್ತಿದೆ.

ಮೇಲ್ಭಾಗದ ತಗಡು ಶೀಟು ತೂತು ಬಿದ್ದು  ಮಳೆಗಾಲದಲ್ಲಿ ಸುಡುತ್ತಿರುವ ಹೆಣದ ಮೇಲೆ ನೀರು ತೊಟ್ಟಿಕ್ಕುತ್ತಿತ್ತು. ಅಲ್ಲಲ್ಲಿ ಅರ್ಧ ಸುಟ್ಟ ಕಟ್ಟಿಗೆ ತುಂಡು, ಪ್ಲಾಸ್ಟಿಕ್‌, ಪೇಪರ್‌, ಬಟ್ಟೆ ಚೂರುಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿತ್ತು. ಬಾಗಿಲಿಲ್ಲದ ಕೊಠಡಿ, ನೀರು ಬಾರದ ನಳ್ಳಿ, ಕುಳಿತುಕೊಳ್ಳಲಾಗದ ವಠಾರ ಮೊದಲಾದ ದುರವಸ್ಥೆಯಿಂದ ಕೂಡಿದ್ದ ರುದ್ರಭೂಮಿಯ ಅಭಿವೃದ್ಧಿಗಾಗಿ ಸಮಿತಿ ರಚಿಸಲಾಯಿತು. ಮುಂಡಾಜೆ ಗ್ರಾ. ಪಂ., ಉದ್ಯೋಗ ಖಾತರಿ ಯೋಜನೆ, ಮುಂಡಾಜೆ ಸಹಕಾರಿ ಸಂಘ, ವಿವಿಧ ಸಂಘ ಸಂಸ್ಥೆಗಳು, ಊರವರ ಸಹಕಾರದೊಂದಿಗೆ ರುದ್ರಭೂಮಿಯ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯಾಭಿವೃದ್ಧಿ ವತಿಯಿಂದ ಸಿಲಿಕಾನ್‌ ಛೇಂಬರ್‌ ಅಳವಡಿಸಿ ತ್ವರಿತ ಶವದಹನಕ್ಕೆ ಅನುಕೂಲತೆ ಕಲ್ಪಿಸಲಾಗಿದೆ. ರುದ್ರಭೂಮಿಯ ಪರಿಸರದಲ್ಲಿ ಸುಮಾರು 400 ಅಡಿಕೆ ಗಿಡ, 30ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ನಾಟಿ ಮಾಡಲಾಗಿದೆ. ನಾದುರಸ್ತಿಯಲ್ಲಿದ್ದ ರಸ್ತೆಗೆ ಕಾಂಕ್ರೀಟು ಹಾಕಲಾಗಿದೆ.

ಆಗಬೇಕಾಗಿರುವುದು
ರುದ್ರಭೂಮಿಯ ಪ್ರವೇಶಕ್ಕೆ ಗೇಟಿನ ವ್ಯವಸ್ಥೆ, ಆಫೀಸು, ಸ್ನಾನಗೃಹ, ಶೌಚಾಲಯ, ಕಟ್ಟಿಗೆ ಸಂಗ್ರಹಕ್ಕೆ ಕೊಠಡಿ, ಎದುರು ಬದಿಯಿಂದ ಆವರಣ ಗೋಡೆ ನಿರ್ಮಾಣ, ನೆಲಕ್ಕೆ ಇಂಟರ್‌ಲಾಕ್‌ ಅಳವಡಿಕೆ, ದಾರಿದೀಪದ ವ್ಯವಸ್ಥೆ, ಹರಿಶ್ಚಂದ್ರನ ಪ್ರತಿಕೃತಿ, ರುದ್ರಮೂರ್ತಿಯ ಪ್ರತಿಮೆ ಸ್ಥಾಪನೆ, ಖಾಲಿ ಜಾಗದಲ್ಲಿ ಉದ್ಯಾನವನ್ನು ಮಾಡುವ ಇರಾದೆಯೂ ಇದೆ. ವಿದ್ಯುತ್‌, ನಳ್ಳಿನೀರು, ಕೊಳವೆಬಾವಿ, ಕುಳಿತುಕೊಳ್ಳಲು ವಿಶ್ರಾಂತಿ ತಾಣ, ಕೊಠಡಿ, ಹೆಣವನ್ನು ಸ್ನಾನ ಮಾಡಿಸಲು ವ್ಯವಸ್ಥೆಯನ್ನು ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಮೇ ತಿಂಗಳ ಕೊನೆಗೆ ಲೋಕಾರ್ಪಣೆಗೆ ಸಿದ್ಧವಾಗಲಿದೆ.

ಸ್ವತ್ಛತೆಗೆ ಆದ್ಯತೆ
ಈ ಹಿಂದೆ ಶಿಥಿಲಾವಸ್ಥೆಯಲ್ಲಿದ್ದುದರಿಂದ ಮಳೆಗಾಲದಲ್ಲಿ ಇಲ್ಲಿ ಶವ ದಹನ ಮಾಡಲು ಕಷ್ಟವಾಗುತ್ತಿತ್ತು. ಆದ್ದರಿಂದ ಗ್ರಾ.ಪಂ.ನಲ್ಲಿ ಸಭೆ ನಡೆಸಿ ಎನ್‌ಆರ್‌ಇಜಿ, ಗ್ರಾ.ಪಂ., ಸಂಘ ಸಂಸ್ಥೆಗಳು, ಊರವರ ಸಹಕಾರದಲ್ಲಿ ರುದ್ರಭೂಮಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸ್ವತ್ಛತೆಗೆ ಹೆಚ್ಚಿನ ಆದ್ಯತೆ ಯನ್ನು ನೀಡಲಾಗುವುದು.  ಶಾಸಕರು ಹಾಗೂ ಜಿ.ಪಂ.ನಿಂದ ಅನುದಾನ ಮಂಜೂರು ಮಾಡುವಂತೆ ವಿನಂತಿಸಲಾಗುವುದು.

– ರಾಮಣ್ಣ ಶೆಟ್ಟಿ ಅಗರಿ, ಅಧ್ಯಕ್ಷರು, ರುದ್ರಭೂಮಿ ಅಭಿವೃದ್ಧಿ ಸಮಿತಿ

5 ಲ.ರೂ. ಅನುದಾನ ಬೇಕಿದೆ
ಮಾದರಿ ರುದ್ರಭೂಮಿಯ ನೀಲಿ ನಕಾಶೆ ಯೋಜನೆ 20 ಲ.ರೂ.ಗಳಾಗಿದ್ದು ಈಗಾಗಲೇ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 4.25 ಲ.ರೂ. ವೆಚ್ಚದ ಶ್ಮಶಾನ ಕಟ್ಟಡ, 6 ಲ.ರೂ. ವೆಚ್ಚದಲ್ಲಿ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ, ಭೂ ಸಮತಟ್ಟು ಮಾಡಲಾಗಿದೆ. 1.50 ಲ.ರೂ. ವೆಚ್ಚದಲ್ಲಿ ಶವ ದಹನದ ಬಗ್ಗೆ ಯಂತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ನೀಡಿದ್ದಾರೆ. ತಾ.ಪಂ.ನಿಂದಲೂ ಅನುದಾನ ಲಭಿಸಿದೆ. ಇನ್ನೂ ಅನೇಕ ಕೆಲಸಗಳು ಬಾಕಿಯಿದ್ದು ಸುಮಾರು 5 ಲ.ರೂ. ಅನುದಾನ ಬೇಕಾಗಿದೆ. ಈ ಬಗ್ಗೆ ದೇಣಿಗೆಯನ್ನು ಸಂಗ್ರಹಿಸಿ ಅಭಿವೃದ್ಧಿಪಡಿಸಲು ಗ್ರಾ. ಪಂ. ಮತ್ತು ರುದ್ರಭೂಮಿ ಸಮಿತಿ ಸಭೆಯಲ್ಲಿ ನಿರ್ಣಯಿಸಿದೆ.

– ಸಂಜೀವ ನಾಯ್ಕ, ಅಭಿವೃದ್ಧಿ ಅಧಿಕಾರಿ, ಗ್ರಾ. ಪಂ. ಮುಂಡಾಜೆ

– ಗುರು ಮುಂಡಾಜೆ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.