ಕಂತಿಹೊಂಡ ಕಾಂಕ್ರೀಟ್, ಡಾಮರು ಘಟಕ ಪರಿಸರಕ್ಕೆ ಹಾನಿ: ಪ್ರತಿಭಟನೆ
Team Udayavani, Feb 23, 2017, 12:26 PM IST
ಕುಂದಾಪುರ: ಐಆರ್ಬಿ ಸಂಸ್ಥೆ ಕುಂದಾಪುರ – ಕಾರವಾರ ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಅರೆಹೊಳೆಬಳಿಯ ಕಂತಿಹೊಂಡದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ಹಾಗೂ ಡಾಮರು ಘಟಕದಿಂದ ಬರುವ ಧೂಳಿನಿಂದಾಗಿ ಪರಿಸರ ಹಾಳಾಗಿದ್ದಲ್ಲದೇ ಪರಿಸರದ ಎರಡು ರಸ್ತೆಗಳಿಗೆ ಹಾನಿಯಾಗಿದ್ದು ಅದರ ಬಗ್ಗೆ ಕೂಡಲೇ ಪರಿಹಾರ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಆಗ್ರಹಿಸಿ ಅರೆಹೊಳೆ ಹಾಗೂ ಉಳ್ಳೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.
ಈ ಪ್ಲಾಂಟ್ ಹೊರಸೂಸುವ ಜಲ್ಲಿಕಲ್ಲುಗಳು ಹಾಗೂ ಇತರ ವಸ್ತುಗಳಿಂದ ಪರಿಸರದ ಅರೆಹೊಳೆ ಹಾಗೂ ಉಳ್ಳೂರಿಗೆ ಸಾಗುವ ರಸ್ತೆ ಸಂಪೂರ್ಣ ಹಾಳಾಗಿದ್ದು ಕೂಡಲೇ ಇಲ್ಲಿ ರಸ್ತೆ ಪುನರ್ ನಿರ್ಮಾಣ ಮಾಡಿಕೊಡಬೇಕು ಹಾಗೂ ಈ ಪ್ಲಾಂಟ್ ಸುತ್ತ ಮೆಸ್ ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಐಆರ್ಬಿ ಕಂಪನಿಯ ಕಾಮಗಾರಿ ಮೇಲುಸ್ತುವಾರಿ ಯೋಗೀಂದ್ರ ಅವರು ಈ ಬಗ್ಗೆ ಕಂಪನಿಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಹದಿನೈದು ದಿನದ ಒಳಗೆ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಹಕ್ಕಾಡಿ ಜಗದೀಶ ಪೂಜಾರಿ, ಪ್ರಕಾಶ್ ದೇವಾಡಿಗ, ಕಿಶೋರ್ ಶೆಟ್ಟಿ, ಸುಕೇಶ ದೇವಾಡಿಗ, ದಿನೇಶ್ ಆಚಾರ್, ರೋಶನ್ ಪೂಜಾರಿ ನೇತೃತ್ವ ವಹಿಸಿದ್ದು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ