ಜೋಡಿ ಕೊಲೆ: ಇಬ್ಬರ ಅಪರಾಧ ಸಾಬೀತು


Team Udayavani, Feb 23, 2017, 12:42 PM IST

judgement.jpg

ಪುತ್ತೂರು: ಕೋಡಿಂಬಾಳ ಗ್ರಾಮದ ಉಂಡಿಲದಲ್ಲಿ ನಾಲ್ಕೂವರೆ ವರ್ಷಗಳ‌ ಹಿಂದೆ ದಂಪತಿಯನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದ ಇಬ್ಬರು ಆರೋಪಿಗಳು ಅಪರಾಧಿ ಎಂದು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ 
ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಆರೋಪಿಗಳಿಗೆ ಫೆ. 25ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

ಸೋಮವಾರ ಪೇಟೆ ತಾಲೂಕಿನ ಮಹಮ್ಮದ್‌ ರಫೀಕ್‌ ಅಲಿಯಾಸ್‌ ರಫೀಕ್‌ ಮತ್ತು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ನುರಿಯಾಳು ನಿವಾಸಿ ಮಹಮ್ಮದ್‌ ಕಮಲುದ್ದೀನ್‌ ಯಾನೆ ಸೈದು ಕೊಲೆ ಪ್ರಕರಣದ ಅಪರಾಧಿಗಳು. ಕೋಡಿಂಬಾಳ ಉಂಡಿಲ ನಿವಾಸಿಗಳಾದ ಬೇಬಿ ಥಾಮಸ್‌ (58) ಮತ್ತು ಅವರ ಪತ್ನಿ ಮೇರಿ ಥಾಮಸ್‌ (45) ಕೊಲೆಯಾದ ದಂಪತಿಗಳು.

ಘಟನೆ ವಿವರ
2012ರ  ಸೆ. 25ರಂದು ರಾತ್ರಿ 12 ಗಂಟೆಯ ಸಮಯದಲ್ಲಿ ಈ ಇಬ್ಬರು ಆರೋಪಿಗಳು ಉಂಡಿಲದ ಬೇಬಿ ಥಾಮಸ್‌ ಅವರ ಮನೆ ಮುಂಭಾಗಕ್ಕೆ ಬಂದು ಬೈಕ್‌ ಹಾಳಾಗಿದ್ದು, ಅಲ್ಲಿಂದ ಒಂದೂವರೆ ಕಿ.ಮೀ. ದೂರದಲ್ಲಿನ ಆರೋಪಿಯ ಪತ್ನಿಯ ಮನೆಗೆ ಹೋಗಬೇಕಾಗಿರುವುದಾಗಿ ಅವರು ಬೇಬಿ ಥಾಮಸ್‌ ಅವರ ಬಳಿ ಹೇಳಿದ್ದರು. ಆರೋಪಿಗಳು ತೆರಳಬೇಕಾದ ಸ್ಥಳ ಪರಿಚಯವಿದ್ದ ಕಾರಣ, ಬೇಬಿ ಥಾಮಸ್‌ ಅವರು ತನ್ನ ಇಂಡಿಕಾ ಕಾರಿನಲ್ಲಿ ಈ ಇಬ್ಬರನ್ನು ಕರೆದುಕೊಂಡು ಹೋಗಿದ್ದರು. ಬೊಳ್ಳೂರು ಕ್ರಾಸ್‌ ಸಮೀಪ ತಲುಪಿದಾಗ ಆರೋಪಿಗಳು ಕಾರು ನಿಲ್ಲಿಸುವಂತೆ ಸೂಚಿಸಿದ್ದರು.

ಈ ವೇಳೆ ಹಿಂಬದಿ ಆಸನದಲ್ಲಿ ಮಹಮ್ಮದ್‌ ರಫೀಕ್‌  ಬೇಬಿ ಥಾಮಸ್‌ ಅವರಿಗೆ ಚೂರಿಯಿಂದ ಇರಿದಿದ್ದಾನೆ. ಅನಂತರ ಬೇಬಿ ಥಾಮಸ್‌ ಅವರ ಎರಡು ಕೈಗಳನ್ನು ಹಿಂದಕ್ಕೆ ಎಳೆದು ಬಿಗಿಯಾಗಿ ಹಿಡಿದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಇನ್ನೋರ್ವ ಆರೋಪಿ ಕಮಾಲುದ್ದಿನ್‌ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.

ಅನಂತರ ಮೃತದೇಹವನ್ನು ಆರೋಪಿಗಳು ಬೇಬಿ ಥಾಮಸ್‌ ಅವರ ಮನೆಗೆ ತಂದಿದ್ದರು. ಈ ವೇಳೆ ಆರೋಪಿಗಳು ಮನೆ ಬಾಗಿಲು ಒಳಹೊಕ್ಕಿ ಬೇಬಿ ಥಾಮಸ್‌ ಅವರ ಪತ್ನಿ ಮೇರಿ ಥಾಮಸ್‌ ಅವರ ಕುತ್ತಿಗೆ ಇರಿದು ಕೊಲೆ ಮಾಡಿದ್ದಾರೆ.
ಬಳಿಕ ಮೃತದೇಹವನ್ನು ಮನೆಯೊಳಗೆ ಇರಿಸಿದ್ದರು. ಆರೋಪಿಗಳು ಬೇಬಿ ಥಾಮಸ್‌ ಅವರ ಕುತ್ತಿಗೆಯಲ್ಲಿದ್ದ 90,800 ರೂ. ಮೌಲ್ಯದ ಚೈನ್‌, ಮೇರಿ ಥಾಮಸ್‌ ಅವರ ಬೆಂಡೋಲೆೆ, ಮನೆಯ ಕಪಾಟಿನಲ್ಲಿದ್ದ ನಗದು, ಮೊಬೈಲ್‌ ಅನ್ನು ಎಗರಿಸಿ ಪರಾರಿ ಆಗಿದ್ದರು.

ಪ್ರಕರಣವನ್ನು ಕೈಗೆತ್ತಿಕೊಂಡ ಕಡಬ ಠಾಣಾ ಪೊಲೀಸರು ಒಂದು ತಿಂಗಳ ಅನಂತರ ಆರೋಪಿಗಳು ಕೊಲೆಯಾದ ಮನೆಯಿಂದ ಕದ್ದೊಯ್ದ ಮೊಬೈಲ್‌ ಸಂಖ್ಯೆಯನ್ನು ಭೇದಿಸಿ ಈ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಮೀಪ ಬಂಧಿಸಿದ್ದರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸಾಕ್ಷé ವಿಚಾರಣೆಯ ಸಂದರ್ಭ ಆರೋಪಿಗಳು ದರೋಡೆಗೈದ ಚಿನ್ನಾಭರಣವನ್ನು ಸೋಮವಾರ ಪೇಟೆಯಲ್ಲಿ ಮಾರಾಟ ಮಾಡಿರುವುದು ಬೆಳಕಿಗೆ ಬಂದು ಈ ಇಬ್ಬರ ಮೇಲಿನ ಆರೋಪ ದೃಢಪಟ್ಟಿದೆ.  ಬುಧವಾರ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಂ. ರಾಮಚಂದ್ರ ಅವರ ನ್ಯಾಯಪೀಠ ಆರೋಪಿಗಳಿಬ್ಬರು ಅಪರಾಧಿಗಳು ಎಂದು ತೀರ್ಪು ನೀಡಿದೆ. 

ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಎಂ. ಉದಯಕುಮಾರ್‌ ಅವರು ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.